ಮಂಡ್ಯ

ಮದ್ದೂರಿನಲ್ಲಿ ನಿಖಿಲ್‌ ಕುಮಾರಸ್ವಾಮಿಗೆ ಅದ್ಧೂರಿ ಸ್ವಾಗತ: ಬೃಹತ್‌ ಅನಾನಸ್‌ ಹಾರ ಹಾಕಿದ ಅಭಿಮಾನಿಗಳು

ಮದ್ದೂರು: ಇಲ್ಲಿನ ಭಾರತಿ ನಗರದಲ್ಲಿ ಏರ್ಪಡಿಸಿರುವ ಜೆಡಿಎಸ್ ಸದಸ್ಯತ್ವ ಡಿಜಿಟಲ್ ಅಭಿಯಾನಕ್ಕೆ ಚಾಲನೆ ನೀಡಲು ಆಗಮಿಸಿದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರಿಗೆ ಬೃಹತ್‌ ಅನಾನಸ್‌ ಹಾರ ಹಾಕಿ ಸ್ವಾಗತ ಕೋರಲಾಯಿತು.

ಮಾಜಿ ಶಾಸಕ ಡಿಸಿ ತಮ್ಮಣ್ಣ, ಮಾಜಿ ಶಾಸಕ ಅನ್ನದಾನಿ, ಜೆಡಿಎಸ್ ಜಿಲ್ಲಾಧ್ಯಕ್ಷ ಡಿ ರಮೇಶ್, ಕಾರ್ಯಾಧ್ಯಕ್ಷ ರಾಜಣ್ಣ ನೇತೃತ್ವದಲ್ಲಿ ಅದ್ಧೂರಿಯಾಗಿ ಸ್ವಾಗತ ಕೋರಲಾಯಿತು.

ಈ ವೇಳೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ ಅವರು, ಇಂದಿನಿಂದ ಮಂಡ್ಯ ಜಿಲ್ಲೆ, ಮದ್ದೂರಿನ ಭಾರತಿನಗರದಲ್ಲಿ ಜೆಡಿಎಸ್ ಡಿಜಿಟಲ್ ಅಭಿಯಾನಕ್ಕೆ ಚಾಲನೆ ನೀಡಲಿದ್ದು, ಸಮಾವೇಶಕ್ಕೆ ಕಾರ್ಯಕರ್ತರು, ಜೆಡಿಎಸ್ ಪಕ್ಷದ ಹಿರಿಯ ಹಾಗೂ ಕಿರಿಯ ಮುಖಂಡರು ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ನಂತರ ಮಳವಳ್ಳಿ ರಸ್ತೆಯಲ್ಲಿರುವ ಪ್ರಸಿದ್ಧ ಹೋಟೆಲ್ ರವಿ ಪಿಂಟು ಅವರು ನಿಖಿಲ್‌ ಕುಮಾರಸ್ವಾಮಿಗೆ ಚಹಾ ನೀಡಿ ತಮ್ಮ ಅಭಿಮಾನ ವ್ಯಕ್ತಪಡಿಸಿದರು.

ತೋಪ್ಪನಹಳ್ಳಿ ಕೆಂಗಲ್ ಗೌಡ ಅವರು ನಿಖಿಲ್ ಕುಮಾರಸ್ವಾಮಿಗೆ ತಿರುಪತಿ ಲಾಡು ಪ್ರಸಾದ ನೀಡಿ ಮುಂದಿನ ನಿಮ್ಮ ಭವಿಷ್ಯ ಯಶಸ್ವಿಯಾಗಲೆಂದು ಹಾರೈಸಿದರು.

ಎಪಿಎಂಸಿ ಮಾರುಕಟ್ಟೆಯ ವರ್ತಕ ರವಿ ಚನ್ನಸಂದ್ರ ಉಮೇಶ್ ಸೇರಿದಂತೆ ಇತರರು ನಿಖಿಲ್ ಕುಮಾರಸ್ವಾಮಿ ಬೃಹತ್ ಗುಲಾಬಿ ಹಾರ ಹಾಕಿ ಅಭಿನಂದಿಸಿದರು.

ಆಂದೋಲನ ಡೆಸ್ಕ್

Recent Posts

ನನಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ: ಸಚಿವ ದಿನೇಶ್‌ ಗುಂಡೂರಾವ್‌

ಮೈಸೂರು: ಪಕ್ಷದಲ್ಲಿ ಎಲ್ಲರಿಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು.…

39 mins ago

ಮಾಸ್ಕ್‌ ಮ್ಯಾನ್‌ ಚಿನ್ನಯ್ಯನಿಗೆ ಜಾಮೀನು ಸಿಕ್ಕರೂ ಬಿಡುಗಡೆ ಭಾಗ್ಯವಿಲ್ಲ

ಮಂಗಳೂರು: ಧರ್ಮಸ್ಥಳದಲ್ಲಿ ಶವಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರನಾಗಿ ಬಂದ ಬಳಿಕ ಆರೋಪಿಯಾಗಿ ಜೈಲಿನಲ್ಲಿರುವ ಮಾಸ್ಕ್‌ ಮ್ಯಾನ್‌ ಚಿನ್ನಯ್ಯನಿಗೆ ಜಾಮೀನು ಸಿಕ್ಕಿ…

49 mins ago

ಜಗದ್ಗುರು ಶ್ರೀ ಶಿವರಾತ್ರಿ ಡಾ.ರಾಜೇಂದ್ರ ಶ್ರೀಗಳ 110ನೇ ಜಯಂತೋತ್ಸವ, ಶ್ರೀ ನಂಜುಂಡಸ್ವಾಮಿಗಳ 16ನೇ ಸಂಸ್ಮರಣೋತ್ಸವ

ಟಿ.ನರಸೀಪುರ: ಜಗದ್ಗುರು ಶ್ರೀ ಶಿವರಾತ್ರಿ ಡಾ.ರಾಜೇಂದ್ರ ಶ್ರೀಗಳ 110ನೇ ಜಯಂತೋತ್ಸವ ಹಾಗೂ ಶ್ರೀ ನಂಜುಂಡಸ್ವಾಮಗಳ 16ನೇ ಸಂಸ್ಮರಣೋತ್ಸವ ಕಾರ್ಯಕ್ರಮ ಹೊಸಮಠದ…

1 hour ago

ರೆಪೋ ದರ ಕಡಿತಗೊಳಿಸಿದ ಭಾರತೀಯ ರಿಸರ್ವ್ ಬ್ಯಾಂಕ್

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ರೆಪೊ ದರವನ್ನು ಶೇ. 5.5% ರಿಂದ 5.25ಕ್ಕೆ ಅಂದರೆ 25 ಬೇಸಿಸ್ ಪಾಯಿಂಟ್‍ಗಳಷ್ಟು…

1 hour ago

ಮಂಡ್ಯ ಕೃಷಿ ಪ್ರದಾನ ಜಿಲ್ಲೆ: ಸಿಎಂ ಸಿದ್ದರಾಮಯ್ಯ

ಮಂಡ್ಯ: ಲ್ಯಾಬ್‌ ಟು ಲ್ಯಾಂಡ್‌ ಆದರೆ ಮಾತ್ರ ರೈತರಿಗೆ ಸಂಪೂರ್ಣ ಅನುಕೂಲವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಈ ಕುರಿತು…

1 hour ago

ಹೊಸ ದಾಖಲೆ ನಿರ್ಮಿಸಿದ ಬೆಂಗಳೂರು ಪೊಲೀಸರು: ಏನದು ಗೊತ್ತಾ?

ಬೆಂಗಳೂರು: ಮಾದಕದ್ರವ್ಯ ಮಾರಾಟ ಮತ್ತು ಮಾದಕದ್ರವ್ಯ ಸೇವನೆಯನ್ನು ನಿಗ್ರಹಿಸುವ ನಿಟ್ಟಿನಲ್ಲಿ ಬೆಂಗಳೂರು ಪೊಲೀಸರು ಹೊಸ ದಾಖಲೆ ನಿರ್ಮಿಸಿದ್ದಾರೆ. ಪ್ರಸಕ್ತ ಸಾಲಿನ…

2 hours ago