ಮಂಡ್ಯ

ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಅವರ ಪಾತ್ರವಿಲ್ಲ: ಚೆಲುವರಾಯಸ್ವಾಮಿ

ಮಂಡ್ಯ: ಮುಡಾ ಹಗರಣ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಬಿಜೆಪಿ-ಜೆಡಿಎಸ್‌ ಪಕ್ಷಗಳು ಪ್ರತಿಭಟನೆ ನಡೆಸುತ್ತಿದೆ. ಇತ್ತ ರಾಜ್ಯಪಾಲರು ಸಿಎಂ ವಿರುದ್ಧ ಪ್ರಶಿಕ್ಯೂಷನ್‌ ಹೊರಡಿಸಿದ್ದು, ಈ ಎಲ್ಲದರ ವಿರುದ್ಧವಾಗಿ ಇಂದು (ಆ.19) ಕಾಂಗ್ರೆಸ್‌ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದೆ.

ಈ ಹಿನ್ನೆಲೆ ಮಂಡ್ಯದಲ್ಲಿ ನಡೆದ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಜಿಲ್ಲಾ ಉಸ್ತುವಾರ ಸಚಿವ ಎನ್‌.ಚಲುವರಾಯಸ್ವಾಮಿ ಸಿಎಂ ಪರ ಬ್ಯಾಟ್‌ ಬೀಸಿದ್ದು, ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಅವರ ಪಾತ್ರವಿಲ್ಲ ಎಂದು ಹೇಳಿದ್ದಾರೆ.

2023ರ ಚುನಾವಣೆ ಬಿಜೆಪಿ ಹಾಗೂ ಜೆಡಿಎಸ್ ಗೆ ನುಂಗಲಾರದ ತುತ್ತು. ವೀರೇಂದ್ರ ಪಾಟೀಲ್ ನಂತರ ಕಾಂಗ್ರೆಸ್‌ಗೆ ಈ ಬಾರಿ ಹೆಚ್ಚು ಬಹುಮತ ಬಂದಿದೆ ಹಾಗೂ ಲೋಕಸಭಾ ಚುನಾವಣೆಯಲ್ಲಿ 9 ಸ್ಥಾನ ಬಂದಿರುವುದು ಬಿಜೆಪಿ ಅವರಿಗೆ ನಿದ್ರೆಗೆಡಿಸಿದೆ.

ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಅನ್ನ‌ ನಿದ್ರೆಗೆಡಿಸಬೇಕು ಎಂಬ ಉದ್ದೇಶದಿಂದ ಸಂಚು ರೂಪಿಸಲಾಗುತ್ತಿದೆ. ಆದರೆ ನೀವು ಏನೆ ಮಾಡಿದರೂ ಸಿಎಂ ಸಿದ್ದರಾಮಯ್ಯ ಅವರನ್ನ ಮುಟ್ಟಲು ಆಗುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ಬೊಮ್ಮಾಯಿ ಸಿಎಂ ಆದಾಗ ಕೇಂದ್ರ ಸರ್ಕಾರ ಅನುದಾನ ಘೋಷಣೆ ‌ಮಾಡಿದ್ದರು. ಆದರೆ, ಇದುವರೆಗೂ ಅನುಧಾನ ಕೊಟ್ಟಿಲ್ಲ. ಬೆಳಗ್ಗೆ ಎದ್ದರೇ ಏನಾದರೂ ವಿಚಾರವನ್ನ ತೆಗೆದುಕೊಂಡು ಸಂಚು ಮಾಡುತ್ತಾರೆ ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಅವರ ಪಾತ್ರವಿಲ್ಲ ಎಂದು ಸ್ಪಷ್ಟಪಡಿಸಿದರು.

ಬೊಮ್ಮಾಯಿ ಅವರ ಮೇಲೆ ಮೊದಲು ಕೇಸ್ ದಾಖಲಿಸಬೇಕು ನಾವು ಸರ್ಕಾರ ಬಂದ ಪ್ರಾರಂಭದಲ್ಲಿ ಅಭಿವೃದ್ಧಿ ವಿಚಾರದ ಕಡೆ ಗಮನಕೊಟ್ಟಿದ್ದೇವೂ ಪ್ರಾರಂಭದಲ್ಲೇ ಇವರ ಆರೋಪದ ಮೇಲೆ ದಾಳಿ ಮಾಡಬೇಕಿತ್ತು. ನಾವು ನಿಮ್ಮಂಗೆ ಡೂಪ್ಲಿಕೇಟ್ ದೂರು ನೀಡಲ್ಲ. ರಾಜ್ಯಪಾಲರನ್ನ ದುರುಪಯೋಗ ಪಡಿಸಿಕೊಳ್ಳುವುದಿಲ್ಲ ಕಾನೂನು ಬದ್ದವಾಗಿ ದೂರು‌ ನೀಡುತ್ತೇವೆ. ಬಿಜೆಪಿ ಹಾಗೂ ಜೆಡಿಎಸ್ ಹಗರಣವನ್ನ ನಾವು ಬಿಡುವುದಿಲ್ಲ ಎಂದು ಹೇಳಿದರು.

ಇವರ ಮೇಲಿನ ಪ್ರಕರಣಗಳನ್ನು ಇನ್ನು ಆರು ತಿಂಗಳ ಒಳಗೆ ತನಿಖೆ ಮಾಡಿಸುತ್ತೇವೆ. ಕುಮಾರಸ್ವಾಮಿ ವಿರುದ್ಧ ತನಿಖೆ ಮಾಡಲು ಪ್ರಾಸಿಕ್ಯೂಷನ್ ಗೆ ಕೇಳಿ 9 ತಿಂಗಳು ಆಗಿದೆ ಆದರೆ ರಾಜ್ಯಪಾಲರ ಬಾಯಿ ಮುಚ್ಚಿಸಿದ್ದಾರೆ. ಜೊಲ್ಲೆ, ರೆಡ್ಡಿ, ನಿರಾಣಿ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿಲ್ಲ. ಮೋದಿ, ಅಮಿತ್ ಶಾ ಅವರೇ ನಾಚಿಕೆ ಆಗಲ್ಲ. ಇದು ನಿಮಗೆ ಕೊಲೆಗಾಲ ಕೇಂದ್ರ ಬಿಜೆಪಿ ವಿರುದ್ಧ ಮಾತನಾಡುವ ಧಮ್ ಇರುವುದು ಸಿದ್ದರಾಮಯ್ಯ ಅವರಿಗೆ ಮಾತ್ರ.
ಸಿದ್ದರಾಮಯ್ಯ ಅವರ ಜೊತೆ ಶಾಸಕರು, ಮಂತ್ರಿಗಳು ಗಟ್ಟಿಯಾಗಿ ನಿಂತಿದ್ದೇವೆ ಕಾನೂನಾತ್ಮಕವಾಗಿ ಗೆಲುವು ಸಿಗಲಿದೆ.

ರಾಜ್ಯಪಾಲರು ಹುದ್ದೆಗೆ ಗೌರವ ಕೊಟ್ಟು ಪ್ರಾಸಿಕ್ಯೂಷನ್ ಗೆ ಅವಕಾಶ ನೀಡಬೇಕು. ಕುಮಾರಸ್ವಾಮಿ, ಜೊಲ್ಲೆ, ನಿರಾಣಿ, ರೆಡ್ಡಿ ಮೇಲೆ ಪ್ರಾಸಿಕ್ಯೂಷನ್ ಗೆ ನೀಡಬೇಕು ಎಂದು ಆಗ್ರಹಿಸಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

7 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

11 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

11 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

11 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

11 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

11 hours ago