ಮಂಡ್ಯ

ಹಿಂದೂ ಕಾರ್ಯಕರ್ತರಿಗೆ ನೋಟೀಸ್: ಪೊಲೀಸರ ವಿರುದ್ಧ ಪ್ರತಿಭಟನೆ

ಮಂಡ್ಯ: ಕೆರಗೋಡು ಹನುಮ ಧ್ವಜ ಸ್ಥಂಭ ವಿವಾದ ಸಂದರ್ಭದಲ್ಲಿ ನಡೆದ ಅಹಿತಕರ ಘಟನೆಗಳಲ್ಲಿ ಭಾಗಿಯಾಗಿದ್ದ ಕೆಲವರಿಗೆ ಪೊಲೀಸರು ನೋಟಿಸ್‌ ನೀಡಿರುವುದನ್ನು ಖಂಡಿಸಿ, ಹಿಂದೂ ಸಂಘಟನೆ ಕಾರ್ಯಕರ್ತರು ಕೆರಗೋಡಿನಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಇಂದು (ಮೇ.11) ಕೆರಗೋಡು ಬಸ್‌ ನಿಲ್ದಾಣದಲ್ಲಿ ಜಮಾವಣೆಗೊಂಡ ಹಿಂದೂ ಕಾರ್ಯಕರ್ತರು, ಪ್ರತಿಭಟನೆಗೂ ಮುನ್ನ ಹನುಮ ದೇವಾಲಯದಲ್ಲಿ ಪೂಜೆ ಸಲ್ಲಿಸಿದರು. ಬಳಿಕ ಕೆರಗೋಡು ಪೊಲೀಸ್‌ ಠಾಣೆಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ದಾರಿಯುದ್ದಕ್ಕೂ ಪೊಲೀಸರು ಹಾಗೂ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಹನುಮ ಧ್ವಜ ಹೋರಾಟದಲ್ಲಿ ಭಾಗಿಯಾಗಿದ್ದ ಹಿಂದೂ ಕಾರ್ಯಕರ್ತರಿಗೆ ಪೊಲೀಸರು ಕಿರುಕುಳ ನೀಡುತ್ತಿದ್ದಾರೆ. ಕೆಲವರಿಗೆ ರೌಡಿ ಶೀಟ್ ತೆರೆಯಲು ಪೊಲೀಸರು ಮುಂದಾಗಿದ್ದು, ರೌಡಿ ಶೀಟ್ ಓಪನ್ ಮಾಡುವ ಸಂಬಂಧ ಮೂವರಿಗೆ ನೋಟಿಸ್ ನೀಡಿದ್ದಾರೆ. ಕಾಂಗ್ರೆಸ್ ಸರ್ಕಾರ ಪೊಲೀಸರ ಮೂಲಕ ಹಿಂದೂಗಳ ಹೋರಾಟ ಹತ್ತಿಕ್ಕುವ ಕೆಲಸಕ್ಕೆ ಮುಂದಾಗಿದೆ ಎಂದು ಪ್ರತಿಭಟನಕಾರರು ಕಿಡಿ ಕಾರಿದರು.

ಪೊಲೀಸ್‌ ಠಾಣೆ ಮುಂಭಾಗ ಧರಣಿ ಕುಳಿತ ಪ್ರತಿಭಟನಕಾರರು ರಾಜಕೀಯ ಪ್ರಭಾವಕ್ಕೊಳಗಾಗಿ ಪೊಲೀಸರು ಹಿಂದೂ ಕಾರ್ಯಕರ್ತರ ಮೇಲೆ ದಬ್ಬಾಳಿಕೆ ಮಾಡುತ್ತಿದ್ದಾರೆ. ದಬ್ಬಾಳಿಕೆ ಮಾಡುತ್ತಿರುವ ಪೊಲೀಸರನ್ನು ಕೂಡಲೇ ಸೇವೆಯಿಂದ ಅಮಾನತು ಮಾಡಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಜೆಡಿಎಸ್‌ ಮುಖಂಡ ಬಿ.ಆರ್‌ ರಾಮಚಂದ್ರ, ಮುಖಂಡರಾದ ರಘುನಂದನ್‌, ವಸಂತಕುಮಾರ್‌, ಯೋಗೇಶ್‌, ನರಸಿಂಹಮೂರ್ತಿ, ವಿರೂಪಾಕ್ಷ, ಬಾಲು ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕಟಾವಿಗೆ ಬಂದಿದ್ದ ಕಬ್ಬಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು: ರೈತರು ಕಂಗಾಲು

ನಂಜನಗೂಡು: ಆಳೆತ್ತರ ಬೆಳೆದು ನಿಂತಿದ್ದ ಕಬ್ಬಿನ ಬೆಳೆಗೆ ದುಷ್ಕರ್ಮಿಗಳು ಬೆಂಕಿ ಇಟ್ಟ ಪರಿಣಾಮ ಐದು ಎಕರೆಯಲ್ಲಿ ಬೆಳೆದಿದ್ದ ಕಬ್ಬು ಬೆಂಕಿಗಾಹುತಿಯಾಗಿರುವ…

9 hours ago

ಹನೂರು| ಬಿರುಗಾಳಿ ಸಹಿತ ಭಾರೀ ಮಳೆಗೆ ಬೆಳೆ ನಾಶ: ಕಂಗಾಲಾದ ರೈತರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿರುಗಾಳಿ ಸಹಿತ ಮಳೆಗೆ ಹಲವಾರು ರೈತರು ಬೆಳೆದಿದ್ದ 50ಕ್ಕೂ ಹೆಚ್ಚು…

9 hours ago

ಗುಂಡ್ಲುಪೇಟೆ| ಭಾರೀ ಗಾಳಿ ಮಳೆಗೆ ಬಾಳೆ ಬೆಳೆ ನಾಶ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ‌ ಬುಧವಾರ ಸುರಿದ ಬಿರುಗಾಳಿ ಮಳೆಗೆ ಬಾಲೆ ಬೆಳೆ ನಾಶವಾಗಿರುವ ಘಟನೆ…

9 hours ago

ಬೌರಿಂಗ್‌ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಸಾವು: ಕಾರ್ಯಪಾಲಕ ಎಂಜಿನಿಯರ್‌ ಅಮಾನತ್ತಿಗೆ ಸಿಎಂ ಆದೇಶ

ಬೆಂಗಳೂರು: ಬೌರಿಂಗ್‌ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಬಲಿಯಾಗಿದ್ದ ಪ್ರಕರಣದಲ್ಲಿ ಸಂಬಂಧಪಟ್ಟ ಎಂಜಿನಿಯರ್‌ ಅನ್ನು ಕೂಡಲೇ ಅಮಾನತು…

9 hours ago

ಗುಂಡ್ಲುಪೇಟೆ| ಮನೆ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಭೇದಿಸಿ, ಇಬ್ಬರು…

9 hours ago

ಅಧಿಕಾರ ಹಂಚಿಕೆ ಬಗ್ಗೆ ಯಾವುದೇ ಗೊಂದಲವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಅಧಿಕಾರ ಹಂಚಿಕೆಯ ಬಗ್ಗೆ ಯಾವುದೇ ಗೊಂದಲ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿನ ರಾಜಕೀಯ ಗೊಂದಲಗಳನ್ನು ಆದಷ್ಟು…

9 hours ago