ಮಂಡ್ಯ

14 ಅಲ್ಲ, ಸಾವಿರಾರು ಸೈಟುಗಳನ್ನು ಲೂಟಿ ಹೊಡೆದಿದ್ದಾರೆ, ಇದರ ಹಿಂದೆ ದೊಡ್ಡ ತಿಮಿಂಗಿಲಗಳಿವೆ: ಆರ್ .ಅಶೋಕ

ತನಿಖೆ ಮಾಡಬೇಡಿ ಎನ್ನುವುದು ತುಘಲಕ್ ದರ್ಬಾರ್‌, ಸರ್ವಾಧಿಕಾರಿ ಧೋರಣೆ: ಪ್ರತಿಪಕ್ಷ ನಾಯಕ

ಮಂಡ್ಯ: ಮುಡಾ ಹಗರಣದಲ್ಲಿ ಕೇವಲ 14 ನಿವೇಶನ ಅಲ್ಲ, ಸಾವಿರಾರು ನಿವೇಶನಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಬೆಂಬಲಿಗರು ಲೂಟಿ ಹೊಡೆದಿದ್ದಾರೆ. ಇದರ ಹಿಂದೆ ಇರುವ ದೊಡ್ಡ ತಿಮಿಂಗಿಲಗಳು ಹೊರಬರಲು ಸಿಬಿಐ ತನಿಖೆಗೆ ವಹಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು.

ಮಂಡ್ಯದಲ್ಲಿ ಗುರುವಾರ(ಆ.22) ಬಿಜೆಪಿಯಿಂದ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಹಗರಣದಲ್ಲಿ ಸಿಲುಕಿದಾಗ ಮಾತ್ರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜಾತಿ ನೆನಪಾಗುತ್ತದೆ. ಇವರು 14 ಸೈಟು ನುಂಗಿದ ಕೂಡಲೇ ಹಿಂಬಾಲಕರು ನೂರಾರು ಸೈಟುಗಳನ್ನು ನುಂಗಿದ್ದಾರೆ. ಇವರದ್ದೇ ಹಿಂಬಾಲಕರಾದ ಮರಿಗೌಡರೇ ಪತ್ರ ಬರೆದು ಅಕ್ರಮವಾಗಿದೆ ಎಂದು ಹೇಳಿದ್ದರು. ಅದನ್ನು ಸಾಮಾಜಿಕ ಕಾರ್ಯಕರ್ತರೊಬ್ಬರು ಆರ್‌ಟಿಐ ಮೂಲಕ ಹೊರತೆಗೆದಾಗ ಎಲ್ಲವೂ ಬಯಲಾಗಿದೆ. ಆದರೆ ಸಿಎಂ ಸಿದ್ದರಾಮಯ್ಯ ಒಂದೂ ಸೈಟು ಅಕ್ರಮವಾಗಿ ಪಡೆದಿಲ್ಲ ಎಂದು ಹೇಳಿದ್ದಾರೆ ಎಂದರು.

ಈಗ ವೈಟ್‌ನರ್‌ ಅಕ್ರಮ ಬಯಲಾಗಿದೆ. ದಾಖಲೆಗಳಲ್ಲಿ ವೈಟ್‌ನರ್‌ ಹಾಕಿ ಕೆಲವು ಅಂಶಗಳನ್ನು ಮರೆಮಾಚಲಾಗಿದೆ. ಏನಾದರೂ ತಪ್ಪಾದಾಗ ಅದರ ಮೇಲೆ ಪೆನ್‌ನಲ್ಲಿ ಗೆರೆ ಎಳೆದರೆ ಸಾಕಿತ್ತು. ಆದರೆ ವಿಷಯವನ್ನು ಮುಚ್ಚಿಹಾಕಲು ವೈಟ್‌ನರ್‌ ಬಳಸಿದ್ದಾರೆ. ವಿಜಯನಗರದಲ್ಲೇ ನಿವೇಶನ ಬೇಕು ಎಂದು ಸಿಎಂ ಪತ್ನಿ ಬರೆದಿದ್ದಾರೆ. ಅದಕ್ಕೆ ವೈಟ್‌ನರ್‌ ಹಚ್ಚಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ದಾಖಲೆ ತಿದ್ದಿದ್ದಾರೆ ಎಂದು ದೂರಿದರು.

ಜೈಲಿಗೆ ಹಾಕಿ ಎಂದಿಲ್ಲ

ರಾಜ್ಯಪಾಲರು ದೂರನ್ನು ಆಧರಿಸಿ ತನಿಖೆಗೆ ಅವಕಾಶ ನೀಡಿದ್ದಾರೆಯೇ ಹೊರತು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಜೈಲಿಗೆ ಹಾಕಿಸಿಲ್ಲ. ತನಿಖೆ ಮಾಡಿ ಎಂದಿದ್ದಕ್ಕೆ ಕಾಂಗ್ರೆಸ್‌ ನಾಯಕರು ಬಾಯಿ ಬಡಿದುಕೊಳ್ಳುತ್ತಿದ್ದಾರೆ. ಸಿದ್ದರಾಮಯ್ಯನವರಿಗೆ ಪ್ರಮಾಣ ವಚನ ಬೋಧಿಸಿದ್ದೇ ರಾಜ್ಯಪಾಲರು. ಅಂತಹವರು ತನಿಖೆ ಮಾಡಿ ಎಂದಿದ್ದನ್ನು ವಿರೋಧಿಸಿದರೆ ಅದು ಸರ್ವಾಧಿಕಾರಿ ಧೋರಣೆಯಾಗುತ್ತದೆ. ಅದು ತುಘಲಕ್‌ ದರ್ಬಾರ್‌ ಆಗುತ್ತದೆ. ಸಾಂವಿಧಾನಿಕವಾಗಿ ದೊಡ್ಡ ಹುದ್ದೆಯಲ್ಲಿರುವವರಿಗೆ ಕೀಳು ಮಾತುಗಳಿಂದ ನಿಂದಿಸುವುದು ಅಕ್ಷಮ್ಯ ಅಪರಾಧ. ಇದು ದಲಿತರಿಗೆ ಮಾಡುವ ಅಪಮಾನ. ಇದಕ್ಕಾಗಿ ಕಾಂಗ್ರೆಸ್‌ ಕ್ಷಮೆ ಯಾಚಿಸಬೇಕು ಎಂದರು.

ಬಿಜೆಪಿ ಸರ್ಕಾರ 40% ಕಮಿಶನ್‌ ಪಡೆದಿದೆ ಎಂದು ಕಾಂಗ್ರೆಸ್‌ ಸುಳ್ಳು ಆರೋಪ ಮಾಡಿತ್ತು. ಅದಕ್ಕಾಗಿ ಪ್ರಕರಣ ದಾಖಲಿಸಿದ್ದು, ಅದರ ಜಾಮೀನಿನ ಮೇಲೆ ಕಾಂಗ್ರೆಸ್‌ ನಾಯಕರು ಹೊರಗೆ ಓಡಾಡುತ್ತಿದ್ದಾರೆ ಎಂದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

6 mins ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

5 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

5 hours ago

ಓದುಗರ ಪತ್ರ: ಕಾವೇರಿ:ಆದೇಶ ನಿಷ್ಪಕ್ಷಪಾತವಾಗಿರಲಿ

ಸಿಡಬ್ಲ್ಯುಆರ್‌ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…

5 hours ago

ಮಲ್ಟಿಪ್ಲೆಕ್ಸ್: ಪ್ರಾದೇಶಿಕ ಭಾಷಾ ಚಿತ್ರಗಳಿಗೆ ಮಾರಕ ಹಂಚಿಕಾ ಸೂತ್ರ

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್‌ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…

5 hours ago

ಕಸ್ತೂರಿ ರಂಗನ್ ವರದಿ ವಿರೋಧಿಸಿ ಇಂದು ಪ್ರತಿಭಟನೆ

ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್‌ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ  ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…

5 hours ago