ಮಂಡ್ಯ

ಮೈಸೂರಿನ ಕೇಂದ್ರೀಯ ಪೆಟ್ರೋ ಕೆಮಿಕಲ್ಸ್ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆಯಲ್ಲಿ ಹೊಸ ಕೋರ್ಸ್‌ ಆರಂಭ

ಮಂಡ್ಯ : ಪಾಲಿಮರ್, ಪ್ಲಾಸ್ಟಿಕ್ ಕೈಗಾರಿಕೆ ಕುರಿತ ಕೋರ್ಸ್‌ಗಳನ್ನು ಹೊಂದಿರುವ ಮೈಸೂರಿನ ಕೇಂದ್ರೀಯ ಪೆಟ್ರೋ ಕೆಮಿಕಲ್ಸ್ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆಯಲ್ಲಿ ಡಿಪ್ಲೊಮಾ ಇನ್ ಪ್ಲಾಸ್ಟಿಕ್ ಟೆಕ್ನಾಲಜಿ ಮತ್ತು ಡಿಪ್ಲೊಮಾ ಇನ್ ಪ್ಲಾಸ್ಟಿಕ್ ಮೌಲ್ಡ್ ಟೆಕ್ನಾಲಜಿ ಎಂಬ ಎರಡು ಹೊಸ ಕೋರ್ಸ್‌ಗಳನ್ನು ಆರಂಭಿಸಿದೆ ಎಂದು ಸಂಸ್ಥೆಯ ಸಹಾಯಕ ತಾಂತ್ರಿಕ ಅಧಿಕಾರಿ ಲಕ್ಷ್ಮಣ್ ಹೇಳಿದರು.

ಹತ್ತನೇ ತರಗತಿ ಉತ್ತೀರ್ಣರಾದವರು ಮೂರು ವರ್ಷದ ಕೋರ್ಸ್‌ಗೆ ಸೇರಬಹುದು. ಪಿಯುಸಿ (ವಿಜ್ಞಾನ) ಅಥವಾ ಐಟಿಐ ಓದಿರುವವರು ಎರಡು ವರ್ಷದ ಕೋರ್ಸ್‌ಗಳನ್ನು ಆಯ್ಕೆ ಮಾಡಿಕೊಳ್ಳಬಹುದು ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

೨೦೨೫-೨೬ನೇ ಸಾಲಿನ ಡಿಪ್ಲೊಮೊ ಕೋರ್ಸ್‌ಗಳಿಗೆ ಪ್ರವೇಶ ಆರಂಭಗೊಂಡಿದ್ದು, ಮೈಸೂರಿನ ಸಿಪೆಟ್‌ನ ಕೋರ್ಸ್‌ಗಳಿಗೆ ಆಯ್ಕೆ ಮಾಡುವ ಸಮಯದಲ್ಲಿ ಕರ್ನಾಟಕದವರಿಗೆ ಮೊದಲ ಆದ್ಯತೆ

ನೀಡಲಾಗುವುದು. ಇಲ್ಲಿ ವ್ಯಾಸಂಗ ಮಾಡಿದ ಪ್ರತಿಯೊಬ್ಬ ವಿದ್ಯಾರ್ಥಿಗೂ ಉದ್ಯೋಗ ದೊರಕಿದೆ. ಅನೇಕರು ಸ್ವ-ಉದ್ಯೋಗ ಆರಂಭಿಸಿದ್ದಾರೆ. ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಹಾಸ್ಟೆಲ್ ವ್ಯವಸ್ಥೆ, ವಿದ್ಯಾರ್ಥಿವೇತನದ ಸೌಲಭ್ಯವೂ ಇದೆ. ಪ್ರತಿ ಸೆಮಿಸ್ಟರ್‌ಗೆ ೨೦ ಸಾವಿರ ರೂ.ವರೆಗೆ ಖರ್ಚಾಗಲಿದೆ ಎಂದು ತಿಳಿಸಿದರು.

ಪ್ಲಾಸ್ಟಿಕ್ ವೈವಿಧ್ಯಮಯ ಬಳಕೆ, ಪ್ಲಾಸ್ಟಿಕ್ ಮೌಲ್ಡಿಂಗ್, ಪ್ಲಾಸ್ಟಿಕ್ ಸಂಸ್ಕರಣೆ, ಪ್ಲಾಸ್ಟಿಕ್ ಗುಣಮಟ್ಟ ಪರಿಶೀಲನೆ, ಆಧುನಿಕ ವಿನ್ಯಾಸದಲ್ಲಿ ಪ್ಲಾಸ್ಟಿಕ್ ವಸ್ತುಗಳ ತಯಾರಿಕ, ಪ್ಲಾಸ್ಟಿಕ್ ಮರು ಬಳಕೆ ವಿಧಾನ, ಪ್ಲಾಸ್ಟಿಕ್ ಪೈಪ್‌ಗಳು ಮತ್ತು ಇನ್ನಿತರೆ ವಸ್ತುಗಳ ತಯಾರಿಕೆ, ಮಾರುಕಟ್ಟೆ, ದರ ಪರಿಷ್ಕರಣೆ ಕುರಿತಂತೆ ಕಲಿಸಿಕೊಡಲಾಗುವುದು ಎಂದರು.

ಆಟೋಮೊಬೈಲ್ ಕೈಗಾರಿಕೆಗಳು, ವಾಹನದ ಬಿಡಿ ಭಾಗಗಳನ್ನು ತಯಾರಿಸುವ ಉದ್ಯಮಗಳು, ಪಿವಿಸಿ ಪೈಪ್ ತಯಾರಿಕಾ ಕಂಪೆನಿಗಳು ಮತ್ತು ವಿದ್ಯುನ್ಮಾನ, ಪ್ಲಾಸ್ಟಿಕ್ ಉತ್ಪಾದನಾ ಕಂಪೆನಿಗಳು, ಆಹಾರೋದ್ಯಮ ಕ್ಷೇತ್ರಗಳಲ್ಲಿ ಉದ್ಯೋಗ ಪಡೆಯಬಹುದು ಎಂದು ವಿವರಿಸಿದರು.

ಹಿರಿಯ ಸಹಾಯಕ ಮಹೇಶ್ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

17 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

17 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

17 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

17 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

17 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

20 hours ago