ಮಂಡ್ಯ

ನೇಣುಬಿಗಿದ ಸ್ಥಿತಿಯಲ್ಲಿ ನವ ವಿವಾಹಿತೆ : ಕೊಲೆ ಶಂಕೆ

ಪಾಂಡವಪುರ: ಗೃಹಿಣಿಯೊಬ್ಬರು ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಸಾವನ್ನಪ್ಪಿದ್ದು, ಯುವತಿಯ ಮನೆಯವರು ವರದಕ್ಷಿಣಿ ಕಿರುಕುಳದಿಂದ ಪತಿ ಹಾಗೂ ಅವರ ಮನೆಯವರು ಕೊಲೆಮಾಡಿದ್ದಾರೆ ಎಂದು ಆರೋಪಿಸಿ ಯುವತಿಯ ತಂದೆ ಪಟ್ಟಣದ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ತಾಲೂಕಿನ ಕೆನ್ನಾಳು ಗ್ರಾಮದ ಅಭಿನಂದನ್ ಎಂಬುವರ ಪತ್ನಿ ಪೂಜಾ(25) ನೇಣುಬಿಗಿದುಕೊಂಡು ಸಾವನ್ನಪ್ಪಿರುವ ಗೃಹಿಣಿ.

ಕೆನ್ನಾಳು ಗ್ರಾಮದ ಅಭಿನಂದನ್ ಎಂಬಾತ ಶ್ರೀರಂಗಪಟ್ಟಣದ ಬಲ್ಲೇನಹಳ್ಳಿ ಗ್ರಾಮದ ಮಂಜುನಾಥ್ ಎಂಬುವರ ಪುತ್ರಿ ಪೂಜಾ ಎಂಬ ಯುವತಿಯನ್ನು ಪ್ರೀತಿಸಿ ಪೋಷಕರ ಎದುರು ಹಾಕಿಕೊಂಡು ಎರಡು ತಿಂಗಳ ಹಿಂದೆ ಮದುವೆಯಾಗಿದ್ದರು. ಪ್ರಕರಣ ಸಂಬಂಧ ಯುವತಿಯ ತಂದೆ ಮಂಜುನಾಥ್ ಅವರು ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು, ಯುವತಿ ನಾನು ಇಷ್ಟ ಪಟ್ಟು ಪ್ರೀತಿಸಿ ಮದುವೆಯಾಗುತ್ತಿದ್ದೇನೆ ಎಂಬುದಾಗಿ ಪೊಲೀಸ್ ಮುಂದೆ ಹೇಳಿಕೊಟ್ಟು ಅಭಿನಂದನ್ ಎಂಬ ಯುವಕನನ್ನು ಮದುವೆಯಾಗಿದ್ದಳು. ಇದೀಗ ಮದುವೆಯಾದ ಎರಡೇ ತಿಂಗಳಲ್ಲಿ ಯುವತಿ ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಸಾವನಪ್ಪಿದ್ದಾಳೆ. ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಮೃತ ದೇಹವನ್ನು ಪಾಂಡವಪುರ ಸಾರ್ವಜನಿಕ ಆಸ್ಪತ್ರಗೆ ರವಾನಿಸಿದ್ದಾರೆ.

ವಿಷಯ ತಿಳಿದ ಮೃತ ಯುವತಿ ಪೂಜಾ ಮನೆಯವರು ಸ್ಥಳಕ್ಕೆ ಆಗಮಿಸಿ ನನ್ನ ಮಗಳನ್ನು ಪತಿ ಅಭಿನಂದನ್, ಆತನ ತಮ್ಮ ಅನಿಲ್ ಹಾಗೂ ಅತ್ತೆ ಶಾಂತಮ್ಮ ಅವರು ಮಗಳಿಗೆ ಕಿರುಕುಳ ನೀಡಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿ ಪತಿಯ ಮನೆಯವರು ವಿರುದ್ದ ಆಕ್ರೋಶ ಹೊರಹಾಕಿದರು. ನಂತರ ಎರಡು ಗ್ರಾಮದ ಗ್ರಾಮಸ್ಥರು, ಕುಟುಂಬರು ಬೆಳಿಗ್ಗೆಯಿಂದ ಸಂಜೆಯವರೆಗೂ ನ್ಯಾಯಾಪಂಚಾಯಿತಿ ಮಾಡುವ ಮೂಲಕ ರಾಜಿಸಂದಾನ ಮಾಡಿಕೊಳ್ಳುವ ಮೂಲಕ ಬಗೆಹರಿಸಿಕೊಳ್ಳಲು ಎಷ್ಟೇ ಪ್ರಯತ್ನ ನಡೆಸಿದರು. ಅಂತಿಮವಾಗಿ ಬಗೆಹರಿಯಲಿಲ್ಲ. ಬಳಿಕ ಮೃತ ಯುವತಿಯ ತಂದೆ ಮಂಜುನಾಥ್ ನನ್ನ ಮಗಳಿಗೆ ಪತಿ ಮತ್ತು ಅವರ ಮನೆಯವರು ನನ್ನ ಮಗಳಿಗೆ ವರದಕ್ಷಿಣೆ ಕಿರುಕುಳ ನೀಡಿ ಹಲ್ಲೆ ನಡೆಸಿ, ಕೊಲೆ ಮಾಡಿ ನೇಣುಹಾಕಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಿದ್ದಾರೆ.

ಮಂಜುನಾಥ್ ಅವರ ನೀಡಿದ ದೂರಿನ ಮೇರೆಗೆ ಪೊಲೀಸರು ಮೃತ ಯುವತಿ ಪೂಜಾ ಅವರ ಪತಿ ಅಭಿನಂದನ್, ಆತನ ತಮ್ಮ ಅನಿಲ್ ಹಾಗೂ ಅತ್ತೆಯ ಶಾಂತಮ್ಮ ವಿರುದ್ದ ದೂರು ದಾಖಲಿಸಿಕೊಂಡಿದ್ದಾರೆ. ಅಲ್ಲದೆ ಪತಿ ಅಭಿನಂದನ್ ಹಾಗೂ ಆತನ ತಮ್ಮ ಅನಿಲ್ ಎಂಬಾತನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆಗೆ ಒಳಪಡಿಸಿದ್ದಾರೆ. ಘಟನೆ ಸಂಬಂಧ ಪಾಂಡವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯುವತಿಯ ಮೃತ ದೇಹವನ್ನು ಶವ ಪರೀಕ್ಷೆ ನಡೆಸಿ ಯುವತಿಯ ತಂದೆ ಮನೆಯವರಿಗೆ ಒಪ್ಪಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ಗಾಂಧಿ ಅಭಿಯಾನ ಅರಿವಿನ ಯಾನ : ತುಂಡು ಬಟ್ಟೆಯ ಫಕೀರ ಮತ್ತು ಇಂಗ್ಲೆಂಡ್ ಚಕ್ರವರ್ತಿ

ಡಾ. ಪ್ರಮೀಳಾದೇವಿ ಬಿ.ಕೆ ೧೯೩೧-೩೨ರಲ್ಲಿ ಗಾಂಧಿಜಿಯವರು ಉಪ್ಪಿನ ಸತ್ಯಾಗ್ರಹದ ನಂತರ ರೌಂಡ್ ಟೇಬಲ್ ಮಾತುಕತೆಗಾಗಿ ಇಂಗ್ಲೆಂಡಿಗೆ ಹೋದರು. ಈ ವೇಳೆಗಾಗಲೆ…

19 hours ago

ಗಾಂಧಿ ಅಭಿಯಾನ ಅರಿವಿನ ಯಾನ : ಚಾಮರಾಜನಗರ ಸೀಮೆಯಲ್ಲಿ ಗಾಂಧಿಯ ಪ್ರಭಾವ

ಚಾಮರಾಜನಗರ ಮೈಸೂರು ಜಿಯ ಒಂದು ಸಣ್ಣ ತಾಲ್ಲೂಕು ಕೇಂದ್ರವಾಗಿತ್ತು. ಸುಮಾರು ೯೦ ವರ್ಷಗಳ ಹಿಂದೆ ಸಣ್ಣ ಪಟ್ಟಣ. ೧೯೨೬ರಿಂದ ಇಲ್ಲಿಗೆ…

21 hours ago

ಇಂದು ಮೈಸೂರಿಗೆ ಮೋದಿ ಆಗಮನ : ವಿವೇಕ ಸ್ಮಾರಕ ಲೋಕಾರ್ಪಣೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿದ್ದಾರೆ. ಸ್ವಾಮಿ ವಿವೇಕಾನಂದರ ಐತಿಹಾಸಿಕ…

21 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಹೊರದೇಶದ ಭಾಷೆಗಳನ್ನು ಕಲಿತೆ

ನೃತ್ಯ ಮುಂತಾದವುಗಳಲ್ಲಿ ನಾನು ನಡೆಸಿದ ಪ್ರಯೋಗಗಳಿಂದ ನಾನು ಉಚ್ಚೃಂಖಲ ಪ್ರವೃತ್ತಿಯುಳ್ಳವನಾಗಿದ್ದನೆಂದು ಯಾರೂ ತಿಳಿಯಬಾರದು. ಅದರಲ್ಲಿಯೂ ವಿವೇಕದ ಅಂಶ ಇದ್ದಿತೆಂಬುದು ವಾಚಕರಿಗೆ…

22 hours ago

ನಾಳೆ ಸಿಎಂ ಡಿ.ಕೆ.ಶಿವಕುಮಾರ್‌ರಿಂದ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು: ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…

2 days ago

ದಯವಿಟ್ಟು ಕರ್ನಾಟಕ ಬಂದ್‌ ಕೈಬಿಡಿ: ಸಿಎಂ ಡಿಕೆಶಿ ನಮ್ರತೆಯ ಮನವಿ

ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್‌ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸರ್ಕಾರದ ಪರವಾಗಿ ನಮ್ರತೆಯ ಮನವಿ…

2 days ago