ಮೈಸೂರು : ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಗ್ರಾಮದಲ್ಲಿ ತಾನು ಆಡಿರುವ ಮಾತುಗಳು ಉದ್ದೇಶಪೂರ್ವಕ ಅಲ್ಲ. ಆಡು ಭಾಷೆಯಲ್ಲಿ ಮಾತಾಡಿದ್ದೇನೆ. ನನ್ನ ಮಾತುಗಳಿಗೆ ಈಗಾಗಲೇ ವಿಷಾದ ವ್ಯಕ್ತಪಡಿಸಿದ್ದು, ಇದನ್ನು ಬೆಳೆಸುವುದು ಬೇಡ ಎಂದು ಸೆಸ್ಕ್ ಅಧ್ಯಕ್ಷರೂ ಆದ ಶಾಸಕ ರಮೇಶ್ ಬಂಡಿಸಿದ್ದೇಗೌಡ ಅವರು ಸ್ಪಷ್ಟನೆ ನೀಡಿದರು.
ಕಾಮಗಾರಿ ಚಾಲನೆ ವೇಳೆ ತರೀಪುರ ಗ್ರಾಮಸ್ಥರು ಸಮಸ್ಯೆ ಹೇಳಿಕೊಂಡಾಗ ಅಧಿಕಾರಿಗಳಿಗೆ ಎಚ್ಚರಿಕೆ ಕೊಡುವಾಗ ಆಡು ಭಾಷೆಯಲ್ಲಿ ಮಾತಾಡಿರುವೆ. ಅಧಿಕಾರಿಗೆ ಬೆದರಿಕೆಯನ್ನೂ ಹಾಕಿಲ್ಲ. ಇನ್ನೊಂದು ಧರ್ಮ ಮತ್ತು ಜಾತಿಯ ಬಗ್ಗೆ ಎಂದೂ ಮಾತಾಡಿಲ್ಲ. ತಮ್ಮ ಕ್ಷೇತ್ರದಲ್ಲಿ ಕಾಲದಿಂದಲೂ ಸೌಹಾರ್ದವಾಗಿ ಇದ್ದೇವೆ ಎಂದು ಹೇಳಿದರು.
ಮುಸ್ಲಿಂ ಮುಖಂಡರು, ಎಸ್ಡಿಪಿಐ ಕಾರ್ಯಕರ್ತರಲ್ಲಿ ಕಳಕಳಿಯಿಂದ ಮನವಿ ಮಾಡುತ್ತೇನೆ. ಇದನ್ನು ಮುಂದುವರಿಸುವುದು ಬೇಡ. ತಮ್ಮ ಕ್ಷೇತ್ರದಲ್ಲಿ ಮೊದಲಿಂದಲೂ ಮುಸ್ಲಿಂ ಜನಾಂಗದವರೊಂದಿಗೆ ಚೆನ್ನಾಗಿದ್ದೇವೆ. ಅವರ ಎಲ್ಲ ಅಭಿವೃದ್ಧಿ ಕೆಲಸಗಳಿಗೂ ಒತ್ತಾಸೆಯಾಗಿದ್ದೇನೆ. ರಾಜಕಾರಣದ ಹೊರತಾಗಿ ಇದನ್ನು ತೆಗೆದುಕೊಳ್ಳಬೇಕು ಎಂದು ಹೇಳಿದರು.
ನಮ್ಮ 40 ವರ್ಷದ ರಾಜಕಾರಣದಲ್ಲಿ ಶ್ರೀರಂಗಪಟ್ಟಣ ಕ್ಷೇತ್ರದಲ್ಲಿ ಒಂದೇ ಒಂದು ಕೋಮು ಗಲಭೆ ಅಥವಾ ಜಾತಿ ಸಂಘರ್ಷ ಆಗಿಲ್ಲ. ಜನರ ವಿಶ್ವಾಸ ಗಳಿಸಿಕೊಂಡು ಕೆಲಸ ಮಾಡುತ್ತ ಬಂದಿದ್ದೇವೆ. ಸಂವಿಧಾನ ಬದ್ಧವಾಗಿ ನಮ್ಮ ಕೆಲಸ ಮುಂದುವರಿಯಲಿದೆ. ಯಾರಿಗೂ ನೋವುಂಟು ಮಾಡುವುದು ನಮ್ಮ ಉದ್ದೇಶ ಇಲ್ಲ ಎಂದು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಅಭಿಮಾನಿಗಳು, ನಿರ್ಮಾಪಕರ ಸಂಘದ ಆಕ್ರೋಶ ಬೆಂಗಳೂರು : ಪದ್ಮಭೂಷಣ ಡಾ.ರಾಜ್ಕುಮಾರ್ ಅವರ ಸ್ಮಾರಕದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಹೇಳಿಕೆ…
ಮಡಿಕೇರಿ : ಶಿಕ್ಷಕಿಯೊಬ್ಬರು ಬಂದೂಕಿನಿಂದ ಗುಂಡು ಹೊಡೆದುಕೊಂಡು ಸಾವಿಗೆ ಶರಣಾದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಚೇರಂಬಾಣೆಯಲ್ಲಿ ನಡೆದಿದೆ.…
ನವದೆಹಲಿ : ಆಮ್ ಆದ್ಮಿ ಪಕ್ಷದಲ್ಲಿ ಭಾರೀ ರಾಜಕೀಯ ಬೆಳವಣಿಗೆ ನಡೆದಿದ್ದು, ಪಕ್ಷ ತೊರೆದು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ)…
ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಪ್ರತಿದಿನ ದಿನಪತ್ರಿಕೆ ಓದಿಸುವುದನ್ನು ಕಡ್ಡಾಯಗೊಳಿಸಲು ಶಿಕ್ಷಣ…
ನವದೆಹಲಿ : ದೇಶದಾದ್ಯಂತ ನಡೆಯುತ್ತಿರುವ ಜನಗಣತಿ ಕಾರ್ಯವು ಕೇವಲ ಸರ್ಕಾರದ ಕೆಲಸವಲ್ಲ, ಬದಲಾಗಿ ಪ್ರತಿ ನಾಗರಿಕರ ಜವಾಬ್ದಾರಿಯಾಗಿದೆ. ಇದರಲ್ಲಿ ಎಲ್ಲರ…
ಮೈಸೂರು : ನಗರದ ಇಟ್ಟಿಗೆಗೂಡಿನ ಶ್ರೀ ರೇಣುಕಾದೇವಿ ಕರಗ ದೇವಸ್ಥಾನ ಟ್ರಸ್ಟ್, ಶ್ರೀ ಚಾಮುಂಡೇಶ್ವರಿ ಮತ್ತು ಮಾರಿಯಮ್ಮನವರ ೧೦೨ನೇ ಕರಗಮಹೋತ್ಸವ…