ಮಂಡ್ಯ

ನೇಣುಬಿಗಿದ ಸ್ಥಿತಿಯಲ್ಲಿ ನವ ವಿವಾಹಿತೆ : ಕೊಲೆ ಶಂಕೆ

ಪಾಂಡವಪುರ: ಗೃಹಿಣಿಯೊಬ್ಬರು ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಸಾವನ್ನಪ್ಪಿದ್ದು, ಯುವತಿಯ ಮನೆಯವರು ವರದಕ್ಷಿಣಿ ಕಿರುಕುಳದಿಂದ ಪತಿ ಹಾಗೂ ಅವರ ಮನೆಯವರು ಕೊಲೆಮಾಡಿದ್ದಾರೆ ಎಂದು ಆರೋಪಿಸಿ ಯುವತಿಯ ತಂದೆ ಪಟ್ಟಣದ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ತಾಲೂಕಿನ ಕೆನ್ನಾಳು ಗ್ರಾಮದ ಅಭಿನಂದನ್ ಎಂಬುವರ ಪತ್ನಿ ಪೂಜಾ(25) ನೇಣುಬಿಗಿದುಕೊಂಡು ಸಾವನ್ನಪ್ಪಿರುವ ಗೃಹಿಣಿ.

ಕೆನ್ನಾಳು ಗ್ರಾಮದ ಅಭಿನಂದನ್ ಎಂಬಾತ ಶ್ರೀರಂಗಪಟ್ಟಣದ ಬಲ್ಲೇನಹಳ್ಳಿ ಗ್ರಾಮದ ಮಂಜುನಾಥ್ ಎಂಬುವರ ಪುತ್ರಿ ಪೂಜಾ ಎಂಬ ಯುವತಿಯನ್ನು ಪ್ರೀತಿಸಿ ಪೋಷಕರ ಎದುರು ಹಾಕಿಕೊಂಡು ಎರಡು ತಿಂಗಳ ಹಿಂದೆ ಮದುವೆಯಾಗಿದ್ದರು. ಪ್ರಕರಣ ಸಂಬಂಧ ಯುವತಿಯ ತಂದೆ ಮಂಜುನಾಥ್ ಅವರು ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು, ಯುವತಿ ನಾನು ಇಷ್ಟ ಪಟ್ಟು ಪ್ರೀತಿಸಿ ಮದುವೆಯಾಗುತ್ತಿದ್ದೇನೆ ಎಂಬುದಾಗಿ ಪೊಲೀಸ್ ಮುಂದೆ ಹೇಳಿಕೊಟ್ಟು ಅಭಿನಂದನ್ ಎಂಬ ಯುವಕನನ್ನು ಮದುವೆಯಾಗಿದ್ದಳು. ಇದೀಗ ಮದುವೆಯಾದ ಎರಡೇ ತಿಂಗಳಲ್ಲಿ ಯುವತಿ ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಸಾವನಪ್ಪಿದ್ದಾಳೆ. ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಮೃತ ದೇಹವನ್ನು ಪಾಂಡವಪುರ ಸಾರ್ವಜನಿಕ ಆಸ್ಪತ್ರಗೆ ರವಾನಿಸಿದ್ದಾರೆ.

ವಿಷಯ ತಿಳಿದ ಮೃತ ಯುವತಿ ಪೂಜಾ ಮನೆಯವರು ಸ್ಥಳಕ್ಕೆ ಆಗಮಿಸಿ ನನ್ನ ಮಗಳನ್ನು ಪತಿ ಅಭಿನಂದನ್, ಆತನ ತಮ್ಮ ಅನಿಲ್ ಹಾಗೂ ಅತ್ತೆ ಶಾಂತಮ್ಮ ಅವರು ಮಗಳಿಗೆ ಕಿರುಕುಳ ನೀಡಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿ ಪತಿಯ ಮನೆಯವರು ವಿರುದ್ದ ಆಕ್ರೋಶ ಹೊರಹಾಕಿದರು. ನಂತರ ಎರಡು ಗ್ರಾಮದ ಗ್ರಾಮಸ್ಥರು, ಕುಟುಂಬರು ಬೆಳಿಗ್ಗೆಯಿಂದ ಸಂಜೆಯವರೆಗೂ ನ್ಯಾಯಾಪಂಚಾಯಿತಿ ಮಾಡುವ ಮೂಲಕ ರಾಜಿಸಂದಾನ ಮಾಡಿಕೊಳ್ಳುವ ಮೂಲಕ ಬಗೆಹರಿಸಿಕೊಳ್ಳಲು ಎಷ್ಟೇ ಪ್ರಯತ್ನ ನಡೆಸಿದರು. ಅಂತಿಮವಾಗಿ ಬಗೆಹರಿಯಲಿಲ್ಲ. ಬಳಿಕ ಮೃತ ಯುವತಿಯ ತಂದೆ ಮಂಜುನಾಥ್ ನನ್ನ ಮಗಳಿಗೆ ಪತಿ ಮತ್ತು ಅವರ ಮನೆಯವರು ನನ್ನ ಮಗಳಿಗೆ ವರದಕ್ಷಿಣೆ ಕಿರುಕುಳ ನೀಡಿ ಹಲ್ಲೆ ನಡೆಸಿ, ಕೊಲೆ ಮಾಡಿ ನೇಣುಹಾಕಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಿದ್ದಾರೆ.

ಮಂಜುನಾಥ್ ಅವರ ನೀಡಿದ ದೂರಿನ ಮೇರೆಗೆ ಪೊಲೀಸರು ಮೃತ ಯುವತಿ ಪೂಜಾ ಅವರ ಪತಿ ಅಭಿನಂದನ್, ಆತನ ತಮ್ಮ ಅನಿಲ್ ಹಾಗೂ ಅತ್ತೆಯ ಶಾಂತಮ್ಮ ವಿರುದ್ದ ದೂರು ದಾಖಲಿಸಿಕೊಂಡಿದ್ದಾರೆ. ಅಲ್ಲದೆ ಪತಿ ಅಭಿನಂದನ್ ಹಾಗೂ ಆತನ ತಮ್ಮ ಅನಿಲ್ ಎಂಬಾತನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆಗೆ ಒಳಪಡಿಸಿದ್ದಾರೆ. ಘಟನೆ ಸಂಬಂಧ ಪಾಂಡವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯುವತಿಯ ಮೃತ ದೇಹವನ್ನು ಶವ ಪರೀಕ್ಷೆ ನಡೆಸಿ ಯುವತಿಯ ತಂದೆ ಮನೆಯವರಿಗೆ ಒಪ್ಪಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಎವ್ಗನ್ ಬಾವ್ಚಾರ್ ಎಂಬ ಕಣ್ಣಿಲ್ಲದ ಫೋಟೋಗ್ರಾಫರ್!

ಪಂಜು ಗಂಗೊಳ್ಳಿ  ನೂರಾರು ಜನ ವಿಶೇಷಚೇತನರಿಗೆ ಫೋಟೋಗ್ರಫಿ ತರಬೇತಿ ಎವ್ಗನ್ ಬಾವ್ಚಾರ್ ೧೯೪೬ರಲ್ಲಿ ಸ್ಲೊವೇನಿಯಾ (ಆಗ ಯುಗೊಸ್ಲೇವಿಯಾ)ದಲ್ಲಿ ಹುಟ್ಟಿದರು. ಏಳು…

3 hours ago

ಓದುಗರ ಪತ್ರ: ಕಳ್ಳಸಾಗಣೆ ಕಪಿಮುಷ್ಟಿಯಲ್ಲಿ ದೇಶದ ಆರ್ಥಿಕತೆ

ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಭಾರತದಲ್ಲಿ ಅಕ್ರಮ ಸಿಗರೇಟ್ ಮಾರುಕಟ್ಟೆಯು ವಾರ್ಷಿಕವಾಗಿ ಸುಮಾರು ರೂ.೧೫,೦೦೦ ಕೋಟಿಗೂ ಅಧಿಕ ನಷ್ಟವನ್ನು ಸರ್ಕಾರಕ್ಕೆ ಉಂಟುಮಾಡುತ್ತಿದೆ.…

3 hours ago

ಓದುಗರ ಪತ್ರ: ದ್ವಿಚಕ್ರವಾಹನಗಳಿಗೆ ದರ್ಪಣ(ಕನ್ನಡಿ) ಕಡ್ಡಾಯವಾಗಲಿ

ದ್ವಿಚಕ್ರ ವಾಹನಗಳಿಗೆ ಸಂಚಾರ ನಿಯಮದಂತೆ ಎರಡೂ ಕಡೆ ದರ್ಪಣವನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು. ಯಾರು ಈ ನಿಯಮವನ್ನು ಉಲ್ಲಂಘಿಸುತ್ತಾರೋ ಅವರಿಗೆ ಸಂಚಾರ…

3 hours ago

ಓದುಗರ ಪತ್ರ: ವಾಹನ ನಿಲುಗಡೆ ನಿಷೇಧಿಸಿ

ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆಯ ಶಾಂತಿ ಸಾಗರ್ ಕಾಂಪ್ಲೆಕ್ಸ್ ನ ಆಂಜನೇಯ ದೇವಸ್ಥಾನದ ಮುಂಭಾಗದಲ್ಲಿ ಮದ್ದೂರು ವಡೆ ಸೆಂಟರ್ ಮತ್ತು…

3 hours ago

ರಸ್ತೆಗಳು ಅಧ್ವಾನ; ಸವಾರರು ಹೈರಾಣ!

ಪ್ರಶಾಂತ್ ಎಸ್. ಮೈಸೂರು: ನಗರ ಹೊರವಲಯದ ಶ್ರೀರಾಂಪುರ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಹಲವೆಡೆ ರಸ್ತೆಗಳ ದುಸ್ಥಿತಿಯಿಂದಾಗಿ ವಾಹನಗಳ ಸವಾರರು ಜೀವವನ್ನು…

3 hours ago

ವೈಭವದ ಸುತ್ತೂರು ಜಾತ್ರಾ ಮಹೋತ್ಸವ ಸಂಪನ್ನ

ಕೆ.ಬಿ.ರಮೇಶನಾಯಕ ಮೈಸೂರು: ಕಪಿಲಾ ನದಿ ತೀರದ ಸುತ್ತೂರಿನಲ್ಲಿ ಆರುದಿನಗಳ ಕಾಲ ಅತ್ಯಂತ ಸಡಗರ, ಸಂಭ್ರಮದಿಂದ ನಡೆದ ಧಾರ್ಮಿಕ, ಸಾಂಸ್ಕೃತಿಕ, ವೈಜ್ಞಾನಿಕ…

3 hours ago