ಮಂಡ್ಯ

ಉದ್ದೇಶ ಪೂರ್ವಕ ಅಲ್ಲ, ಆಡು ಭಾಷೆಯ ಮಾತು : ರಮೇಶ್‌ ಬಂಡಿಸಿದ್ದೇಗೌಡ ಸ್ಪಷ್ಟನೆ

ಮೈಸೂರು : ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಗ್ರಾಮದಲ್ಲಿ ತಾನು ಆಡಿರುವ ಮಾತುಗಳು ಉದ್ದೇಶಪೂರ್ವಕ ಅಲ್ಲ. ಆಡು ಭಾಷೆಯಲ್ಲಿ ಮಾತಾಡಿದ್ದೇನೆ. ನನ್ನ ಮಾತುಗಳಿಗೆ ಈಗಾಗಲೇ ವಿಷಾದ ವ್ಯಕ್ತಪಡಿಸಿದ್ದು, ಇದನ್ನು ಬೆಳೆಸುವುದು ಬೇಡ ಎಂದು ಸೆಸ್ಕ್ ಅಧ್ಯಕ್ಷರೂ ಆದ ಶಾಸಕ ರಮೇಶ್ ಬಂಡಿಸಿದ್ದೇಗೌಡ ಅವರು ಸ್ಪಷ್ಟನೆ ನೀಡಿದರು.

ಕಾಮಗಾರಿ ಚಾಲನೆ ವೇಳೆ ತರೀಪುರ ಗ್ರಾಮಸ್ಥರು ಸಮಸ್ಯೆ ಹೇಳಿಕೊಂಡಾಗ ಅಧಿಕಾರಿಗಳಿಗೆ ಎಚ್ಚರಿಕೆ ಕೊಡುವಾಗ ಆಡು ಭಾಷೆಯಲ್ಲಿ ಮಾತಾಡಿರುವೆ. ಅಧಿಕಾರಿಗೆ ಬೆದರಿಕೆಯನ್ನೂ ಹಾಕಿಲ್ಲ. ಇನ್ನೊಂದು ಧರ್ಮ ಮತ್ತು ಜಾತಿಯ ಬಗ್ಗೆ ಎಂದೂ ಮಾತಾಡಿಲ್ಲ. ತಮ್ಮ ಕ್ಷೇತ್ರದಲ್ಲಿ ಕಾಲದಿಂದಲೂ ಸೌಹಾರ್ದವಾಗಿ ಇದ್ದೇವೆ ಎಂದು ಹೇಳಿದರು.

ಮುಸ್ಲಿಂ ಮುಖಂಡರು, ಎಸ್‌ಡಿಪಿಐ ಕಾರ್ಯಕರ್ತರಲ್ಲಿ ಕಳಕಳಿಯಿಂದ ಮನವಿ ಮಾಡುತ್ತೇನೆ. ಇದನ್ನು ಮುಂದುವರಿಸುವುದು ಬೇಡ. ತಮ್ಮ ಕ್ಷೇತ್ರದಲ್ಲಿ ಮೊದಲಿಂದಲೂ ಮುಸ್ಲಿಂ ಜನಾಂಗದವರೊಂದಿಗೆ ಚೆನ್ನಾಗಿದ್ದೇವೆ. ಅವರ ಎಲ್ಲ ಅಭಿವೃದ್ಧಿ ಕೆಲಸಗಳಿಗೂ ಒತ್ತಾಸೆಯಾಗಿದ್ದೇನೆ. ರಾಜಕಾರಣದ ಹೊರತಾಗಿ ಇದನ್ನು ತೆಗೆದುಕೊಳ್ಳಬೇಕು ಎಂದು ಹೇಳಿದರು.

ನಮ್ಮ 40 ವರ್ಷದ ರಾಜಕಾರಣದಲ್ಲಿ ಶ್ರೀರಂಗಪಟ್ಟಣ ಕ್ಷೇತ್ರದಲ್ಲಿ ಒಂದೇ ಒಂದು ಕೋಮು ಗಲಭೆ ಅಥವಾ ಜಾತಿ ಸಂಘರ್ಷ ಆಗಿಲ್ಲ. ಜನರ ವಿಶ್ವಾಸ ಗಳಿಸಿಕೊಂಡು ಕೆಲಸ ಮಾಡುತ್ತ ಬಂದಿದ್ದೇವೆ. ಸಂವಿಧಾನ ಬದ್ಧವಾಗಿ ನಮ್ಮ ಕೆಲಸ ಮುಂದುವರಿಯಲಿದೆ. ಯಾರಿಗೂ ನೋವುಂಟು ಮಾಡುವುದು ನಮ್ಮ ಉದ್ದೇಶ ಇಲ್ಲ ಎಂದು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಎಸ್‌ಸಿ, ಎಸ್‌ಟಿಗಳ ಹಕ್ಕು ರಕ್ಷಣೆಗೆ ಕ್ರಮ : ಡಾ.ಮೂರ್ತಿ

ಮೈಸೂರು : ಆದಿವಾಸಿ ಸಮುದಾಯಗಳ ಮೇಲಿನ ದೌರ್ಜನ್ಯ, ಸಾಮಾಜಿಕ ಬಹಿಷ್ಕಾರ ಹಾಗೂ ಮೈಸೂರು ಭಾಗದಲ್ಲಿ ದಾಖಲಾಗಿರುವ 134 ಪೋಕ್ಸೊ ಪ್ರಕರಣಗಳು…

1 hour ago

ಬೆಂಕಿ ಅವಘಡ | ಅಬಕಾರಿ ಡಿಸಿ ಅಮಾನತಿಗೆ ಶಿಫಾರಸ್ಸು ಮಾಡಲು ಸೂಚನೆ ಕೊಟ್ಟ ಯತೀಂದ್ರ ಸಿದ್ದರಾಮಯ್ಯ!

ಮೈಸೂರು : ಸೋಮವಾರ ಪಬ್‌ನಲ್ಲಿ ಸಂಭವಿಸಿದ್ದ ಬೆಂಕಿ ಅವಘಡದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ತವ್ಯ ಲೋಪದ ಕಾರಣಕ್ಕಾಗಿ ಅಬಕಾರಿ…

2 hours ago

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ತಮಿಳುನಾಡು ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ರೈತರಿಗೆ ಸಿಎಂ ವಿಜಯ್‌ ಬಂಪರ್‌ ಕೊಡುಗೆ ನೀಡಿದ್ದಾರೆ. ವಿವಿಧ ಸಹಕಾರಿ ಬ್ಯಾಂಕುಗಳಲ್ಲಿ ರೈತರು ಪಡೆದಿರುವ 75,000 ರೂ…

6 hours ago

ಮುಂಗಾರು ಕೊರತೆ: ಹಾರಂಗಿ ಜಲಾಶಯದ ಒಳಹರಿವು ತೀವ್ರ ಕುಸಿತ

ಮಡಿಕೇರಿ: ಮುಂಗಾರು ಮಳೆ ಕೊರತೆಯಿಂದ ಹಾರಂಗಿ ಜಲಾಶಯಕ್ಕೆ ಒಳಹರಿವು ತೀವ್ರವಾಗಿ ಕುಸಿದಿದ್ದು, ರೈತರಲ್ಲಿ ಆತಂಕ ಹೆಚ್ಚಾಗಿದೆ. ಮಳೆಗಾಲವಾದರೂ ಜಿಲ್ಲೆಯಲ್ಲಿ ಮಳೆ…

8 hours ago

ಮೆಡಿಕಲ್‌ನಲ್ಲಿ ಇನ್ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಮೆಡಿಕಲ್‌ ಶಾಪ್‌ಗಳಲ್ಲಿ ಇನ್ಮು ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಆದೇಶ…

8 hours ago

ನಟ ವಿಜಯ್‌ ರಾಘವೇಂದ್ರ, ಶ್ರೀಮುರಳಿಗೆ ಮಾತೃ ವಿಯೋಗ

ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಿರ್ಮಾಪಕರಾದ ಎಸ್.ಎ.ಚಿನ್ನೇಗೌಡ ಅವರ ಪತ್ನಿ ಹಾಗೂ ನಟರಾದ ವಿಜಯ್‌ ರಾಘವೇಂದ್ರ, ಶ್ರೀಮುರಳಿ ಅವರ ತಾಯಿ…

9 hours ago