ಮಂಡ್ಯ: ಮೈಷುಗರ್ ಸಕ್ಕರೆ ಕಾರ್ಖಾನೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿರುವ ಸಂಬಂಧ ಜಿಲ್ಲಾಧಿಕಾರಿಗಳಿಗೆ ದೂರು ನೀಡಿದರೂ, ಜಿಲ್ಲಾಧಿಕಾರಿಗಳು ಇದುವರೆಗೆ ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ ಎಂದು ರಾಜ್ಯ ಮಾಹಿತಿ ಹಕ್ಕು ಸಮಿತಿಯ ಮಂಡ್ಯ ತಾಲೂಕು ಅಧ್ಯಕ್ಷ ಶಿವಕುಮಾರ್ ಆರೋಪಿಸಿದರು.
ನಗರದ ಪತ್ರಕರ್ತರ ಭವನದಲ್ಲಿ ಗುರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಷುಗರ್ ಕಂಪನಿಯ ಪ್ರಧಾನ ವ್ಯವಸ್ಥಾಪಕ ಅಪ್ಪಾಸಾಹೇಬ ಚನ್ನಪ್ಪ ಪಾಟೀಲ್ ಮೇಲೆ ಭ್ರಷ್ಟಾಚಾರ ಮಾಡಿರುವ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಇದೇ ಜನವರಿ ೨೦ರಂದು ದೂರು ಸಲ್ಲಿಸಿದ್ದು, ಅವರ ವಿರುದ್ಧ ಪರಿಶೀಲನೆ ನಡೆಸಿ ಮಾಹಿತಿ ಹಾಗೂ ಹಿಂಬರಹ ನೀಡಲು ಸೂಚಿಸಿದ್ದು, ಇದೇ ಫೆಬ್ರವರಿ ೧೩ರಂದು ಸರ್ಕಾರದ ಕಾರ್ಯದರ್ಶಿಗಳೂ ಅಗತ್ಯ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದರೂ ಜಿಲ್ಲಾಧಿಕಾರಿಗಳು ಯಾವುದೇ ಕ್ರಮ ವಹಿಸಿಲ್ಲ ಎಂದು ದೂರಿದರು.
೨೦೨೨-೨೩ನೇ ಸಾಲಿನಲ್ಲಿ ಸಕ್ಕರೆ, ಕಾಕಾಂಬಿ ಮತ್ತು ವಿದ್ಯುತ್ ಆಮದಿನಿಂದ, ೨೦೨೩ರ ಮೇ ಮತ್ತು ಜೂನ್ನಲ್ಲಿ ಸಕ್ಕರೆ ಮಾರಾಟ ಮಾಡದೇ ನಷ್ಟವುಂಟಾಗಿದ್ದು, ಮೈಷುಗರ್ ಅಧ್ಯಕ್ಷರ ವಾಹನಕ್ಕೆ ಇಂಧನ ತುಂಬಿಸುವಲ್ಲಿಯೂ ಆಡಳಿತದ ದುರುಪಯೋಗವಾಗಿದೆ ಎಂದರು.
ಸಿಸಿಟಿವಿ ಅಳವಡಿಕೆ ಮಾಡಿದ ನಂತರ ಟೆಂಡರ್ ಕರೆದು ಅಕ್ರಮ, ಕಾನೂನು ಬಾಹಿರವಾಗಿ ಅಧಿಕಾರಿಗಳಿಗೆ ಸೂಚನೆ, ಲಕ್ಷಾಂತರ ಬೆಲೆಯ ಮರಗಳನ್ನು ಕೇವಲ ೭೦ ಸಾವಿರಕ್ಕೆ ಮಾರಾಟ, ಉತ್ತಮ ಆಡಳಿತ ನಡೆಸುತ್ತಿದ್ದ ಅಧಿಕಾರಿಯನ್ನು ೭ ತಿಂಗಳಿಗೆ ವರ್ಗಾವಣೆ ನೀಡಿದ್ದು, ಅಧಿಕಾರಿ ದಿಟ್ಟತನದಿಂದ ತಡೆಯಾಜ್ಞೆ ತಂದಿದ್ದಾರೆಂದು ಹೇಳಿದರು.
೨೦೨೩ರಿಂದ ಇಲ್ಲಿಯವರೆಗೂ ೪ ಕೋಟಿ ರೂ ಕಾಮಗಾರಿಗಳನ್ನು ಮಾಡಿದ್ದು, ಅವುಗಳೂ ಕೂಡ ಕಳಪೆಯಿಂದ ಕೂಡಿದೆ. ಅಲ್ಲದೇ ಕಬ್ಬು ಸಾಗಾಣೆಯ ವೆಚ್ಚ ನೀಡಲಿಲ್ಲವೆಂದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿ ಕಬ್ಬು ಬೆಳೆಗಾರ ಪತ್ರಬರೆದಿರುವುದನ್ನು ಖಂಡಿಸಿ ಮೈಷುಗರ್ ಅಧ್ಯಕ್ಷರ ವಿರುದ್ಧ ಹರಿಹಾಯ್ದರು.
ಗೋಷ್ಠಿಯಲ್ಲಿ ದೀಪಕ್, ವಿನೋಬ್, ಸಚಿನ್, ಪ್ರಸನ್ನಕುಮಾರ್, ಸುನಿಲ್ ಇದ್ದರು.
ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್ಗೆ…
ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…
ಆರ್ಎಸ್ಎಸ್ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…
ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…
ಕೇವಲ ಹತ್ತು ದಿನಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಮೂರು ಬಾರಿ ಹೆಚ್ಚಳವಾಗಿದೆ. ಇದು ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಕೇರಳ…