ಮಂಡ್ಯ

ಹೆಚ್ಎಂಟಿಗೆ ಮರುಜೀವ : DPR ಸಿದ್ಧವಾಗುತ್ತಿದೆ ಎಂದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ

ಮಂಡ್ಯ : ಪ್ರತಿಷ್ಠಿತ ಹೆಚ್ಎಂಟಿ ಕಾರ್ಖಾನೆಗೆ ಮರುಜೀವ ನೀಡಲು ಸಮಗ್ರ ಯೋಜನಾ ವರದಿ (DPR) ತಯಾರು ಮಾಡಲಾಗುತ್ತಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರು ಹೇಳಿದರು.

ಮಂಡ್ಯದಲ್ಲಿ ಮಾಧ್ಯಮಗಳ ಜತೆ ಮಾತನಾಡುವ ಮಹತ್ವದ ಈ ಅಂಶವನ್ನು ತಿಳಿಸಿದ ಸಚಿವರು; ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಹೆಚ್ಎಂಟಿ ಹಾಗೂ ಭದ್ರಾವತಿಯ ಸರ್ ಎಂ. ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯನ್ನು (VISL) ಪುನರುಜ್ಜೀವನ ಮಾಡುವ ಪ್ರಯತ್ನ ನಡೆಸಲಾಗಿದೆ. ಈಗಾಗಲೇ ಹಲವು ಸುತ್ತಿನ ಮಾತುಕತೆ ನಡೆದಿದೆ ಎಂದು ತಿಳಿಸಿದರು.

ಇದನ್ನು ಓದಿ; ಹೆಚ್ಎಂಟಿಗೆ ಮರುಜೀವ : DPR ಸಿದ್ಧವಾಗುತ್ತಿದೆ ಎಂದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ

ನೀತಿ ಆಯೋಗದ ಸದಸ್ಯರು ಆಗಿರುವ ಡಾ. ವಿ.ಕೆ. ಸಾರಸ್ವತ ಅವರು ಹೆಚ್ಎಂಟಿ ಕಾರ್ಖಾನೆಯ ಪುನಶ್ಚೇತನದ ಬಗ್ಗೆ ಮಹತ್ವದ ವರದಿ ನೀಡಿದ್ದಾರೆ. ಬೃಹತ್ ಕೈಗಾರಿಕೆ ಸಚಿವಾಲಯದ ಉನ್ನತ ಅಧಿಕಾರಿಗಳು, ಹೆಚ್’ಎಂಟಿ ವ್ಯವಸ್ಥಾಪಕ ನಿರ್ದೇಶಕರು ಹಾಗೂ ವಿ.ಕೆ.ಸಾರಸ್ವತ ಅವರೊಂದಿಗೆ ನವದೆಹಲಿಯಲ್ಲಿ ಹಲವು ಸುತ್ತಿನ ಉನ್ನತ ಮಟ್ಟದ ಸಭೆಗಳನ್ನು ನಡೆಸಲಾಗಿದೆ. ಅಲ್ಲದೆ; ಜಪಾನ್ ದೇಶದಿಂದ ತಾಂತ್ರಿಕ ಸಹಕಾರ ಪಡೆಯುವ ಬಗ್ಗೆ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರ ನೇತೃತ್ವದ ತಂಡವನ್ನು ಆ ದೇಶಕ್ಕೆ ಕಳಿಸಿದ್ದೆ ಎಂದು ಕೇಂದ್ರ ಸಚಿವರು ಮಾಹಿತಿ ನೀಡಿದರು.

ಮಂಡ್ಯ ಜಿಲ್ಲೆಯಲ್ಲಿ ಕೈಗಾರಿಕೆ ಸ್ಥಾಪನೆ ಮಾಡಬೇಕು ಎಂಬುದು ಜನರ ಅಭಿಲಾಷೆಯಾಗಿದೆ. ರಾಜ್ಯ ಸರ್ಕಾರದ ಸಹಕಾರ ಕೇಳಿದ್ದೇನೆ ಹಾಗೂ ದೆಹಲಿ ಮಟ್ಟದಲ್ಲಿಯೂ ಮಂಡ್ಯದಲ್ಲಿ ಉದ್ಯಮ ಸ್ಥಾಪಿಸುವ ಬಗ್ಗೆ ಹಲವಾರು ಉದ್ದಿಮೆದಾರರ ಜತೆ ಮಾತುಕತೆ ನಡೆಸಿದ್ದೇನೆ ಎಂದು ಕೇಂದ್ರ ಸಚಿವರು ಮಾಹಿತಿ ನೀಡಿದರು.

ಹಾಗೆಯೇ ನನಗೆ ಸಿಕ್ಕಿರುವ ಎರಡು ಖಾತೆಗಳ ಸಹಾಯದಿಂದ ರಾಜ್ಯದಲ್ಲಿ ಕೈಗಾರಿಕೆಗಳ ಬೆಳವಣಿಗೆಗೆ ಒಂದಿಷ್ಟು ಕೆಲಸ ಮಾಡಲು ಪ್ರಯತ್ನ ಮಾಡುತ್ತಿದ್ದೇನೆ. ರಾಜ್ಯ ಸರ್ಕಾರವು ಕೇಂದ್ರದ ಕಟ್ಟೆ ಉತ್ತಮ ರೀತಿಯಲ್ಲಿ ಬಾಂಧವ್ಯ ಹೊಂದಿರಬೇಕು. ಹಾಗಾದಾಗ ಮಾತ್ರ ರಾಜ್ಯಕ್ಕೆ ಕೇಂದ್ರದಿಂದ ಹೆಚ್ಚು ಅನುಕೂಲ ಆಗುತ್ತದೆ. ಎಲ್ಲ ವಿಷಯಕ್ಕೂ ರಾಜಕಾರಣ ತರುವುದು ಅನಗತ್ಯ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಆಂದೋಲನ ಡೆಸ್ಕ್

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

5 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

5 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

16 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

16 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

16 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

16 hours ago