ಮಂಡ್ಯ

ನೇಣುಬಿಗಿದ ಸ್ಥಿತಿಯಲ್ಲಿ ನವ ವಿವಾಹಿತೆ : ಕೊಲೆ ಶಂಕೆ

ಪಾಂಡವಪುರ: ಗೃಹಿಣಿಯೊಬ್ಬರು ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಸಾವನ್ನಪ್ಪಿದ್ದು, ಯುವತಿಯ ಮನೆಯವರು ವರದಕ್ಷಿಣಿ ಕಿರುಕುಳದಿಂದ ಪತಿ ಹಾಗೂ ಅವರ ಮನೆಯವರು ಕೊಲೆಮಾಡಿದ್ದಾರೆ ಎಂದು ಆರೋಪಿಸಿ ಯುವತಿಯ ತಂದೆ ಪಟ್ಟಣದ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ತಾಲೂಕಿನ ಕೆನ್ನಾಳು ಗ್ರಾಮದ ಅಭಿನಂದನ್ ಎಂಬುವರ ಪತ್ನಿ ಪೂಜಾ(25) ನೇಣುಬಿಗಿದುಕೊಂಡು ಸಾವನ್ನಪ್ಪಿರುವ ಗೃಹಿಣಿ.

ಕೆನ್ನಾಳು ಗ್ರಾಮದ ಅಭಿನಂದನ್ ಎಂಬಾತ ಶ್ರೀರಂಗಪಟ್ಟಣದ ಬಲ್ಲೇನಹಳ್ಳಿ ಗ್ರಾಮದ ಮಂಜುನಾಥ್ ಎಂಬುವರ ಪುತ್ರಿ ಪೂಜಾ ಎಂಬ ಯುವತಿಯನ್ನು ಪ್ರೀತಿಸಿ ಪೋಷಕರ ಎದುರು ಹಾಕಿಕೊಂಡು ಎರಡು ತಿಂಗಳ ಹಿಂದೆ ಮದುವೆಯಾಗಿದ್ದರು. ಪ್ರಕರಣ ಸಂಬಂಧ ಯುವತಿಯ ತಂದೆ ಮಂಜುನಾಥ್ ಅವರು ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು, ಯುವತಿ ನಾನು ಇಷ್ಟ ಪಟ್ಟು ಪ್ರೀತಿಸಿ ಮದುವೆಯಾಗುತ್ತಿದ್ದೇನೆ ಎಂಬುದಾಗಿ ಪೊಲೀಸ್ ಮುಂದೆ ಹೇಳಿಕೊಟ್ಟು ಅಭಿನಂದನ್ ಎಂಬ ಯುವಕನನ್ನು ಮದುವೆಯಾಗಿದ್ದಳು. ಇದೀಗ ಮದುವೆಯಾದ ಎರಡೇ ತಿಂಗಳಲ್ಲಿ ಯುವತಿ ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಸಾವನಪ್ಪಿದ್ದಾಳೆ. ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಮೃತ ದೇಹವನ್ನು ಪಾಂಡವಪುರ ಸಾರ್ವಜನಿಕ ಆಸ್ಪತ್ರಗೆ ರವಾನಿಸಿದ್ದಾರೆ.

ವಿಷಯ ತಿಳಿದ ಮೃತ ಯುವತಿ ಪೂಜಾ ಮನೆಯವರು ಸ್ಥಳಕ್ಕೆ ಆಗಮಿಸಿ ನನ್ನ ಮಗಳನ್ನು ಪತಿ ಅಭಿನಂದನ್, ಆತನ ತಮ್ಮ ಅನಿಲ್ ಹಾಗೂ ಅತ್ತೆ ಶಾಂತಮ್ಮ ಅವರು ಮಗಳಿಗೆ ಕಿರುಕುಳ ನೀಡಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿ ಪತಿಯ ಮನೆಯವರು ವಿರುದ್ದ ಆಕ್ರೋಶ ಹೊರಹಾಕಿದರು. ನಂತರ ಎರಡು ಗ್ರಾಮದ ಗ್ರಾಮಸ್ಥರು, ಕುಟುಂಬರು ಬೆಳಿಗ್ಗೆಯಿಂದ ಸಂಜೆಯವರೆಗೂ ನ್ಯಾಯಾಪಂಚಾಯಿತಿ ಮಾಡುವ ಮೂಲಕ ರಾಜಿಸಂದಾನ ಮಾಡಿಕೊಳ್ಳುವ ಮೂಲಕ ಬಗೆಹರಿಸಿಕೊಳ್ಳಲು ಎಷ್ಟೇ ಪ್ರಯತ್ನ ನಡೆಸಿದರು. ಅಂತಿಮವಾಗಿ ಬಗೆಹರಿಯಲಿಲ್ಲ. ಬಳಿಕ ಮೃತ ಯುವತಿಯ ತಂದೆ ಮಂಜುನಾಥ್ ನನ್ನ ಮಗಳಿಗೆ ಪತಿ ಮತ್ತು ಅವರ ಮನೆಯವರು ನನ್ನ ಮಗಳಿಗೆ ವರದಕ್ಷಿಣೆ ಕಿರುಕುಳ ನೀಡಿ ಹಲ್ಲೆ ನಡೆಸಿ, ಕೊಲೆ ಮಾಡಿ ನೇಣುಹಾಕಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಿದ್ದಾರೆ.

ಮಂಜುನಾಥ್ ಅವರ ನೀಡಿದ ದೂರಿನ ಮೇರೆಗೆ ಪೊಲೀಸರು ಮೃತ ಯುವತಿ ಪೂಜಾ ಅವರ ಪತಿ ಅಭಿನಂದನ್, ಆತನ ತಮ್ಮ ಅನಿಲ್ ಹಾಗೂ ಅತ್ತೆಯ ಶಾಂತಮ್ಮ ವಿರುದ್ದ ದೂರು ದಾಖಲಿಸಿಕೊಂಡಿದ್ದಾರೆ. ಅಲ್ಲದೆ ಪತಿ ಅಭಿನಂದನ್ ಹಾಗೂ ಆತನ ತಮ್ಮ ಅನಿಲ್ ಎಂಬಾತನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆಗೆ ಒಳಪಡಿಸಿದ್ದಾರೆ. ಘಟನೆ ಸಂಬಂಧ ಪಾಂಡವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯುವತಿಯ ಮೃತ ದೇಹವನ್ನು ಶವ ಪರೀಕ್ಷೆ ನಡೆಸಿ ಯುವತಿಯ ತಂದೆ ಮನೆಯವರಿಗೆ ಒಪ್ಪಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ಎಸ್‌ಸಿ, ಎಸ್‌ಟಿಗಳ ಹಕ್ಕು ರಕ್ಷಣೆಗೆ ಕ್ರಮ : ಡಾ.ಮೂರ್ತಿ

ಮೈಸೂರು : ಆದಿವಾಸಿ ಸಮುದಾಯಗಳ ಮೇಲಿನ ದೌರ್ಜನ್ಯ, ಸಾಮಾಜಿಕ ಬಹಿಷ್ಕಾರ ಹಾಗೂ ಮೈಸೂರು ಭಾಗದಲ್ಲಿ ದಾಖಲಾಗಿರುವ 134 ಪೋಕ್ಸೊ ಪ್ರಕರಣಗಳು…

4 hours ago

ಬೆಂಕಿ ಅವಘಡ | ಅಬಕಾರಿ ಡಿಸಿ ಅಮಾನತಿಗೆ ಶಿಫಾರಸ್ಸು ಮಾಡಲು ಸೂಚನೆ ಕೊಟ್ಟ ಯತೀಂದ್ರ ಸಿದ್ದರಾಮಯ್ಯ!

ಮೈಸೂರು : ಸೋಮವಾರ ಪಬ್‌ನಲ್ಲಿ ಸಂಭವಿಸಿದ್ದ ಬೆಂಕಿ ಅವಘಡದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ತವ್ಯ ಲೋಪದ ಕಾರಣಕ್ಕಾಗಿ ಅಬಕಾರಿ…

5 hours ago

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ತಮಿಳುನಾಡು ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ರೈತರಿಗೆ ಸಿಎಂ ವಿಜಯ್‌ ಬಂಪರ್‌ ಕೊಡುಗೆ ನೀಡಿದ್ದಾರೆ. ವಿವಿಧ ಸಹಕಾರಿ ಬ್ಯಾಂಕುಗಳಲ್ಲಿ ರೈತರು ಪಡೆದಿರುವ 75,000 ರೂ…

9 hours ago

ಮುಂಗಾರು ಕೊರತೆ: ಹಾರಂಗಿ ಜಲಾಶಯದ ಒಳಹರಿವು ತೀವ್ರ ಕುಸಿತ

ಮಡಿಕೇರಿ: ಮುಂಗಾರು ಮಳೆ ಕೊರತೆಯಿಂದ ಹಾರಂಗಿ ಜಲಾಶಯಕ್ಕೆ ಒಳಹರಿವು ತೀವ್ರವಾಗಿ ಕುಸಿದಿದ್ದು, ರೈತರಲ್ಲಿ ಆತಂಕ ಹೆಚ್ಚಾಗಿದೆ. ಮಳೆಗಾಲವಾದರೂ ಜಿಲ್ಲೆಯಲ್ಲಿ ಮಳೆ…

11 hours ago

ಮೆಡಿಕಲ್‌ನಲ್ಲಿ ಇನ್ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಮೆಡಿಕಲ್‌ ಶಾಪ್‌ಗಳಲ್ಲಿ ಇನ್ಮು ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಆದೇಶ…

11 hours ago

ನಟ ವಿಜಯ್‌ ರಾಘವೇಂದ್ರ, ಶ್ರೀಮುರಳಿಗೆ ಮಾತೃ ವಿಯೋಗ

ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಿರ್ಮಾಪಕರಾದ ಎಸ್.ಎ.ಚಿನ್ನೇಗೌಡ ಅವರ ಪತ್ನಿ ಹಾಗೂ ನಟರಾದ ವಿಜಯ್‌ ರಾಘವೇಂದ್ರ, ಶ್ರೀಮುರಳಿ ಅವರ ತಾಯಿ…

12 hours ago