New course launched at the Central Institute of Petrochemicals Engineering and Technology in Mysuru.
ಮಂಡ್ಯ : ಪಾಲಿಮರ್, ಪ್ಲಾಸ್ಟಿಕ್ ಕೈಗಾರಿಕೆ ಕುರಿತ ಕೋರ್ಸ್ಗಳನ್ನು ಹೊಂದಿರುವ ಮೈಸೂರಿನ ಕೇಂದ್ರೀಯ ಪೆಟ್ರೋ ಕೆಮಿಕಲ್ಸ್ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆಯಲ್ಲಿ ಡಿಪ್ಲೊಮಾ ಇನ್ ಪ್ಲಾಸ್ಟಿಕ್ ಟೆಕ್ನಾಲಜಿ ಮತ್ತು ಡಿಪ್ಲೊಮಾ ಇನ್ ಪ್ಲಾಸ್ಟಿಕ್ ಮೌಲ್ಡ್ ಟೆಕ್ನಾಲಜಿ ಎಂಬ ಎರಡು ಹೊಸ ಕೋರ್ಸ್ಗಳನ್ನು ಆರಂಭಿಸಿದೆ ಎಂದು ಸಂಸ್ಥೆಯ ಸಹಾಯಕ ತಾಂತ್ರಿಕ ಅಧಿಕಾರಿ ಲಕ್ಷ್ಮಣ್ ಹೇಳಿದರು.
ಹತ್ತನೇ ತರಗತಿ ಉತ್ತೀರ್ಣರಾದವರು ಮೂರು ವರ್ಷದ ಕೋರ್ಸ್ಗೆ ಸೇರಬಹುದು. ಪಿಯುಸಿ (ವಿಜ್ಞಾನ) ಅಥವಾ ಐಟಿಐ ಓದಿರುವವರು ಎರಡು ವರ್ಷದ ಕೋರ್ಸ್ಗಳನ್ನು ಆಯ್ಕೆ ಮಾಡಿಕೊಳ್ಳಬಹುದು ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
೨೦೨೫-೨೬ನೇ ಸಾಲಿನ ಡಿಪ್ಲೊಮೊ ಕೋರ್ಸ್ಗಳಿಗೆ ಪ್ರವೇಶ ಆರಂಭಗೊಂಡಿದ್ದು, ಮೈಸೂರಿನ ಸಿಪೆಟ್ನ ಕೋರ್ಸ್ಗಳಿಗೆ ಆಯ್ಕೆ ಮಾಡುವ ಸಮಯದಲ್ಲಿ ಕರ್ನಾಟಕದವರಿಗೆ ಮೊದಲ ಆದ್ಯತೆ
ನೀಡಲಾಗುವುದು. ಇಲ್ಲಿ ವ್ಯಾಸಂಗ ಮಾಡಿದ ಪ್ರತಿಯೊಬ್ಬ ವಿದ್ಯಾರ್ಥಿಗೂ ಉದ್ಯೋಗ ದೊರಕಿದೆ. ಅನೇಕರು ಸ್ವ-ಉದ್ಯೋಗ ಆರಂಭಿಸಿದ್ದಾರೆ. ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಹಾಸ್ಟೆಲ್ ವ್ಯವಸ್ಥೆ, ವಿದ್ಯಾರ್ಥಿವೇತನದ ಸೌಲಭ್ಯವೂ ಇದೆ. ಪ್ರತಿ ಸೆಮಿಸ್ಟರ್ಗೆ ೨೦ ಸಾವಿರ ರೂ.ವರೆಗೆ ಖರ್ಚಾಗಲಿದೆ ಎಂದು ತಿಳಿಸಿದರು.
ಪ್ಲಾಸ್ಟಿಕ್ ವೈವಿಧ್ಯಮಯ ಬಳಕೆ, ಪ್ಲಾಸ್ಟಿಕ್ ಮೌಲ್ಡಿಂಗ್, ಪ್ಲಾಸ್ಟಿಕ್ ಸಂಸ್ಕರಣೆ, ಪ್ಲಾಸ್ಟಿಕ್ ಗುಣಮಟ್ಟ ಪರಿಶೀಲನೆ, ಆಧುನಿಕ ವಿನ್ಯಾಸದಲ್ಲಿ ಪ್ಲಾಸ್ಟಿಕ್ ವಸ್ತುಗಳ ತಯಾರಿಕ, ಪ್ಲಾಸ್ಟಿಕ್ ಮರು ಬಳಕೆ ವಿಧಾನ, ಪ್ಲಾಸ್ಟಿಕ್ ಪೈಪ್ಗಳು ಮತ್ತು ಇನ್ನಿತರೆ ವಸ್ತುಗಳ ತಯಾರಿಕೆ, ಮಾರುಕಟ್ಟೆ, ದರ ಪರಿಷ್ಕರಣೆ ಕುರಿತಂತೆ ಕಲಿಸಿಕೊಡಲಾಗುವುದು ಎಂದರು.
ಆಟೋಮೊಬೈಲ್ ಕೈಗಾರಿಕೆಗಳು, ವಾಹನದ ಬಿಡಿ ಭಾಗಗಳನ್ನು ತಯಾರಿಸುವ ಉದ್ಯಮಗಳು, ಪಿವಿಸಿ ಪೈಪ್ ತಯಾರಿಕಾ ಕಂಪೆನಿಗಳು ಮತ್ತು ವಿದ್ಯುನ್ಮಾನ, ಪ್ಲಾಸ್ಟಿಕ್ ಉತ್ಪಾದನಾ ಕಂಪೆನಿಗಳು, ಆಹಾರೋದ್ಯಮ ಕ್ಷೇತ್ರಗಳಲ್ಲಿ ಉದ್ಯೋಗ ಪಡೆಯಬಹುದು ಎಂದು ವಿವರಿಸಿದರು.
ಹಿರಿಯ ಸಹಾಯಕ ಮಹೇಶ್ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.
ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…