ಹಾರೋಹಳ್ಳಿ: ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನಕ್ಕೆ ದಿನಗಣನೆ ಶುರುವಾಗಿದ್ದು, ಈ ಹಂತದಲ್ಲಿ ರಾಜ್ಯದ 14 ಕ್ಷೇತ್ರಗಳಿಗೆ ಚುನಾವಣ ನಡೆಯಲಿದೆ. ಈ ಬಾರಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಡಿಕೆ ಸುರೇಶ್ ಸ್ಪರ್ಧಿಸುತ್ತಿದ್ದು, ಎದುರಾಳಿಯಾಗಿ ಬಿಜೆಪಿಯಿಂದ ಡಾ. ಸಿಎನ್ ಮಂಜುನಾಥ್ ಕಣಕ್ಕಿಳಿದಿದ್ದಾರೆ.
ಇಬ್ಬರ ನಡುವೆ ಜಿದ್ದಾಜಿದ್ದಿ ಏರ್ಪಡುವ ಭಾರೀ ನಿರೀಕ್ಷೆಯಿದ್ದು, ಗೆಲುವಿಗಾಗಿ ಭರ್ಜರಿ ಪ್ರಚಾರ ಕಾರ್ಯಗಳು ನಡೆಯುತ್ತಿವೆ. ಈ ಬಾರಿ ರಾಜ್ಯ ಬಿಜೆಪಿ ಜತೆ ಲೋಕಸಭೆಗಾಗಿ ಜೆಡಿಎಸ್ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿದ್ದು, ಜೆಡಿಎಸ್ ಹಿರಿಯ ಹೆಚ್ಡಿ ದೇವೇಗೌಡ ಅವರು ಹಾರೋಹಳ್ಳಿಯಲ್ಲಿ ಮಂಜುನಾಥ್ ಪರ ಮತಯಾಚನೆ ಮಾಡಿದ್ದಾರೆ.
ಈ ವೇಳೆ ಪ್ರಧಾನಮಂತ್ರಿ ನರೇಂದ್ರ ಮೋದಿ ಕುರಿತು ಸಹ ಮಾತನಾಡಿದ ದೇವೇಗೌಡ ನರೇಂದ್ರ ಮೋದಿ ಬಿಟ್ಟರೆ ಬೇರೆ ಯಾರಿಗೂ ಈ ದೇಶದ ಪ್ರಧಾನ ಮಂತ್ರಿಯಾಗುವ ಯೋಗ್ಯತೆಯಿಲ್ಲ ಎಂದು ಹೇಳಿಕೆ ನೀಡಿದರು.
ಈ ಕ್ಷೇತ್ರದಲ್ಲಿ ಅವರಿಗೆ ( ಡಿಕೆ ಸಹೋದರರು ) ಸೆಡ್ಡು ಹೊಡೆಯಬೇಕು, ಯಾರಿಗೂ ಹೆದರಬೇಡಿ, ಅವರ ಹೆಸರು ಹೇಳುವುದಿಲ್ಲ. ಈ ಬಾರಿ ಅವರ ಅಂತ್ಯವಾಗಲೇಬೇಕು ಎಂಬ ಮೋದಿ ಹಾಗೂ ಅಮಿತ್ ಶಾ ಒತ್ತಾಯದ ಮೇರೆಗೆ ಮಂಜುನಾಥ್ ಅವರನ್ನು ಚುನಾವಣೆಗೆ ನಿಲ್ಲಿಸಿದ್ದೇವೆ. ಹೀಗಾಗಿ ಅವರನ್ನು ಗೆಲ್ಲಿಸಲೇಬೇಕು ಎಂದು ಮನವಿ ಮಾಡಿಕೊಂಡರು.
ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ ಅಂತ ಚಿನ್ನ ಬೆಳ್ಳಿ! ಬೆಲೆ ಎಷ್ಟಾದರೂ ನಾವು ಬಗ್ಗೋದೇ ಇಲ್ಲ ಅಂತ ಕೆಲ ಗ್ರಾಹಕರು…
ವಿದೇಶಿ ನೆಲದಲ್ಲಿ ದೇಶವನ್ನು ಟೀಕಿಸುವುದಿಲ್ಲ ಎಂಬ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ನಿಲುವು ಸ್ವಾಗತಾರ್ಹವಾಗಿದೆ. ಗಣರಾಜ್ಯೋತ್ಸವದ ಸಂದರ್ಭದಲ್ಲೇ ಅವರು…
ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಬಾಂಗ್ಲಾ ದೇಶಕ್ಕೆ ೧೯೭೨ ರಲ್ಲಿ ಪಾಕಿಸ್ತಾನದಿಂದ ಬೇರ್ಪಡಿಸಿ…
ದಕ್ಷಿಣ ಕಾಶಿ ಎಂದೇ ಹೆಸರುವಾಸಿಯಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ಪ್ರತಿನಿತ್ಯ ಸಾವಿರಾರು ಭಕ್ತಾದಿಗಳು ಆಗಮಿಸುತ್ತಾರೆ. ಆದರೆ ಕೆಲವು ಆಟೋ ಚಾಲಕರು…
ಏಷ್ಯಾದ ಪ್ರಪ್ರಥಮ ಎದೆಹಾಲಿನ ಬ್ಯಾಂಕನ್ನು ಆರಂಭಿಸಿದ ಕೀರ್ತಿ ಕರ್ನಾಟಕದಲ್ಲಿ ಹುಟ್ಟಿದ, ಗೋವಾ ಮೂಲದ, ಈಗ ಮುಂಬೈಯಲ್ಲಿ ತನ್ನ ಸಾಮಾಜಿಕ ಕಾರ್ಯಗಳನ್ನು…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಪ್ರತಿ ವರ್ಷದಂತೆ ಈ ವರ್ಷವೂ ಸಹ…