ಮಂಡ್ಯ

ಮೈಷುಗರ್‌ ಕಾರ್ಖಾನೆಯ ಭ್ರಷ್ಟಾಚಾರದ ತನಿಖೆಯೇ ನಡೆದಿಲ್ಲ ; ಆರೋಪ

ಮಂಡ್ಯ: ಮೈಷುಗರ್ ಸಕ್ಕರೆ ಕಾರ್ಖಾನೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿರುವ ಸಂಬಂಧ ಜಿಲ್ಲಾಧಿಕಾರಿಗಳಿಗೆ ದೂರು ನೀಡಿದರೂ, ಜಿಲ್ಲಾಧಿಕಾರಿಗಳು ಇದುವರೆಗೆ ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ ಎಂದು ರಾಜ್ಯ ಮಾಹಿತಿ ಹಕ್ಕು ಸಮಿತಿಯ ಮಂಡ್ಯ ತಾಲೂಕು ಅಧ್ಯಕ್ಷ  ಶಿವಕುಮಾರ್ ಆರೋಪಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಗುರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಷುಗರ್ ಕಂಪನಿಯ ಪ್ರಧಾನ ವ್ಯವಸ್ಥಾಪಕ ಅಪ್ಪಾಸಾಹೇಬ ಚನ್ನಪ್ಪ ಪಾಟೀಲ್ ಮೇಲೆ ಭ್ರಷ್ಟಾಚಾರ ಮಾಡಿರುವ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಇದೇ ಜನವರಿ ೨೦ರಂದು ದೂರು ಸಲ್ಲಿಸಿದ್ದು, ಅವರ ವಿರುದ್ಧ ಪರಿಶೀಲನೆ ನಡೆಸಿ ಮಾಹಿತಿ ಹಾಗೂ ಹಿಂಬರಹ ನೀಡಲು ಸೂಚಿಸಿದ್ದು, ಇದೇ ಫೆಬ್ರವರಿ ೧೩ರಂದು ಸರ್ಕಾರದ ಕಾರ್ಯದರ್ಶಿಗಳೂ ಅಗತ್ಯ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದರೂ ಜಿಲ್ಲಾಧಿಕಾರಿಗಳು ಯಾವುದೇ ಕ್ರಮ ವಹಿಸಿಲ್ಲ ಎಂದು ದೂರಿದರು.

೨೦೨೨-೨೩ನೇ ಸಾಲಿನಲ್ಲಿ ಸಕ್ಕರೆ, ಕಾಕಾಂಬಿ ಮತ್ತು ವಿದ್ಯುತ್ ಆಮದಿನಿಂದ, ೨೦೨೩ರ ಮೇ ಮತ್ತು ಜೂನ್‌ನಲ್ಲಿ ಸಕ್ಕರೆ ಮಾರಾಟ ಮಾಡದೇ ನಷ್ಟವುಂಟಾಗಿದ್ದು, ಮೈಷುಗರ್ ಅಧ್ಯಕ್ಷರ ವಾಹನಕ್ಕೆ ಇಂಧನ ತುಂಬಿಸುವಲ್ಲಿಯೂ ಆಡಳಿತದ ದುರುಪಯೋಗವಾಗಿದೆ ಎಂದರು.

ಸಿಸಿಟಿವಿ ಅಳವಡಿಕೆ ಮಾಡಿದ ನಂತರ ಟೆಂಡರ್ ಕರೆದು ಅಕ್ರಮ, ಕಾನೂನು ಬಾಹಿರವಾಗಿ ಅಧಿಕಾರಿಗಳಿಗೆ ಸೂಚನೆ, ಲಕ್ಷಾಂತರ ಬೆಲೆಯ ಮರಗಳನ್ನು ಕೇವಲ ೭೦ ಸಾವಿರಕ್ಕೆ ಮಾರಾಟ, ಉತ್ತಮ ಆಡಳಿತ ನಡೆಸುತ್ತಿದ್ದ ಅಧಿಕಾರಿಯನ್ನು ೭ ತಿಂಗಳಿಗೆ ವರ್ಗಾವಣೆ ನೀಡಿದ್ದು, ಅಧಿಕಾರಿ ದಿಟ್ಟತನದಿಂದ ತಡೆಯಾಜ್ಞೆ ತಂದಿದ್ದಾರೆಂದು ಹೇಳಿದರು.

೨೦೨೩ರಿಂದ ಇಲ್ಲಿಯವರೆಗೂ ೪ ಕೋಟಿ ರೂ ಕಾಮಗಾರಿಗಳನ್ನು ಮಾಡಿದ್ದು, ಅವುಗಳೂ ಕೂಡ ಕಳಪೆಯಿಂದ ಕೂಡಿದೆ. ಅಲ್ಲದೇ ಕಬ್ಬು ಸಾಗಾಣೆಯ ವೆಚ್ಚ ನೀಡಲಿಲ್ಲವೆಂದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿ ಕಬ್ಬು ಬೆಳೆಗಾರ ಪತ್ರಬರೆದಿರುವುದನ್ನು ಖಂಡಿಸಿ ಮೈಷುಗರ್ ಅಧ್ಯಕ್ಷರ ವಿರುದ್ಧ ಹರಿಹಾಯ್ದರು.

ಗೋಷ್ಠಿಯಲ್ಲಿ ದೀಪಕ್, ವಿನೋಬ್, ಸಚಿನ್, ಪ್ರಸನ್ನಕುಮಾರ್, ಸುನಿಲ್ ಇದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಚಿರತೆ ಸೆರೆ | ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…

6 hours ago

ಮೈಸೂರಲ್ಲಿ ಡ್ರಗ್ಸ್‌ ಉತ್ಪಾದನೆ ಶಂಕೆ : ಓರ್ವನ ಬಂಧನ

ಮೈಸೂರು : ಬುಧವಾರವಷ್ಟೇ ಹೆಬ್ಬಾಳ್‌ನಲ್ಲಿ ಶೆಡ್‌ವೊಂದರ ಮೇಲೆ ದಾಳಿ ನಡೆಸಿದ್ದ ಎನ್‌ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…

6 hours ago

ತೇಗದ ಮರ ಅಕ್ರಮ ಕಟಾವು : ಓರ್ವ ಬಂಧನ

ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…

7 hours ago

ಮೈಸೂರು ವಿ.ವಿ | ಯುಜಿಸಿ ಉದ್ದೇಶಿತ ಹೊಸ ನಿಯಾಮವಳಿ ಜಾರಿಗೆ ಒತ್ತಾಯ

ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…

8 hours ago

ಸರ್ಕಾರಿ ನೌಕರರಿಗೆ ತಿಂಗಳಿಗೊಮ್ಮೆ ಖಾದಿ ಧಿರಿಸು ಕಡ್ಡಾಯ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…

8 hours ago

ಕ್ಯಾಂಪಸ್‌ಗಳಲ್ಲಿ ಜಾತಿ ತಾರತಮ್ಯ : ಯುಜಿಸಿ ನಿಯಮಾವಳಿಗೆ ʻಸುಪ್ರೀಂʼ ತಡೆ

ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…

9 hours ago