ಮೈಸೂರು : ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಗ್ರಾಮದಲ್ಲಿ ತಾನು ಆಡಿರುವ ಮಾತುಗಳು ಉದ್ದೇಶಪೂರ್ವಕ ಅಲ್ಲ. ಆಡು ಭಾಷೆಯಲ್ಲಿ ಮಾತಾಡಿದ್ದೇನೆ. ನನ್ನ ಮಾತುಗಳಿಗೆ ಈಗಾಗಲೇ ವಿಷಾದ ವ್ಯಕ್ತಪಡಿಸಿದ್ದು, ಇದನ್ನು ಬೆಳೆಸುವುದು ಬೇಡ ಎಂದು ಸೆಸ್ಕ್ ಅಧ್ಯಕ್ಷರೂ ಆದ ಶಾಸಕ ರಮೇಶ್ ಬಂಡಿಸಿದ್ದೇಗೌಡ ಅವರು ಸ್ಪಷ್ಟನೆ ನೀಡಿದರು.
ಕಾಮಗಾರಿ ಚಾಲನೆ ವೇಳೆ ತರೀಪುರ ಗ್ರಾಮಸ್ಥರು ಸಮಸ್ಯೆ ಹೇಳಿಕೊಂಡಾಗ ಅಧಿಕಾರಿಗಳಿಗೆ ಎಚ್ಚರಿಕೆ ಕೊಡುವಾಗ ಆಡು ಭಾಷೆಯಲ್ಲಿ ಮಾತಾಡಿರುವೆ. ಅಧಿಕಾರಿಗೆ ಬೆದರಿಕೆಯನ್ನೂ ಹಾಕಿಲ್ಲ. ಇನ್ನೊಂದು ಧರ್ಮ ಮತ್ತು ಜಾತಿಯ ಬಗ್ಗೆ ಎಂದೂ ಮಾತಾಡಿಲ್ಲ. ತಮ್ಮ ಕ್ಷೇತ್ರದಲ್ಲಿ ಕಾಲದಿಂದಲೂ ಸೌಹಾರ್ದವಾಗಿ ಇದ್ದೇವೆ ಎಂದು ಹೇಳಿದರು.
ಮುಸ್ಲಿಂ ಮುಖಂಡರು, ಎಸ್ಡಿಪಿಐ ಕಾರ್ಯಕರ್ತರಲ್ಲಿ ಕಳಕಳಿಯಿಂದ ಮನವಿ ಮಾಡುತ್ತೇನೆ. ಇದನ್ನು ಮುಂದುವರಿಸುವುದು ಬೇಡ. ತಮ್ಮ ಕ್ಷೇತ್ರದಲ್ಲಿ ಮೊದಲಿಂದಲೂ ಮುಸ್ಲಿಂ ಜನಾಂಗದವರೊಂದಿಗೆ ಚೆನ್ನಾಗಿದ್ದೇವೆ. ಅವರ ಎಲ್ಲ ಅಭಿವೃದ್ಧಿ ಕೆಲಸಗಳಿಗೂ ಒತ್ತಾಸೆಯಾಗಿದ್ದೇನೆ. ರಾಜಕಾರಣದ ಹೊರತಾಗಿ ಇದನ್ನು ತೆಗೆದುಕೊಳ್ಳಬೇಕು ಎಂದು ಹೇಳಿದರು.
ನಮ್ಮ 40 ವರ್ಷದ ರಾಜಕಾರಣದಲ್ಲಿ ಶ್ರೀರಂಗಪಟ್ಟಣ ಕ್ಷೇತ್ರದಲ್ಲಿ ಒಂದೇ ಒಂದು ಕೋಮು ಗಲಭೆ ಅಥವಾ ಜಾತಿ ಸಂಘರ್ಷ ಆಗಿಲ್ಲ. ಜನರ ವಿಶ್ವಾಸ ಗಳಿಸಿಕೊಂಡು ಕೆಲಸ ಮಾಡುತ್ತ ಬಂದಿದ್ದೇವೆ. ಸಂವಿಧಾನ ಬದ್ಧವಾಗಿ ನಮ್ಮ ಕೆಲಸ ಮುಂದುವರಿಯಲಿದೆ. ಯಾರಿಗೂ ನೋವುಂಟು ಮಾಡುವುದು ನಮ್ಮ ಉದ್ದೇಶ ಇಲ್ಲ ಎಂದು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು: ನಾನು ಪಕ್ಷದ ಅಧ್ಯಕ್ಷನಾಗಿ ಬಾವುಟ ಕಟ್ಟಿದ್ದೇನೆ, ಕಸ ಗುಡಿಸಿದ್ದೇನೆ. ಪಕ್ಷಕ್ಕಾಗಿ ಎಲ್ಲವನ್ನೂ ಮಾಡಿದ್ದೇನೆ. ನಾನು ಸ್ಟೇಜ್ ಮೇಲೆ ಕೂತು…
ಬೆಂಗಳೂರು: ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗಿಯಾಗಲು ಸಿಎಂ ಸಿದ್ದರಾಮಯ್ಯ ಅವರು ನಾಳೆ ದೆಹಲಿಗೆ ತೆರಳಲಿದ್ದಾರೆ. ಡಿಸೆಂಬರ್.27ರಂದು ದೆಹಲಿಯ ಇಂದಿರಾ…
ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಹುಲಿಗಳ ಉಪಟಳ ಹೆಚ್ಚಾಗಿದ್ದು, ದೇಪಾಪುರ ಗ್ರಾಮದ ಹೊರವಲಯದಲ್ಲಿ ಹುಲಿಯೊಂದು ಬೋನಿಗೆ ಬಿದ್ದಿದೆ. ಹುಲಿಯನ್ನು ನೋಡಲು…
ಬೆಂಗಳೂರು: ರಾಜ್ಯದಲ್ಲಿ ತೀವ್ರ ಚಳಿ, ಶೀತಗಾಳಿಯ ಜೊತೆಗೆ ಬೆಳಗಿನ ವೇಳೆ ಕೆಲವೆಡೆ ದಟ್ಟವಾದ ಮಂಜು ಆವರಿಸುತ್ತಿದೆ. ಬೆಳಗಿನ ವೇಳೆಯಲ್ಲಿ ದಟ್ಟವಾದ…
ತಿರುವನಂತಪುರಂ: ಶಬರಿಮಲೆ ದೇವಸ್ಥಾನದ ಚಿನ್ನ ನಾಪತ್ತೆ ಪ್ರಕರಣದ ಆರೋಪಿಗಳ ಜೊತೆಗೆ ಸೋನಿಯಾ ಗಾಂಧಿ ನಂಟಿದೆ ಎಂದು ಸಿಎಂ ಪಿಣರಾಯಿ ವಿಜಯನ್…
ಸ್ಯಾಂಡಲ್ವುಡ್ನಲ್ಲಿ ಇಂದು ಕ್ರಿಸ್ಮಸ್ ಹಬ್ಬದ ಸಡಗರದ ನಡುವೆ ಎರಡು ಬಹುನಿರೀಕ್ಷಿತ ಸಿನಿಮಾಗಳು ಅಬ್ಬರದಿಂದ ತೆರೆಗೆ ಬಂದಿವೆ, ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್,…