ಮಂಡ್ಯ: ಮೈಷುಗರ್ ಸಕ್ಕರೆ ಕಾರ್ಖಾನೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿರುವ ಸಂಬಂಧ ಜಿಲ್ಲಾಧಿಕಾರಿಗಳಿಗೆ ದೂರು ನೀಡಿದರೂ, ಜಿಲ್ಲಾಧಿಕಾರಿಗಳು ಇದುವರೆಗೆ ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ ಎಂದು ರಾಜ್ಯ ಮಾಹಿತಿ ಹಕ್ಕು ಸಮಿತಿಯ ಮಂಡ್ಯ ತಾಲೂಕು ಅಧ್ಯಕ್ಷ ಶಿವಕುಮಾರ್ ಆರೋಪಿಸಿದರು.
ನಗರದ ಪತ್ರಕರ್ತರ ಭವನದಲ್ಲಿ ಗುರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಷುಗರ್ ಕಂಪನಿಯ ಪ್ರಧಾನ ವ್ಯವಸ್ಥಾಪಕ ಅಪ್ಪಾಸಾಹೇಬ ಚನ್ನಪ್ಪ ಪಾಟೀಲ್ ಮೇಲೆ ಭ್ರಷ್ಟಾಚಾರ ಮಾಡಿರುವ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಇದೇ ಜನವರಿ ೨೦ರಂದು ದೂರು ಸಲ್ಲಿಸಿದ್ದು, ಅವರ ವಿರುದ್ಧ ಪರಿಶೀಲನೆ ನಡೆಸಿ ಮಾಹಿತಿ ಹಾಗೂ ಹಿಂಬರಹ ನೀಡಲು ಸೂಚಿಸಿದ್ದು, ಇದೇ ಫೆಬ್ರವರಿ ೧೩ರಂದು ಸರ್ಕಾರದ ಕಾರ್ಯದರ್ಶಿಗಳೂ ಅಗತ್ಯ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದರೂ ಜಿಲ್ಲಾಧಿಕಾರಿಗಳು ಯಾವುದೇ ಕ್ರಮ ವಹಿಸಿಲ್ಲ ಎಂದು ದೂರಿದರು.
೨೦೨೨-೨೩ನೇ ಸಾಲಿನಲ್ಲಿ ಸಕ್ಕರೆ, ಕಾಕಾಂಬಿ ಮತ್ತು ವಿದ್ಯುತ್ ಆಮದಿನಿಂದ, ೨೦೨೩ರ ಮೇ ಮತ್ತು ಜೂನ್ನಲ್ಲಿ ಸಕ್ಕರೆ ಮಾರಾಟ ಮಾಡದೇ ನಷ್ಟವುಂಟಾಗಿದ್ದು, ಮೈಷುಗರ್ ಅಧ್ಯಕ್ಷರ ವಾಹನಕ್ಕೆ ಇಂಧನ ತುಂಬಿಸುವಲ್ಲಿಯೂ ಆಡಳಿತದ ದುರುಪಯೋಗವಾಗಿದೆ ಎಂದರು.
ಸಿಸಿಟಿವಿ ಅಳವಡಿಕೆ ಮಾಡಿದ ನಂತರ ಟೆಂಡರ್ ಕರೆದು ಅಕ್ರಮ, ಕಾನೂನು ಬಾಹಿರವಾಗಿ ಅಧಿಕಾರಿಗಳಿಗೆ ಸೂಚನೆ, ಲಕ್ಷಾಂತರ ಬೆಲೆಯ ಮರಗಳನ್ನು ಕೇವಲ ೭೦ ಸಾವಿರಕ್ಕೆ ಮಾರಾಟ, ಉತ್ತಮ ಆಡಳಿತ ನಡೆಸುತ್ತಿದ್ದ ಅಧಿಕಾರಿಯನ್ನು ೭ ತಿಂಗಳಿಗೆ ವರ್ಗಾವಣೆ ನೀಡಿದ್ದು, ಅಧಿಕಾರಿ ದಿಟ್ಟತನದಿಂದ ತಡೆಯಾಜ್ಞೆ ತಂದಿದ್ದಾರೆಂದು ಹೇಳಿದರು.
೨೦೨೩ರಿಂದ ಇಲ್ಲಿಯವರೆಗೂ ೪ ಕೋಟಿ ರೂ ಕಾಮಗಾರಿಗಳನ್ನು ಮಾಡಿದ್ದು, ಅವುಗಳೂ ಕೂಡ ಕಳಪೆಯಿಂದ ಕೂಡಿದೆ. ಅಲ್ಲದೇ ಕಬ್ಬು ಸಾಗಾಣೆಯ ವೆಚ್ಚ ನೀಡಲಿಲ್ಲವೆಂದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿ ಕಬ್ಬು ಬೆಳೆಗಾರ ಪತ್ರಬರೆದಿರುವುದನ್ನು ಖಂಡಿಸಿ ಮೈಷುಗರ್ ಅಧ್ಯಕ್ಷರ ವಿರುದ್ಧ ಹರಿಹಾಯ್ದರು.
ಗೋಷ್ಠಿಯಲ್ಲಿ ದೀಪಕ್, ವಿನೋಬ್, ಸಚಿನ್, ಪ್ರಸನ್ನಕುಮಾರ್, ಸುನಿಲ್ ಇದ್ದರು.
ಕಿಕ್ಕೇರಿ: ಹೋಬಳಿಯ ಗೊಲ್ಲರಕೊಪ್ಪಲು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಳೆದ ಹಲವು ದಿನಗಳಿಂದ ರೈತರಿಗೆ ಆತಂಕ ಸೃಷ್ಟಿಸಿ ಜಾನುವಾರುಗಳು ಹಾಗೂ ಸಾಕು…
ಬೆಂಗಳೂರು: ಕೆಪಿಎಸ್ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ಹುದ್ದೆಯಿಂದ ಅಮಾನತುಗೊಳಿಸಿದ ಬೆನ್ನಲ್ಲೇ ಈ ಹೊಸ ಕಾನೂನು ಸಂಕಷ್ಟ ಎದುರಾಗಿದೆ.…
ಬೆಟ್ಟದಲ್ಲಿ ಬಸ್ ನಿಲ್ದಾಣದ ಉದ್ಘಾಟನೆ ನೆರವೇರಿಸಿದ ಶಾಸಕ; ಸಮಸ್ಯೆ ಕುರಿತು ಬೆಳಕು ಚೆಲ್ಲಿದ್ದ ‘ಆಂದೋಲನ’ ಗುಂಡ್ಲುಪೇಟೆ: ತಾಲ್ಲೂಕಿನ ಹಿಮವದ್ ಗೋಪಾಲಸ್ವಾಮಿ…
ಅಧ್ಯಾತ್ಮ ದುರಂತ! ಲೌಕಿಕ ಬದುಕಿನ ಆಶೆ ಆಮಿಷಗಳ ಸೆರೆಮನೆಯಿಂದ ಬಿಡಿಸಿಕೊಳುವ ಸನ್ಮಾರ್ಗವನು ಅಧ್ಯಾತ್ಮವೆನ್ನುವರು ಪ್ರಾಜ್ಞರು! ಆದರೀಗ ಲೌಕಿಕದ ಆಶೆ ಆಮಿಷಗಳ…
ಭಾರತೀಯ ಚಿತ್ರರಂಗದ ಗಾನಕೋಗಿಲೆ ಎಸ್.ಜಾನಕಿ ಅವರ ಸಾಧನೆ ಎಂದೆಂದಿಗೂ ಅಜರಾಮರ. ಅವರ ಹೆಸರನ್ನು ಮುಂದಿನ ಪೀಳಿಗೆಗೂ ಪರಿಚಯಿಸುವ ಮೂಲಕ ಚಿರಸ್ಥಾಯಿಯಾಗಿಸಲು…
ಮೈಸೂರಿನ ಅಶೋಕಪುರಂನಿಂದ ಚೆನ್ನೆ ಗೆ ತೆರಳುವ ಚೆನ್ನೆ ನಿಂದ - ಅಶೋಕಪುರಂಗೆ ಆಗಮಿಸುವ ೧೬೫೫೧ ಎಂಜಿಆರ್ ಚೆನ್ನೈಎಕ್ಸ್ ಪ್ರೆಸ್, ೨೦೬೨೪…