ಮಂಡ್ಯ

ರಂಗನತಿಟ್ಟು ಬಳಿ NH-275 ಹೆದ್ದಾರಿ : ವನ್ಯಜೀವಿ ಸುರಕ್ಷತೆಗೆ ನಿರ್ದೇಶನ

ಮಂಡ್ಯ : ಮೈಸೂರು ಬೈಪಾಸ್ ಮಾಡುವ ಗುರಿಯನ್ನು ಹೊಂದಿರುವ ಎನ್‌ಎಚ್ 275ರ ವಿಸ್ತೃತ ಮಾರ್ಗವಾದ ಬೆಂಗಳೂರು-ಕುಶಾಲನಗರ ಹೆದ್ದಾರಿಯು ರಂಗನತಿಟ್ಟು ಪಕ್ಷಿಧಾಮದ ಪರಿಸರ-ಸೂಕ್ಷ್ಮ ವಲಯದ ಮೂಲಕ ಹಾದುಹೋಗಲಿದ್ದು, ವನ್ಯಜೀವಿಗಳ ಮೇಲೆ ಯಾವುದೇ ಪರಿಣಾಮ ಬೀರದಂತೆ ಯೋಜನೆ ರೂಪಿಸಲು ಪರಿಸರ ಸೂಕ್ಷ ವಲಯದ ಅಧಿಕಾರಿಗಳು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ನಿರ್ದೇಶನ ನೀಡಿದ್ದಾರೆ.

ಬೆಂಗಳೂರು-ಕುಶಾಲನಗರ ಹೆದ್ದಾರಿ ನಿರ್ಮಾಣಕ್ಕೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಈ ಯೋಜನೆಗೆ ಅನುಮತಿ ಪಡೆದುಕೊಂಡಿದೆ.

ರಸ್ತೆ ಸುರಕ್ಷತೆಯನ್ನು ಹೆಚ್ಚಿಸಲು ಮತ್ತು ವಾಹನ ದಟ್ಟಣೆಯನ್ನು ಕಡಿಮೆ ಮಾಡಲು ಈ ಯೋಜನೆ ಅತ್ಯಗತ್ಯ ಎಂದು ಕರ್ನಾಟಕ ಮುಖ್ಯ ವನ್ಯಜೀವಿ ಮಂಡಳಿ ತಿಳಿಸಿದ ನಂತರ, ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಸ್ಥಾಯಿ ಸಮಿತಿಯು ಫೆ.೩ರಂದು ನಡೆದ ಸಭೆಯಲ್ಲಿ ಈ ಪ್ರಸ್ತಾವನೆಯನ್ನು ಅನುಮೋದಿಸಿದೆ.

ಬೈಪಾಸ್ ಹೆದ್ದಾರಿಯ 650 ಮೀ. ಉದ್ದವು ಅರಣ್ಯೇತರ ಭೂಮಿಯಲ್ಲಿ ಮತ್ತು ಅಭಯಾರಣ್ಯದ ಪ್ರಮುಖ ಪ್ರದೇಶದ ಗಡಿಯಿಂದ ಸುಮಾರು 1ಕಿ.ಮೀ. ದೂರದಲ್ಲಿ ಬರುತ್ತಿದ್ದರೂ, ಅದು ದುರ್ಬಲ ಪ್ರದೇಶದ ಮೂಲಕ ಹಾದುಹೋಗುತ್ತಿದೆ ಎಂದು ವನ್ಯಜೀವಿ ಅಧಿಕಾರಿಗಳು ತಿಳಿಸಿದ್ದಾರೆ.

ಈ ಯೋಜನೆಗಾಗಿ ಕ್ಷೇತ್ರ ಅಧ್ಯಯನಗಳನ್ನು ನಡೆಸಿದ ಭಾರತೀಯ ಪ್ರಾಣಿ ಸಮೀಕ್ಷೆಯು, ಯೋಜನಾ ಪ್ರದೇಶದಲ್ಲಿ 128 ಜಾತಿಯ ಪಕ್ಷಿಗಳ ಇರುವಿಕೆಯನ್ನು ದಾಖಲಿಸಿದೆ. ಇವುಗಳಲ್ಲಿ ಈಜಿಪ್ಟಿನ ರಣಹದ್ದು, ಕಪ್ಪು-ಹೊಟ್ಟೆಯ ಟರ್ನ್ ಮತ್ತು ಅಂತಾರಾಷ್ಟ್ರೀಯ ಪ್ರಕೃತಿ ಸಂರಕ್ಷಣೆ ಒಕ್ಕೂಟದ ಅಪಾಯದಂಚಿನಲ್ಲಿರುವ ಪಟ್ಟಿಯಲ್ಲಿರುವ ಹಲವಾರು ಪಕ್ಷಿಗಳೂ ಸೇರಿವೆ. ಭೂದೃಶ್ಯ ಮಟ್ಟದಲ್ಲಿ ನಡೆಸಿದ ಪ್ರಾಣಿ ಸಮೀಕ್ಷೆಯಲ್ಲಿ ಆನೆಗಳು, ಹುಲಿಗಳು ಮತ್ತು ಚಿರತೆಗಳಿಂದ ಹಿಡಿದು ನರಿ ಮತ್ತು ನಯವಾದ-ಲೇಪಿತ ನೀರು ನಾಯಿಗಳವರೆಗೆ 14 ಸಸ್ತನಿಗಳು ದಾಖಲಾಗಿವೆ.

ಮೈಸೂರು ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ. ಐ.ಬಿ. ಪ್ರಭುಗೌಡ ಅವರು, 2024ರಲ್ಲಿ ಎನ್‌ಬಿಡಬ್ಲ್ಯುಎಲ್‌ನಿಂದ ಯಾವುದೇ ಅನುಮತಿ ಬಂದಿಲ್ಲ ಎಂದು ಕೆಲಸ ಸ್ಥಗಿತಗೊಳಿಸುವಂತೆ ಹೆದ್ದಾರಿ ಪ್ರಾಧಿಕಾರದ ಗುತ್ತಿಗೆದಾರರಿಗೆ ಆದೇಶಿಸಿದ್ದರು. ಫೆ.3 ರಂದು ಎನ್‌ಬಿಡಬ್ಲ್ಯುಎಲ್‌ನಿಂದ ಅನುಮತಿ ಪಡೆದಿದ್ದು, ವನ್ಯಜೀವಿಗಳ ಮೇಲೆ ಯಾವುದೇ ಪರಿಣಾಮ ಬೀರದಂತೆ ಯೋಜನೆಯನ್ನು ಅಳವಡಿಸಿಕೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ.

ಕೋಟ್….‌

ರಂಗನತಿಟ್ಟು ಪ್ರದೇಶದಿಂದ ಸುಮಾರು 1ಕಿ.ಮೀ. ದೂರದಲ್ಲಿ ಹೆದ್ದಾರಿ ಹಾದು ಹೋಗಲಿದೆ. ಈ ಪ್ರದೇಶದಲ್ಲಿ ಹಾದು ಹೋಗುವ ಹೆದ್ದಾರಿ ಭಾಗದಲ್ಲಿ ಎತ್ತರದ ತಡೆಗೋಡೆ ನಿರ್ಮಿಸಬೇಕು. ಇದರಲ್ಲಿ ಪ್ರಾಣಿಗಳ ಹಾದಿಗಳು, ಕಾಲುವೆಗಳ ಮೇಲೆ ಹಾದುಹೋಗುವ ಪ್ರದೇಶಗಳಲ್ಲಿ ಜನನಿಬಿಡ ವಲಯ, ಒಟ್ಟು 3 ಕಿ.ಮೀ. ಪ್ರದೇಶದಲ್ಲಿ ಮೂರು ಸಾಲುಗಳ ಮರಗಳು, ನೈಸರ್ಗಿಕ ಶಬ್ಧ ಮತ್ತು ಬೆಳಕಿನ ತಡೆಗೋಡೆಯಾಗಿ ಸುಮಾರು 10 ಮೀ. ಅಗಲದ ಹಸಿರು ಪಟ್ಟಿ ಮತ್ತು ರಸ್ತೆ ಬಳಕೆದಾರರಿಗೆ ಈ ಪ್ರದೇಶದಲ್ಲಿ ವಾಹನಗಳನ್ನು ನಿಲ್ಲಿಸುವ ಮೂಲಕ ತ್ಯಾಜ್ಯವನ್ನು ಎಸೆಯದಂತೆ ಫಲಕಗಳನ್ನು ಅಳವಡಿಸಬೇಕು ಮತ್ತು ಅಂಡರ್ ಪಾಸ್ ಮಾಡಬೇಕು. 5 ವರ್ಷ ಹೆದ್ದಾರಿ ಪ್ರಾಽಕಾರದವರೇ ಸರ್ವಿಸ್ ನೀಡಬೇಕೆಂದು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚಿಸಲಾಗಿದೆ.
– ಡಾ. ಐ.ಬಿ. ಪ್ರಭುಗೌಡ, ಮೈಸೂರು ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ

ಎನ್‌ಎಚ್-275 ಹೆದ್ದಾರಿಯು ಸಂಪೂರ್ಣ ಹಸಿರು ವಲಯದಲ್ಲೇ ಹೋಗಲಿದೆ. ಹೀಗಾಗಿ ವನ್ಯಜೀವಿ ವಲಯದ ಅಧಿಕಾರಿಗಳು ರಂಗನತಿಟ್ಟು ಪ್ರದೇಶದಲ್ಲಿ ಹಾದು ಹೋಗುವ ರಸ್ತೆಯಲ್ಲಿ 1 ಕಿಮೀ.ವರೆಗೆ ತಡೆಗೋಡೆಯನ್ನು ಎತ್ತರವಾಗಿ ನಿರ್ಮಿಸಬೇಕು. ಆ ಬದಿಯಲ್ಲಿ ಎತ್ತರದ ಮರಗಳನ್ನು ಬೆಳೆಸಿ ವಾಹನಗಳ ಬೆಳಕು ರಂಗನತಿಟ್ಟಿಗೆ ಬೆಳಕು ಬೀಳದಂತೆ ತಡೆಗೋಡೆ ಕಟ್ಟಬೇಕು. ಕೆ.ಆರ್.ಎಸ್. ರಸ್ತೆಯಿಂದ ಪಾಲಹಳ್ಳಿಯ ಹತ್ತಿರ ಬಂದಾಗ ವಾಹನಗಳ ಬೆಳಕು ಬೀಳಲಿದ್ದು,ಆ ಪ್ರದೇಶದಲ್ಲಿ ಬೆಳಕು ಬೀಳದಂತೆ ಕ್ರಮವಹಿಸಿದರೆ ಪ್ರಾಣಿ-ಪಕ್ಷಿ ಸಂಕುಲಕ್ಕೆ ತೊಂದರೆಯಾಗುವುದಿಲ್ಲ. ಈ ಹೆದ್ದಾರಿಯಲ್ಲಿ ಸರ್ವಿಸ್ ರಸ್ತೆ ಮಾಡಿದರೆ ರೈತರು ಬೆಳೆಗಳನ್ನು ಮಾರುಕಟ್ಟೆಗೆ ಸಾಗಿಸಲು ಹಾಗೂ ಪ್ರವಾಸಿಗರಿಗೆ ಅನುಕೂಲವಾಗಲಿದೆ.

– ಡಾ. ಪ್ರಶಾಂತ್, ಪಾಲಹಳ್ಳಿ

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸಾವಿರಾರು ಸೈನಿಕರ ಜೀವನ್ಮರಣದ ಪ್ರಶ್ನೆಯಾಗಿತ್ತು

ಕೈಲಾಶ್ ಶ್ರೇಣಿಯ ರೇಚಿನ್ ಲಾ ಪಾಸ್‌ನತ್ತ ಮುನ್ನುಗ್ಗುತ್ತಿರುವ ಚೀನಾದ ಟ್ಯಾಂಕ್‌ಗಳನ್ನು ತಡೆಯಲು ಒಂದೇ ಒಂದು ಗುಂಡು ಹಾರಿಸಿದರೂ ಆ ದೇಶದೊಂದಿಗೆ…

1 hour ago

ಸಹಸ್ರಾರು ಕಟ್ಟಡ ಕಾರ್ಮಿಕರ ಗುರುತಿನ ಚೀಟಿ ಅಮಾನ್ಯ

ಬೋಗಸ್ ಕಾರ್ಡ್ ಹೆಸರಿನಲ್ಲಿ ಕ್ರಮ; ನೈಜ ಕಾರ್ಮಿಕರಿಗೆ ಸಮಸ್ಯೆ ಕೃಷ್ಣ ಸಿದ್ದಾಪುರ ಸಿದ್ದಾಪುರ: ಕಟ್ಟಡ ಮತ್ತು ಇತರೇ ನಿರ್ಮಾಣ ಕಾರ್ಮಿಕರ ಕಲ್ಯಾಣ…

2 hours ago

ದೇವರಗುಡ್ಡನಾಗಬೇಕಿದ್ದ ದುಂಡು ಮಾದೇವಸ್ವಾಮಿ ಚಿತ್ರಗಾರನಾದ ವೃತ್ತಾಂತ

ಸ್ವಾಮಿ ಪೊನ್ನಾಚಿ ದಿನಬೆಳಗಾದರೆ ಮಾದಪ್ಪ, ಮಂಟೇಸ್ವಾಮಿಯ ಹಾಡು ಹಾಡಿಕೊಂಡು ಬರುವ ಜನಪದರ ದಂಡು. ಸುತ್ತಮುತ್ತ ದೇವರಗುಡ್ಡ ನೀಲಗಾರರ ಹಿಂಡು. ಊರೂರಿ…

2 hours ago

ಅಪ್ಪಾಜಿಯ ವಾತ್ಸಲ್ಯದ ಛಡಿಯೇಟಿನ ‘ಪಾಠ’ಗಳು ನೆನಪಾಗುತ್ತಿವೆ…

ರವಿ ಕೋಟಿ ಬಾಲ್ಯದಲ್ಲಿ ನಾನು ಕಂಟ್ರೋಲಿಗೆ ಬರದಷ್ಟು ತುಂಟನಾಗಿದ್ದೆ. ಯಾರೂ ನನ್ನನ್ನು ಕಂಟ್ರೋಲ್ ಮಾಡಲಾಗುತ್ತಿರಲಿಲ್ಲ. ಯಾಕೆಂದರೆ ನಾನೇ ನನ್ನ ಕಂಟ್ರೋಲಿನಲ್ಲಿ…

2 hours ago

ಹೀಗಾದರೂ ಆದರೆ ಭ್ರಮೆಗಳು ಕರಗಿ ಆಧ್ಯಾತ್ಮಿಕ ವಿನಯದ ಪರಿಚಯವಾಗಬಹುದೇನೋ…

ಸುಕನ್ಯಾ ಕನಾರಳ್ಳಿ ಒಂದು ಮಠ. ಅಲ್ಲಿ ಮರಿಸ್ವಾಮಿಯಾಗಿದ್ದವರು ಪೀಠಾಧಿಪತಿ ತೀರಿಕೊಂಡ ಮೇಲೆ ಏನೇನೋ ಕಾರಣಗಳ ದೆಸೆಯಿಂದ ಪೀಠವನ್ನು ಏರಲು ಆಗದೆ…

2 hours ago

ಅಳಿಯುತ್ತಿರುವ ಸೋಬಾನೆ ಹಾಡುಗಳ ಕಲಿಸುತ್ತಿರುವ ಕಲೆಗಾರ

ಡಾ.ಮೈಸೂರು ಉಮೇಶ್ ಸೋಬಾನೆ ಪದಗಳು ಗ್ರಾಮೀಣ ಮಹಿಳೆಯರಿಗೆ ಒಲಿದು ಬಂದಿರುವ ಜನಪದ ಗಾಯನ ಪ್ರಕಾರ. ಇದಕ್ಕೆ ಅಪವಾದವೆಂಬಂತೆ ಮಂಡ್ಯ ಜಿಲ್ಲೆಯ…

2 hours ago