ಮಂಡ್ಯ

ಮೈಸೂರಿನ ಕೇಂದ್ರೀಯ ಪೆಟ್ರೋ ಕೆಮಿಕಲ್ಸ್ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆಯಲ್ಲಿ ಹೊಸ ಕೋರ್ಸ್‌ ಆರಂಭ

ಮಂಡ್ಯ : ಪಾಲಿಮರ್, ಪ್ಲಾಸ್ಟಿಕ್ ಕೈಗಾರಿಕೆ ಕುರಿತ ಕೋರ್ಸ್‌ಗಳನ್ನು ಹೊಂದಿರುವ ಮೈಸೂರಿನ ಕೇಂದ್ರೀಯ ಪೆಟ್ರೋ ಕೆಮಿಕಲ್ಸ್ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆಯಲ್ಲಿ ಡಿಪ್ಲೊಮಾ ಇನ್ ಪ್ಲಾಸ್ಟಿಕ್ ಟೆಕ್ನಾಲಜಿ ಮತ್ತು ಡಿಪ್ಲೊಮಾ ಇನ್ ಪ್ಲಾಸ್ಟಿಕ್ ಮೌಲ್ಡ್ ಟೆಕ್ನಾಲಜಿ ಎಂಬ ಎರಡು ಹೊಸ ಕೋರ್ಸ್‌ಗಳನ್ನು ಆರಂಭಿಸಿದೆ ಎಂದು ಸಂಸ್ಥೆಯ ಸಹಾಯಕ ತಾಂತ್ರಿಕ ಅಧಿಕಾರಿ ಲಕ್ಷ್ಮಣ್ ಹೇಳಿದರು.

ಹತ್ತನೇ ತರಗತಿ ಉತ್ತೀರ್ಣರಾದವರು ಮೂರು ವರ್ಷದ ಕೋರ್ಸ್‌ಗೆ ಸೇರಬಹುದು. ಪಿಯುಸಿ (ವಿಜ್ಞಾನ) ಅಥವಾ ಐಟಿಐ ಓದಿರುವವರು ಎರಡು ವರ್ಷದ ಕೋರ್ಸ್‌ಗಳನ್ನು ಆಯ್ಕೆ ಮಾಡಿಕೊಳ್ಳಬಹುದು ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

೨೦೨೫-೨೬ನೇ ಸಾಲಿನ ಡಿಪ್ಲೊಮೊ ಕೋರ್ಸ್‌ಗಳಿಗೆ ಪ್ರವೇಶ ಆರಂಭಗೊಂಡಿದ್ದು, ಮೈಸೂರಿನ ಸಿಪೆಟ್‌ನ ಕೋರ್ಸ್‌ಗಳಿಗೆ ಆಯ್ಕೆ ಮಾಡುವ ಸಮಯದಲ್ಲಿ ಕರ್ನಾಟಕದವರಿಗೆ ಮೊದಲ ಆದ್ಯತೆ

ನೀಡಲಾಗುವುದು. ಇಲ್ಲಿ ವ್ಯಾಸಂಗ ಮಾಡಿದ ಪ್ರತಿಯೊಬ್ಬ ವಿದ್ಯಾರ್ಥಿಗೂ ಉದ್ಯೋಗ ದೊರಕಿದೆ. ಅನೇಕರು ಸ್ವ-ಉದ್ಯೋಗ ಆರಂಭಿಸಿದ್ದಾರೆ. ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಹಾಸ್ಟೆಲ್ ವ್ಯವಸ್ಥೆ, ವಿದ್ಯಾರ್ಥಿವೇತನದ ಸೌಲಭ್ಯವೂ ಇದೆ. ಪ್ರತಿ ಸೆಮಿಸ್ಟರ್‌ಗೆ ೨೦ ಸಾವಿರ ರೂ.ವರೆಗೆ ಖರ್ಚಾಗಲಿದೆ ಎಂದು ತಿಳಿಸಿದರು.

ಪ್ಲಾಸ್ಟಿಕ್ ವೈವಿಧ್ಯಮಯ ಬಳಕೆ, ಪ್ಲಾಸ್ಟಿಕ್ ಮೌಲ್ಡಿಂಗ್, ಪ್ಲಾಸ್ಟಿಕ್ ಸಂಸ್ಕರಣೆ, ಪ್ಲಾಸ್ಟಿಕ್ ಗುಣಮಟ್ಟ ಪರಿಶೀಲನೆ, ಆಧುನಿಕ ವಿನ್ಯಾಸದಲ್ಲಿ ಪ್ಲಾಸ್ಟಿಕ್ ವಸ್ತುಗಳ ತಯಾರಿಕ, ಪ್ಲಾಸ್ಟಿಕ್ ಮರು ಬಳಕೆ ವಿಧಾನ, ಪ್ಲಾಸ್ಟಿಕ್ ಪೈಪ್‌ಗಳು ಮತ್ತು ಇನ್ನಿತರೆ ವಸ್ತುಗಳ ತಯಾರಿಕೆ, ಮಾರುಕಟ್ಟೆ, ದರ ಪರಿಷ್ಕರಣೆ ಕುರಿತಂತೆ ಕಲಿಸಿಕೊಡಲಾಗುವುದು ಎಂದರು.

ಆಟೋಮೊಬೈಲ್ ಕೈಗಾರಿಕೆಗಳು, ವಾಹನದ ಬಿಡಿ ಭಾಗಗಳನ್ನು ತಯಾರಿಸುವ ಉದ್ಯಮಗಳು, ಪಿವಿಸಿ ಪೈಪ್ ತಯಾರಿಕಾ ಕಂಪೆನಿಗಳು ಮತ್ತು ವಿದ್ಯುನ್ಮಾನ, ಪ್ಲಾಸ್ಟಿಕ್ ಉತ್ಪಾದನಾ ಕಂಪೆನಿಗಳು, ಆಹಾರೋದ್ಯಮ ಕ್ಷೇತ್ರಗಳಲ್ಲಿ ಉದ್ಯೋಗ ಪಡೆಯಬಹುದು ಎಂದು ವಿವರಿಸಿದರು.

ಹಿರಿಯ ಸಹಾಯಕ ಮಹೇಶ್ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಡಿ.24ರಂದು ಮಹಾಸಭಾದಿಂದ ಶಾಮನೂರು ನುಡಿ ನಮನ: ಈಶ್ವರ ಖಂಡ್ರೆ

ಬೆಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಹಿರಿಯ ಶಾಸಕ, ಕೊಡುಗೈ ದಾನಿ ಡಾ.ಶಾಮನೂರು ಶಿವಶಂಕರಪ್ಪ ಅವರಿಗೆ ಇದೇ 24ರಂದು ಅಖಿಲ ಭಾರತ…

33 mins ago

ಸೋನಿಯಾ ಗಾಂಧಿ, ರಾಹುಲ್‌ ಗಾಂಧಿಗೆ ಹೈಕೋರ್ಟ್‌ನಿಂದ ನೋಟಿಸ್‌

ನವದೆಹಲಿ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹಾಗೂ ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ…

43 mins ago

6 ತಿಂಗಳಿಂದ ಸಂಬಳ ಕೊಡದ ಸರ್ಕಾರ: ರಾಜೀನಾಮೆ ಕೊಟ್ಟ ವೈದ್ಯ

ಮಂಗಳೂರು: ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡಿದ್ದ ಕೊಲ್ಲಮೊಗ್ರು ಪ್ರಾಥಮಿಕ ಕೇಂದ್ರದ ವೈದ್ಯಾಧಿಕಾರಿಗಳು ಆರು ತಿಂಗಳಿಂದ ಸರಿಯಾಗಿ ಸಂಬಳ ಆಗದ ಕಾರಣ…

1 hour ago

ಸರಗೂರು ತಾಲ್ಲೂಕು ಕಚೇರಿಯಲ್ಲಿ ಆರ್‌ಡಿಎಕ್ಸ್‌ ಸ್ಫೋಟಕ ಇಟ್ಟಿರುವುದಾಗಿ ಬೆದರಿಕೆ

ಮೈಸೂರು: ಮೈಸೂರು ಜಿಲ್ಲೆ ಸರಗೂರಿನ ತಾಲ್ಲೂಕು ಕಚೇರಿ ಹಾಗೂ ಹಾಸನದ ಆಲೂರು ತಾಲ್ಲೂಕು ಕಚೇರಿಗಳಿಗೆ ಇ-ಮೇಲ್‌ ಮೂಲಕ ಬಾಂಬ್‌ ಬೆದರಿಕೆ…

2 hours ago

ಕುಂಬಳಕಾಯಿ ಕಳ್ಳ ಅಂದರೆ ಬಿಜೆಪಿಯವರು ಯಾಕೆ ಹೆಗಲು ಮುಟ್ಟಿ ನೋಡಿಕೊಳ್ಳುತ್ತಿದ್ದಾರೆ? ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಮೈಸೂರು: ಪ್ರಚೋದನಕಾರಿ ಭಾಷಣ ಮಾಡುವವರು ಮಾತ್ರ ವಿರೋಧಿಸುತ್ತಾರೆ. ಪ್ರಚೋದನಾಕಾರಿ ಭಾಷಣ ಮಾಡದೆ ಹೋದರೆ ಸುಮ್ಮನೆ ಪ್ರಕರಣ ದಾಖಲಿಸುವುದಿಲ್ಲ ಎಂದರು. ಬಿಜೆಪಿಯವರು…

2 hours ago

ಮೈಸೂರು| ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು: ಸಿಎಂ ಸಿದ್ದರಾಮಯ್ಯ ಅವರಿಂದು ತಮ್ಮ ನಿವಾಸದ ಬಳಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಕೆಲ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ಸೂಚಿಸಿದ…

2 hours ago