ಮದ್ದೂರು: ಇಲ್ಲಿನ ಭಾರತಿ ನಗರದಲ್ಲಿ ಏರ್ಪಡಿಸಿರುವ ಜೆಡಿಎಸ್ ಸದಸ್ಯತ್ವ ಡಿಜಿಟಲ್ ಅಭಿಯಾನಕ್ಕೆ ಚಾಲನೆ ನೀಡಲು ಆಗಮಿಸಿದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರಿಗೆ ಬೃಹತ್ ಅನಾನಸ್ ಹಾರ ಹಾಕಿ ಸ್ವಾಗತ ಕೋರಲಾಯಿತು.
ಮಾಜಿ ಶಾಸಕ ಡಿಸಿ ತಮ್ಮಣ್ಣ, ಮಾಜಿ ಶಾಸಕ ಅನ್ನದಾನಿ, ಜೆಡಿಎಸ್ ಜಿಲ್ಲಾಧ್ಯಕ್ಷ ಡಿ ರಮೇಶ್, ಕಾರ್ಯಾಧ್ಯಕ್ಷ ರಾಜಣ್ಣ ನೇತೃತ್ವದಲ್ಲಿ ಅದ್ಧೂರಿಯಾಗಿ ಸ್ವಾಗತ ಕೋರಲಾಯಿತು.
ಈ ವೇಳೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ ಅವರು, ಇಂದಿನಿಂದ ಮಂಡ್ಯ ಜಿಲ್ಲೆ, ಮದ್ದೂರಿನ ಭಾರತಿನಗರದಲ್ಲಿ ಜೆಡಿಎಸ್ ಡಿಜಿಟಲ್ ಅಭಿಯಾನಕ್ಕೆ ಚಾಲನೆ ನೀಡಲಿದ್ದು, ಸಮಾವೇಶಕ್ಕೆ ಕಾರ್ಯಕರ್ತರು, ಜೆಡಿಎಸ್ ಪಕ್ಷದ ಹಿರಿಯ ಹಾಗೂ ಕಿರಿಯ ಮುಖಂಡರು ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ನಂತರ ಮಳವಳ್ಳಿ ರಸ್ತೆಯಲ್ಲಿರುವ ಪ್ರಸಿದ್ಧ ಹೋಟೆಲ್ ರವಿ ಪಿಂಟು ಅವರು ನಿಖಿಲ್ ಕುಮಾರಸ್ವಾಮಿಗೆ ಚಹಾ ನೀಡಿ ತಮ್ಮ ಅಭಿಮಾನ ವ್ಯಕ್ತಪಡಿಸಿದರು.
ತೋಪ್ಪನಹಳ್ಳಿ ಕೆಂಗಲ್ ಗೌಡ ಅವರು ನಿಖಿಲ್ ಕುಮಾರಸ್ವಾಮಿಗೆ ತಿರುಪತಿ ಲಾಡು ಪ್ರಸಾದ ನೀಡಿ ಮುಂದಿನ ನಿಮ್ಮ ಭವಿಷ್ಯ ಯಶಸ್ವಿಯಾಗಲೆಂದು ಹಾರೈಸಿದರು.
ಎಪಿಎಂಸಿ ಮಾರುಕಟ್ಟೆಯ ವರ್ತಕ ರವಿ ಚನ್ನಸಂದ್ರ ಉಮೇಶ್ ಸೇರಿದಂತೆ ಇತರರು ನಿಖಿಲ್ ಕುಮಾರಸ್ವಾಮಿ ಬೃಹತ್ ಗುಲಾಬಿ ಹಾರ ಹಾಕಿ ಅಭಿನಂದಿಸಿದರು.
ಪ್ರಶಾಂತ್ ಎನ್ ಮಲ್ಲಿಕ್ ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…
ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…
ಮಹಾದೇಶ್ ಎಂ ಗೌಡ ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…
ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…
ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್ಗೌಡಗೆ ಹೈಕೋರ್ಟ್ ತೀವ್ರ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…