ಮಂಡ್ಯ

ಮೈಷುಗರ್‌ ಕಾರ್ಖಾನೆಯ ಭ್ರಷ್ಟಾಚಾರದ ತನಿಖೆಯೇ ನಡೆದಿಲ್ಲ ; ಆರೋಪ

ಮಂಡ್ಯ: ಮೈಷುಗರ್ ಸಕ್ಕರೆ ಕಾರ್ಖಾನೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿರುವ ಸಂಬಂಧ ಜಿಲ್ಲಾಧಿಕಾರಿಗಳಿಗೆ ದೂರು ನೀಡಿದರೂ, ಜಿಲ್ಲಾಧಿಕಾರಿಗಳು ಇದುವರೆಗೆ ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ ಎಂದು ರಾಜ್ಯ ಮಾಹಿತಿ ಹಕ್ಕು ಸಮಿತಿಯ ಮಂಡ್ಯ ತಾಲೂಕು ಅಧ್ಯಕ್ಷ  ಶಿವಕುಮಾರ್ ಆರೋಪಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಗುರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಷುಗರ್ ಕಂಪನಿಯ ಪ್ರಧಾನ ವ್ಯವಸ್ಥಾಪಕ ಅಪ್ಪಾಸಾಹೇಬ ಚನ್ನಪ್ಪ ಪಾಟೀಲ್ ಮೇಲೆ ಭ್ರಷ್ಟಾಚಾರ ಮಾಡಿರುವ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಇದೇ ಜನವರಿ ೨೦ರಂದು ದೂರು ಸಲ್ಲಿಸಿದ್ದು, ಅವರ ವಿರುದ್ಧ ಪರಿಶೀಲನೆ ನಡೆಸಿ ಮಾಹಿತಿ ಹಾಗೂ ಹಿಂಬರಹ ನೀಡಲು ಸೂಚಿಸಿದ್ದು, ಇದೇ ಫೆಬ್ರವರಿ ೧೩ರಂದು ಸರ್ಕಾರದ ಕಾರ್ಯದರ್ಶಿಗಳೂ ಅಗತ್ಯ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದರೂ ಜಿಲ್ಲಾಧಿಕಾರಿಗಳು ಯಾವುದೇ ಕ್ರಮ ವಹಿಸಿಲ್ಲ ಎಂದು ದೂರಿದರು.

೨೦೨೨-೨೩ನೇ ಸಾಲಿನಲ್ಲಿ ಸಕ್ಕರೆ, ಕಾಕಾಂಬಿ ಮತ್ತು ವಿದ್ಯುತ್ ಆಮದಿನಿಂದ, ೨೦೨೩ರ ಮೇ ಮತ್ತು ಜೂನ್‌ನಲ್ಲಿ ಸಕ್ಕರೆ ಮಾರಾಟ ಮಾಡದೇ ನಷ್ಟವುಂಟಾಗಿದ್ದು, ಮೈಷುಗರ್ ಅಧ್ಯಕ್ಷರ ವಾಹನಕ್ಕೆ ಇಂಧನ ತುಂಬಿಸುವಲ್ಲಿಯೂ ಆಡಳಿತದ ದುರುಪಯೋಗವಾಗಿದೆ ಎಂದರು.

ಸಿಸಿಟಿವಿ ಅಳವಡಿಕೆ ಮಾಡಿದ ನಂತರ ಟೆಂಡರ್ ಕರೆದು ಅಕ್ರಮ, ಕಾನೂನು ಬಾಹಿರವಾಗಿ ಅಧಿಕಾರಿಗಳಿಗೆ ಸೂಚನೆ, ಲಕ್ಷಾಂತರ ಬೆಲೆಯ ಮರಗಳನ್ನು ಕೇವಲ ೭೦ ಸಾವಿರಕ್ಕೆ ಮಾರಾಟ, ಉತ್ತಮ ಆಡಳಿತ ನಡೆಸುತ್ತಿದ್ದ ಅಧಿಕಾರಿಯನ್ನು ೭ ತಿಂಗಳಿಗೆ ವರ್ಗಾವಣೆ ನೀಡಿದ್ದು, ಅಧಿಕಾರಿ ದಿಟ್ಟತನದಿಂದ ತಡೆಯಾಜ್ಞೆ ತಂದಿದ್ದಾರೆಂದು ಹೇಳಿದರು.

೨೦೨೩ರಿಂದ ಇಲ್ಲಿಯವರೆಗೂ ೪ ಕೋಟಿ ರೂ ಕಾಮಗಾರಿಗಳನ್ನು ಮಾಡಿದ್ದು, ಅವುಗಳೂ ಕೂಡ ಕಳಪೆಯಿಂದ ಕೂಡಿದೆ. ಅಲ್ಲದೇ ಕಬ್ಬು ಸಾಗಾಣೆಯ ವೆಚ್ಚ ನೀಡಲಿಲ್ಲವೆಂದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿ ಕಬ್ಬು ಬೆಳೆಗಾರ ಪತ್ರಬರೆದಿರುವುದನ್ನು ಖಂಡಿಸಿ ಮೈಷುಗರ್ ಅಧ್ಯಕ್ಷರ ವಿರುದ್ಧ ಹರಿಹಾಯ್ದರು.

ಗೋಷ್ಠಿಯಲ್ಲಿ ದೀಪಕ್, ವಿನೋಬ್, ಸಚಿನ್, ಪ್ರಸನ್ನಕುಮಾರ್, ಸುನಿಲ್ ಇದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಂಡ್ಯ | ಪೊಲೀಸ್ ಠಾಣೆಯಿಂದ ತಪ್ಪಿಸಿಕೊಂಡು ಬಂದಿದ್ದ ಕೈದಿ ಜನರ ಕೈಗೆ ಸಿಕ್ಕಿಬಿದ್ದ

ಮಂಡ್ಯ : ಕೈಯ್ಯಲ್ಲಿ ಬೇಡಿ ಹಾಕಿ ಕೊಂಡಿರುವಾಗಲೇ ಠಾಣೆಯಿಂದ ತಪ್ಪಿಸಿಕೊಂಡು ಬಂದ ಕಳ್ಳನೊಬ್ಬ ಜನರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಇಲ್ಲಿನ…

48 mins ago

ದಸರಾ ಗಜಪಡೆ ವೀಕ್ಷಣೆ ಟಿಕೆಟ್‌ ರದ್ದು

ಮೈಸೂರು: ಮೊನ್ನೆಯಷ್ಟೇ ಲಿಂಗಾಂಬುಧಿ ಉದ್ಯಾನ ಪ್ರವೇಶಕ್ಕೆ ಶುಲ್ಕ ನಿಗದಿಪಡಿಸಿ ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಅರಮನೆ ಅಂಗಳದಲ್ಲಿ…

2 hours ago

ನೇಪಾಳ ದುರಂತ | ಮೃತದೇಹದ ಮೇಲಿದ್ದ ಚಿನ್ನ ಕಳವು ; ಇಬ್ಬರು ಆರೋಪಿಗಳ ಬಂಧನ

ಎಚ್ಚೆತ್ತ ಪೊಲೀಸ್ ಆಡಳಿತ ; ಇಬ್ಬರು ಆರೋಪಿಗಳ ಬಂಧನ ಕಠ್ಮಂಡು : ನೇಪಾಳದಲ್ಲಿ ಸಂಭವಿಸಿರುವ ಭೀಕರ ಮಹಾಪೂರ ಹಾಗೂ ಭೂಕುಸಿತದಿಂದಾಗಿ…

2 hours ago

ಸೋನಿಯಾ ಗಾಂಧಿ ಆತ್ಮಚರಿತ್ರೆ ; ರಾಜಕೀಯ, ಸಾಹಿತ್ಯಿಕ ವಲಯದಲ್ಲಿ ಕೋಲಾಹಲ

ಹೊಸದಿಲ್ಲಿ : ಯುಪಿಎ ಒಕ್ಕೂಟದ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ…

2 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ಈ ಬಾರಿ ಮೆರವಣಿಗೆಗೆ ಸೇನೆಗೆ ಆಹ್ವಾನ ಎಂದ ಸಿಎಂ ಡಿಕೆಶಿ

ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್‌…

7 hours ago

ಮೈಕ್ರೋ ಫೈನಾನ್ಸ್‌ ಕಿರುಕುಳ: ವ್ಯಕ್ತಿ ಆತ್ಮಹತ್ಯೆ

ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…

10 hours ago