ಮಂಡ್ಯ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಸಂವಿಧಾನದ ಆಶಯದಂತೆ ಕೇಂದ್ರದ ನರೇಂದ್ರ ಮೋದಿ ಅವರ ಸರ್ಕಾರ ಕಾರ್ಯ ನಿರ್ವಹಿಸುತ್ತಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಈ ಬಗ್ಗೆ ಮಂಡ್ಯದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೇವೇಗೌಡರು ದಲಿತರ ಉದ್ಧಾರಕ್ಕಾಗಿ ಅನೇಕ ಉತ್ತಮ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದರು. ಗಂಗಾ ಕಲ್ಯಾಣ ಯೋಜನೆಯನ್ನು ಅವರು ಜಾರಿಗೆ ತಂದು ಅನೇಕರಿಗೆ ಸಹಾಯ ಮಾಡಿದ್ದರು. ಸಚಿವರಾಗಿ, ಸಿಎಂ ಆಗಿ, ಪ್ರಧಾನಿಯಾಗಿ ದಲಿತರ ಉದ್ಧಾರಕ್ಕೆ ಬಹುದೊಡ್ಡ ಕಾಣಿಕೆ ನೀಡಿದ್ದಾರೆ ಎಂದು ಹೇಳಿದರು.
ಮೊದಲು ಮೀಸಲು ಸೌಲಭ್ಯ ಕೇವಲ ವಿಧಾನಸಭೆ, ಲೋಕಸಭೆ ಕ್ಷೇತ್ರಗಳಿಗೆ ಮೀಸಲಾಗಿತ್ತು. ದೇವೇಗೌಡರು ಆ ಮೀಸಲು ಸೌಲಭ್ಯವನ್ನು ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಸೇರಿದಂತೆ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿಯೂ ಜಾರಿಗೆ ತಂದರು. ಬಳಿಕ ಹಾಸನ ಜಿಲ್ಲಾ ಪಂಚಾಯಿತಿ ಅಧ್ಯಕ್ಷರನ್ನಾಗಿ ಎಂಎ ಪದವೀಧರನಾಗಿದ್ದ ಒಬ್ಬ ದಲಿತ ಯುವಕನನ್ನು ಮಾಡಿದ್ದರು. ತಳಮಟ್ಟದ ಸಮುದಾಯಗಳ ವಿದ್ಯಾವಂತರನ್ನು ಗುರುತಿಸಿ ಅಧಿಕಾರ ನೀಡುವ ಕೆಲಸವನ್ನು ದೇವೇಗೌಡ ಅವರೇ ಮಾಡಿದ್ದರು ಎಂದು ಮಾಹಿತಿ ನೀಡಿದರು.
ಮಕ್ಕಳೊಂದಿಗೆ ಸರ್ಕಾರಿ ಕಾಲೇಜುಗಳತ್ತ ಮುಖ ಮಾಡಿದ ಪೋಷಕರು ಗಿರೀಶ್ ಹುಣಸೂರು ಮೈಸೂರು : ೨೦೨೫-೨೬ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ…
ದಕ್ಷಿಣದ ರಾಜ್ಯಗಳಲ್ಲಿ ತನ್ನ ಪಾರುಪತ್ಯ ಭದ್ರಗೊಳಿಸಲು ಬಿಜೆಪಿಗೆ ಕರ್ನಾಟಕ ಅವಶ್ಯ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ…
ತಮಿಳುನಾಡಿನ ಮುಖ್ಯಮಂತ್ರಿಯಾಗಿ ಜೋಸೆಫ್ ವಿಜಯ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಆ ಮೂಲಕ ತಮಿಳುನಾಡಿನಲ್ಲಿ ವಿಜಯ್ ನೇತೃತ್ವದ ಟಿವಿಕೆ ಮಿತ್ರ ಪಕ್ಷಗಳ…
ಕಟ್ಟಡವನ್ನು ಜೀರ್ಣೋದ್ಧಾರ ಮಾಡಬೇಕೋ? ನೆಲಸಮಗೊಳಿಸಿ ಹೊಸದಾಗಿ ನಿರ್ಮಿಸಬೇಕೋ? ಸುಪ್ರೀಂ ತೀರ್ಪು ಎದುರು ನೋಡುತ್ತಿರುವ ಪಾಲಿಕೆ ಚಿರಂಜೀವಿ ಸಿ.ಹುಲ್ಲಹಳ್ಳಿ ಮೈಸೂರು :…
ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…