ಮಂಡ್ಯ

ಮೈಸೂರಿನ ಕೇಂದ್ರೀಯ ಪೆಟ್ರೋ ಕೆಮಿಕಲ್ಸ್ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆಯಲ್ಲಿ ಹೊಸ ಕೋರ್ಸ್‌ ಆರಂಭ

ಮಂಡ್ಯ : ಪಾಲಿಮರ್, ಪ್ಲಾಸ್ಟಿಕ್ ಕೈಗಾರಿಕೆ ಕುರಿತ ಕೋರ್ಸ್‌ಗಳನ್ನು ಹೊಂದಿರುವ ಮೈಸೂರಿನ ಕೇಂದ್ರೀಯ ಪೆಟ್ರೋ ಕೆಮಿಕಲ್ಸ್ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆಯಲ್ಲಿ ಡಿಪ್ಲೊಮಾ ಇನ್ ಪ್ಲಾಸ್ಟಿಕ್ ಟೆಕ್ನಾಲಜಿ ಮತ್ತು ಡಿಪ್ಲೊಮಾ ಇನ್ ಪ್ಲಾಸ್ಟಿಕ್ ಮೌಲ್ಡ್ ಟೆಕ್ನಾಲಜಿ ಎಂಬ ಎರಡು ಹೊಸ ಕೋರ್ಸ್‌ಗಳನ್ನು ಆರಂಭಿಸಿದೆ ಎಂದು ಸಂಸ್ಥೆಯ ಸಹಾಯಕ ತಾಂತ್ರಿಕ ಅಧಿಕಾರಿ ಲಕ್ಷ್ಮಣ್ ಹೇಳಿದರು.

ಹತ್ತನೇ ತರಗತಿ ಉತ್ತೀರ್ಣರಾದವರು ಮೂರು ವರ್ಷದ ಕೋರ್ಸ್‌ಗೆ ಸೇರಬಹುದು. ಪಿಯುಸಿ (ವಿಜ್ಞಾನ) ಅಥವಾ ಐಟಿಐ ಓದಿರುವವರು ಎರಡು ವರ್ಷದ ಕೋರ್ಸ್‌ಗಳನ್ನು ಆಯ್ಕೆ ಮಾಡಿಕೊಳ್ಳಬಹುದು ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

೨೦೨೫-೨೬ನೇ ಸಾಲಿನ ಡಿಪ್ಲೊಮೊ ಕೋರ್ಸ್‌ಗಳಿಗೆ ಪ್ರವೇಶ ಆರಂಭಗೊಂಡಿದ್ದು, ಮೈಸೂರಿನ ಸಿಪೆಟ್‌ನ ಕೋರ್ಸ್‌ಗಳಿಗೆ ಆಯ್ಕೆ ಮಾಡುವ ಸಮಯದಲ್ಲಿ ಕರ್ನಾಟಕದವರಿಗೆ ಮೊದಲ ಆದ್ಯತೆ

ನೀಡಲಾಗುವುದು. ಇಲ್ಲಿ ವ್ಯಾಸಂಗ ಮಾಡಿದ ಪ್ರತಿಯೊಬ್ಬ ವಿದ್ಯಾರ್ಥಿಗೂ ಉದ್ಯೋಗ ದೊರಕಿದೆ. ಅನೇಕರು ಸ್ವ-ಉದ್ಯೋಗ ಆರಂಭಿಸಿದ್ದಾರೆ. ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಹಾಸ್ಟೆಲ್ ವ್ಯವಸ್ಥೆ, ವಿದ್ಯಾರ್ಥಿವೇತನದ ಸೌಲಭ್ಯವೂ ಇದೆ. ಪ್ರತಿ ಸೆಮಿಸ್ಟರ್‌ಗೆ ೨೦ ಸಾವಿರ ರೂ.ವರೆಗೆ ಖರ್ಚಾಗಲಿದೆ ಎಂದು ತಿಳಿಸಿದರು.

ಪ್ಲಾಸ್ಟಿಕ್ ವೈವಿಧ್ಯಮಯ ಬಳಕೆ, ಪ್ಲಾಸ್ಟಿಕ್ ಮೌಲ್ಡಿಂಗ್, ಪ್ಲಾಸ್ಟಿಕ್ ಸಂಸ್ಕರಣೆ, ಪ್ಲಾಸ್ಟಿಕ್ ಗುಣಮಟ್ಟ ಪರಿಶೀಲನೆ, ಆಧುನಿಕ ವಿನ್ಯಾಸದಲ್ಲಿ ಪ್ಲಾಸ್ಟಿಕ್ ವಸ್ತುಗಳ ತಯಾರಿಕ, ಪ್ಲಾಸ್ಟಿಕ್ ಮರು ಬಳಕೆ ವಿಧಾನ, ಪ್ಲಾಸ್ಟಿಕ್ ಪೈಪ್‌ಗಳು ಮತ್ತು ಇನ್ನಿತರೆ ವಸ್ತುಗಳ ತಯಾರಿಕೆ, ಮಾರುಕಟ್ಟೆ, ದರ ಪರಿಷ್ಕರಣೆ ಕುರಿತಂತೆ ಕಲಿಸಿಕೊಡಲಾಗುವುದು ಎಂದರು.

ಆಟೋಮೊಬೈಲ್ ಕೈಗಾರಿಕೆಗಳು, ವಾಹನದ ಬಿಡಿ ಭಾಗಗಳನ್ನು ತಯಾರಿಸುವ ಉದ್ಯಮಗಳು, ಪಿವಿಸಿ ಪೈಪ್ ತಯಾರಿಕಾ ಕಂಪೆನಿಗಳು ಮತ್ತು ವಿದ್ಯುನ್ಮಾನ, ಪ್ಲಾಸ್ಟಿಕ್ ಉತ್ಪಾದನಾ ಕಂಪೆನಿಗಳು, ಆಹಾರೋದ್ಯಮ ಕ್ಷೇತ್ರಗಳಲ್ಲಿ ಉದ್ಯೋಗ ಪಡೆಯಬಹುದು ಎಂದು ವಿವರಿಸಿದರು.

ಹಿರಿಯ ಸಹಾಯಕ ಮಹೇಶ್ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ನಾಳೆ ಬುದ್ಧ ಪೂರ್ಣಿಮೆ: ಬೆಂಗಳೂರಿನಲ್ಲಿ ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ

ಬೆಂಗಳೂರು: ಬುದ್ಧ ಪೂರ್ಣಿಮೆಯ ಹಿನ್ನೆಲೆಯಲ್ಲಿ ನಾಳೆ(ಮೇ.1ರಂದು) ಬೆಂಗಳೂರು ನಗರದಾದ್ಯಂತ ಮಾಂಸ ಮಾರಾವನ್ನು ನಿಷೇಧಿಸಿ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಆದೇಶ ಹೊರಡಿಸಿದೆ.…

20 mins ago

ಪತ್ನಿಯನ್ನು ಕೊಡಲಿಯಿಂದ ಹೊಡೆದು ಸಾಯಿಸಿ ಪೊಲೀಸರಿಗೆ ಶರಣಾದ ಪತಿ

ಮೈಸೂರು: ಸಣ್ಣ ವಿಚಾರಕ್ಕೆ ಆರಂಭವಾದ  ಕೌಟುಂಬಿಕ ಕಲಹವೊಂದು ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮೈಸೂರಿನ ಹಳೆ ಕೆಸರೆ ಗ್ರಾಮದಲ್ಲಿ ನಡೆದಿದೆ. ಕೆಲಸ…

44 mins ago

ನಾಳೆಗೆ 60 ದಿನಗಳ ಡೆಡ್‌ಲೈನ್‌ ಅಂತ್ಯ: ಸಂಕಷ್ಟದಲ್ಲಿ ಡೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್‌: ಅಮೇರಿಕಾ ಮತ್ತು ಇರಾನ್‌ ನಡುವಿನ ಮಿಲಿಟರಿ ಸಂಘರ್ಷ ಈಗ ನಿರ್ಣಾಯಕ ಘಟ್ಟಕ್ಕೆ ಬಂದು ತಲುಪಿದೆ. ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌…

1 hour ago

ರಾಜ್ಯದಲ್ಲಿ ಮೂರು ದಿನ ಮಳೆ ಮುನ್ಸೂಚನೆ: ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು: ರಾಜ್ಯದಲ್ಲಿ ಮೂರು ದಿನಗಳ ಕಾಲ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ.1ರಂದು ರಾಯಚೂರು, ಕೊಪ್ಪಳ,…

3 hours ago

ಯಾಲಕ್ಕೂರು, ಸುತ್ತಲಿನ ಗ್ರಾಮಗಳಿಗೆ ಬಂತು ಸಾರಿಗೆ ಬಸ್ಸು!

ಚಾಮರಾಜನಗರ: ತಾಲ್ಲೂಕಿನ ಯಾಲಕ್ಕೂರು ಹಾಗೂ ಸುತ್ತಮುತ್ತಲಿನ ಆರು ಗ್ರಾಮಗಳಿಗೆ ಸಾರಿಗೆ ಬಸ್ಸೇ ಇಲ್ಲ ಎಂದು ‘ಆಂದೋಲನ ಪತ್ರಿಕೆ’ಯಲ್ಲಿ ಈಚೆಗೆ ಪ್ರಕಟವಾಗಿದ್ದ…

6 hours ago

ಓದುಗರ ಪತ್ರ: ಬಿಸಿಲಲ್ಲೋ ಅಣ್ಣಾ..!

ಬಿಸಿಲಲ್ಲೋ ಅಣ್ಣ ಇದು ಬರಿ ಬಿಸಿಲಲ್ಲೋ ! ಯಾರು ಹೆಸರಿಟ್ಟರೋ? ಇದಕ್ಕೆ ‘ನಿಲ್ಲೋ ಎಲ್ಲೋ’ ನಿಂತಲ್ಲಿ ನಿಲ್ಲಲು, ಕುಂತಲ್ಲಿ ಕೂರಲು…

6 hours ago