ಮಂಡ್ಯ

ನುಡಿಹಬ್ಬ:‌ ಸಮ್ಮೇಳನಾದ್ಯಕ್ಷರಾಗಿ ಪ್ರೊ.ಕೆ.ಎಸ್ ಭಗವಾನ್‌ ಆಯ್ಕೆಗೆ ಒತ್ತಾಯ

ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮಂಡ್ಯದಲ್ಲಿ ನಡೆಯುತ್ತಿರುವುದು ಸ್ವಾಗತಾರ್ಹ ವಿಚಾರವಾಗಿದ್ದು ಸಮ್ಮೇಳನದ ಅಧ್ಯಕ್ಷರನ್ನಾಗಿ ಸಾಹಿತಿ ಪ್ರೊಫೆಸರ್ ಕೆಎಸ್ ಭಗವಾನ್ ಅವರನ್ನು ಆಯ್ಕೆ ಮಾಡಬೇಕೆಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ಗೌರವ ಅಧ್ಯಕ್ಷರಾದ ಎಂ ಸಿ ಬಸವರಾಜು, ಬಿಟಿ ವಿಶ್ವನಾಥ್  ಮನವಿ ಮಾಡಿದ್ದಾರೆ.

ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮಂಡ್ಯ ಜಿಲ್ಲೆಯಲ್ಲಿ ನಡೆಯುತ್ತಿರುವುದು ಸಂತೋಷದಾಯಕವಾದ ವಿಚಾರವಾಗಿದೆ. ಈ ಹಿಂದೆ ನಡೆದ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಯನ್ನು ಜಯದೇವ ತಾಯಿ ಲಿಗಾಡೆ ಮತ್ತು ಡಾಕ್ಟರ್ ಚದುರಂಗ ಅವರು ತುಂಬಿದ್ದಾರೆ. ಆದ್ದರಿಂದ ಈ ಬಾರಿಯ ಸಮ್ಮೇಳನ ಅಧ್ಯಕ್ಷರ ಸ್ಥಾನವನ್ನು ಪ್ರೊಫೆಸರ್ ಭಗವಾನ್ ಅವರಿಗೆ ನೀಡಬೇಕೆಂದು ಒತ್ತಾಯಿಸಿದರು.

ಭಗವಾನ್ ಅವರು ಅನೇಕ ವೈಚಾರಿಕ ಗ್ರಂಥಗಳನ್ನು ಕನ್ನಡ ಸಾಹಿತ್ಯಕ್ಕೆ ನೀಡಿದ್ದಾರೆ. ಅನೇಕ ಮಹನೀಯರ ಅಮೂಲ್ಯವಾದ ಕೃತಿಗಳನ್ನು ಕನ್ನಡಕ್ಕೆ ತರ್ಜುಮೆ ಮಾಡಿದ್ದಾರೆ .ಹಾಗಾಗಿ ಅವರಿಗೆ ಸಮ್ಮೇಳನ ಅಧ್ಯಕ್ಷರ ಸ್ಥಾನವನ್ನು ನೀಡಬೇಕು ಎಂದು ತಿಳಿಸಿದರು.

ಕಾವೇರಿ ಆರತಿ ಆನಾಹುತಗಳಿಗೆ ಕಾರಣವಾಗಲಿದೆ

ಗಂಗಾ ಆರತಿಯಂತೆ ಇಲ್ಲಿಯೂ ಕಾವೇರಿ ಆರತಿ ಪ್ರಾರಂಭಿಸಲಾಗುತ್ತಿದ್ದು ಇದು ಅನಾಹುತಗಳಿಗೆ ಕಾರಣವಾಗಲಿದೆ. ಆದ್ದರಿಂದ ಇದನ್ನು ಕೈಬಿಡಬೇಕು ಎಂದು ಆಗ್ರಹಿಸಿದರು.

ಕಾವೇರಿ ಆರತಿ ಬದಲು ಅನೇಕ ಕೆಲಸಗಳಿವೆ. ಕಾವೇರಿ ಕೊಳ್ಳದಲ್ಲಿ ಈ ಬಾರಿ ನೀರು ಹರಿದು ಹೋಗಿದ್ದು ಮೇಕೆದಾಟು ಯೋಜನೆ ಅನುಷ್ಠಾನವಾಗುವ ಸಾಧ್ಯತೆ ಕ್ಷೀಣವಾಗಿದೆ. ಆದಕಾರಣ ಮಳೆಗಾಲದಲ್ಲಿ ನೀರನ್ನು ಸಂರಕ್ಷಣೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಚಿಂತಿಸಬೇಕು. ಕೆರೆಗಳನ್ನು ತುಂಬಿಸುವ ಬಗ್ಗೆ ಮತ್ತು ಕೃಷಿ ವಿಸ್ತರಣೆಯ ಬಗ್ಗೆ ಯೋಚಿಸಬೇಕು ಎಂದರು .

ಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ವಸಂತಮ್ಮ, ಸಿ ಶಿವಲಿಂಗಯ್ಯ, ಗುರುಮೂರ್ತಿ, ಎಂಸಿ ಲಂಕೇಶ್, ಜಯರಾಮ್ ,ಕೆ ವಿ ವೆಂಕಟಾಚಲಯ್ಯ ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸೈಬರ್‌ ವಂಚನೆ ಕೇವಲ ಆರ್ಥಿಕ ಅಪರಾಧವಲ್ಲ. ರಾಷ್ಟ್ರೀಯ ಭದ್ರತೆಗೆ ಸವಾಲು: ಅಮಿತ್‌ ಶಾ

ನವದೆಹಲಿ: ಭಾರತದಲ್ಲಿ ವೇಗವಾಗಿ ಬೆಳೆಯುತ್ತಿರುವ ಸೈಬರ್‌ ಅಪರಾಧಗಳ ವಿರುದ್ಧ ಕೇಂದ್ರ ಸರ್ಕಾರ ಸಮರ ಸಾರಿದೆ. ಸೈಬರ್‌ ಭದ್ರತೆಯು ಈಗ ಕೇವಲ…

34 mins ago

ಬೆಂಗಳೂರಿನಲ್ಲಿ ಭೀಕರ ಅಪಘಾತ: ಶಾಲಾ ಬಸ್‌ ಹರಿದು ಇಬ್ಬರು ಪುಟ್ಟ ಮಕ್ಕಳ ದಾರುಣ ಸಾವು

ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ಶಾಲಾ ಬಸ್ಸೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.…

35 mins ago

ಮಲೆಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತರ ಭಕ್ತರಿಂದ ಪಾದಯಾತ್ರೆ: ಪೊಲೀಸರಿಂದ ಬ್ಯಾರಿಕೇಡ್‌ ಹಾಕಿ ಜಾಗೃತಿ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆಮಾದೇಶ್ವರ ಬೆಟ್ಟಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತಾದಿಗಳು ಪಾದಯಾತ್ರೆಯ…

1 hour ago

ಶಾಸಕರು ಯಾವಾಗ ಬೇಕಾದರೂ ಪ್ರವಾಸಕ್ಕೆ ಹೋಗಬಹುದು: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಶಾಸಕರ ವಿದೇಶ ಪ್ರವಾಸದ ಬಗ್ಗೆ ಮಾಹಿತಿ ಇಲ್ಲ. ಆದರೆ ಶಾಸಕರು ಯಾವಾಗ ಬೇಕಾದರೂ ಪ್ರವಾಸಕ್ಕೆ ಹೋಗಬಹುದು ಎಂದು ಆರೋಗ್ಯ…

2 hours ago

ಟಾಕ್ಸಿಕ್‌ ಚಿತ್ರಕ್ಕೆ ಮತ್ತೊಂದು ಸಂಕಷ್ಟ: ರಾಷ್ಟ್ರೀಯ ಕ್ರೈಸ್ತರ ಒಕ್ಕೂಟದಿಂದ ದೂರು ಸಲ್ಲಿಕೆ

ಬೆಂಗಳೂರು: ರಾಕಿಂಗ್‌ ಸ್ಟಾರ್‌ ಯಶ್‌ ಅಭಿನಯದ ಬಹುನಿರೀಕ್ಷಿತ ಟಾಕ್ಸಿಕ್‌ ಸಿನಿಮಾ ಬಿಡುಗಡೆಗೂ ಮುನ್ನವೇ ಸಾಲು ಸಾಲು ವಿವಾದಗಳಿಗೆ ಗುರಿಯಾಗುತ್ತಿದೆ. ಇದೀಗ…

2 hours ago

ನಾನು ಹೈಕಮಾಂಡ್‌ ಹೇಳಿದಂತೆ ನಡೆದುಕೊಳ್ಳುತ್ತೇನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಿದ್ದರಾಮಯ್ಯ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ ಎಂಬ ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಟಾಂಗ್‌ ಕೊಟ್ಟಿದ್ದಾರೆ. ಸಿಎಂ…

3 hours ago