ಮಂಡ್ಯ

ಮೋದಿ ಬಿಟ್ಟರೆ ಪ್ರಧಾನಿಯಾಗುವ ಯೋಗ್ಯತೆ ಬೇರೆ ಯಾರಿಗೂ ಇಲ್ಲ: ಹೆಚ್‌ಡಿಡಿ

ಹಾರೋಹಳ್ಳಿ: ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನಕ್ಕೆ ದಿನಗಣನೆ ಶುರುವಾಗಿದ್ದು, ಈ ಹಂತದಲ್ಲಿ ರಾಜ್ಯದ 14 ಕ್ಷೇತ್ರಗಳಿಗೆ ಚುನಾವಣ ನಡೆಯಲಿದೆ. ಈ ಬಾರಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಡಿಕೆ ಸುರೇಶ್‌ ಸ್ಪರ್ಧಿಸುತ್ತಿದ್ದು, ಎದುರಾಳಿಯಾಗಿ ಬಿಜೆಪಿಯಿಂದ ಡಾ. ಸಿಎನ್‌ ಮಂಜುನಾಥ್‌ ಕಣಕ್ಕಿಳಿದಿದ್ದಾರೆ.

ಇಬ್ಬರ ನಡುವೆ ಜಿದ್ದಾಜಿದ್ದಿ ಏರ್ಪಡುವ ಭಾರೀ ನಿರೀಕ್ಷೆಯಿದ್ದು, ಗೆಲುವಿಗಾಗಿ ಭರ್ಜರಿ ಪ್ರಚಾರ ಕಾರ್ಯಗಳು ನಡೆಯುತ್ತಿವೆ. ಈ ಬಾರಿ ರಾಜ್ಯ ಬಿಜೆಪಿ ಜತೆ ಲೋಕಸಭೆಗಾಗಿ ಜೆಡಿಎಸ್‌ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿದ್ದು, ಜೆಡಿಎಸ್‌ ಹಿರಿಯ ಹೆಚ್‌ಡಿ ದೇವೇಗೌಡ ಅವರು ಹಾರೋಹಳ್ಳಿಯಲ್ಲಿ ಮಂಜುನಾಥ್‌ ಪರ ಮತಯಾಚನೆ ಮಾಡಿದ್ದಾರೆ.

ಈ ವೇಳೆ ಪ್ರಧಾನಮಂತ್ರಿ ನರೇಂದ್ರ ಮೋದಿ ಕುರಿತು ಸಹ ಮಾತನಾಡಿದ ದೇವೇಗೌಡ ನರೇಂದ್ರ ಮೋದಿ ಬಿಟ್ಟರೆ ಬೇರೆ ಯಾರಿಗೂ ಈ ದೇಶದ ಪ್ರಧಾನ ಮಂತ್ರಿಯಾಗುವ ಯೋಗ್ಯತೆಯಿಲ್ಲ ಎಂದು ಹೇಳಿಕೆ ನೀಡಿದರು.

ಈ ಕ್ಷೇತ್ರದಲ್ಲಿ ಅವರಿಗೆ ( ಡಿಕೆ ಸಹೋದರರು ) ಸೆಡ್ಡು ಹೊಡೆಯಬೇಕು, ಯಾರಿಗೂ ಹೆದರಬೇಡಿ, ಅವರ ಹೆಸರು ಹೇಳುವುದಿಲ್ಲ. ಈ ಬಾರಿ ಅವರ ಅಂತ್ಯವಾಗಲೇಬೇಕು ಎಂಬ ಮೋದಿ ಹಾಗೂ ಅಮಿತ್‌ ಶಾ ಒತ್ತಾಯದ ಮೇರೆಗೆ ಮಂಜುನಾಥ್‌ ಅವರನ್ನು ಚುನಾವಣೆಗೆ ನಿಲ್ಲಿಸಿದ್ದೇವೆ. ಹೀಗಾಗಿ ಅವರನ್ನು ಗೆಲ್ಲಿಸಲೇಬೇಕು ಎಂದು ಮನವಿ ಮಾಡಿಕೊಂಡರು.

 

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ಈ ಬಾರಿ ಮೆರವಣಿಗೆಗೆ ಸೇನೆಗೆ ಆಹ್ವಾನ ಎಂದ ಸಿಎಂ ಡಿಕೆಶಿ

ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್‌…

2 hours ago

ಮೈಕ್ರೋ ಫೈನಾನ್ಸ್‌ ಕಿರುಕುಳ: ವ್ಯಕ್ತಿ ಆತ್ಮಹತ್ಯೆ

ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…

5 hours ago

ರಾಜ್ಯದ 101 ತಾಲ್ಲೂಕುಗಳು ಬರ ತಾಲ್ಲೂಕುಗಳೆಂದು ಘೋಷಣೆ: ಡಿಸಿಎಂ ಜಿ.ಪರಮೇಶ್ವರ್‌

ಮೈಸೂರು: ರೈತರಿಗೆ ಬರ ಪರಿಹಾರ ನೀಡುವ ವಿಚಾರವಾಗಿ ಮಾತನಾಡಿರುವ ಡಿಸಿಎಂ ಪರಮೇಶ್ವರ್‌, ರಾಜ್ಯದ 101 ತಾಲೂಕುಗಳನ್ನು ಬರ ತಾಲೂಕುಗಳೆಂದು ಘೋಷಣೆ…

5 hours ago

ಓದುಗರ ಪತ್ರ: ಉಳುವ ‘ಯೋಗಿ’ ಕೂಗಿಗೆ ಸರ್ಕಾರ ತರ್ತಾಗಿ ಸ್ಪಂದಿಸಲಿ

ರಾಜ್ಯದ ೧೭೫ ತಾಲ್ಲೂಕುಗಳು ಭೀಕರ ಬರಕ್ಕೆ ತತ್ತರಿಸಿ, ಶೇಕಡಾ ೮೦ ಕ್ಕೂ ಹೆಚ್ಚು ಬೆಳೆ ನಷ್ಟದಿಂದ ಅನ್ನದಾತರು ಸಂಪೂರ್ಣ ಕಂಗಾಲಾಗಿದ್ದರೂ…

6 hours ago

ಓದುಗರ ಪತ್ರ: ರಾಷ್ಟ್ರಕವಿ ಶ್ಲಾಘನೆಯ ಸ್ಮರಣೆ

೧೯೮೬ರ ಆಗಸ್ಟ್ ೨೯ರಂದು (ಜಗದ್ಗುರು ವೀರಸಿಂಹಾಸನ ಮಹಾಸಂಸ್ಥಾನ ಮಠದ ೨೩ ನೇ ಮಠಾಧಿಪತಿ) ಶಿವರಾತ್ರಿ ರಾಜೇಂದ್ರ ಶ್ರೀಗಳ ಅಮೃತ ಮಹೋತ್ಸವದ…

6 hours ago

ಓದುಗರ ಪತ್ರ: ಸೈಬರ್ ವಂಚನೆ: ಜಾಗೃತಿಯೂ ಫಲ ನೀಡುತ್ತಿಲ್ಲವಲ್ಲ…

ರಾಜ್ಯದಲ್ಲಿ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ ಏಳು ತಿಂಗಳ ಅವಧಿಯಲ್ಲಿ ಸುಮಾರು ರೂ.೬೦೦ ಕೋಟಿಯಷ್ಟು ಹಣ ಸೈಬರ್ ವಂಚಕರ…

6 hours ago