ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮಂಡ್ಯದಲ್ಲಿ ನಡೆಯುತ್ತಿರುವುದು ಸ್ವಾಗತಾರ್ಹ ವಿಚಾರವಾಗಿದ್ದು ಸಮ್ಮೇಳನದ ಅಧ್ಯಕ್ಷರನ್ನಾಗಿ ಸಾಹಿತಿ ಪ್ರೊಫೆಸರ್ ಕೆಎಸ್ ಭಗವಾನ್ ಅವರನ್ನು ಆಯ್ಕೆ ಮಾಡಬೇಕೆಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ಗೌರವ ಅಧ್ಯಕ್ಷರಾದ ಎಂ ಸಿ ಬಸವರಾಜು, ಬಿಟಿ ವಿಶ್ವನಾಥ್ ಮನವಿ ಮಾಡಿದ್ದಾರೆ.
ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮಂಡ್ಯ ಜಿಲ್ಲೆಯಲ್ಲಿ ನಡೆಯುತ್ತಿರುವುದು ಸಂತೋಷದಾಯಕವಾದ ವಿಚಾರವಾಗಿದೆ. ಈ ಹಿಂದೆ ನಡೆದ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಯನ್ನು ಜಯದೇವ ತಾಯಿ ಲಿಗಾಡೆ ಮತ್ತು ಡಾಕ್ಟರ್ ಚದುರಂಗ ಅವರು ತುಂಬಿದ್ದಾರೆ. ಆದ್ದರಿಂದ ಈ ಬಾರಿಯ ಸಮ್ಮೇಳನ ಅಧ್ಯಕ್ಷರ ಸ್ಥಾನವನ್ನು ಪ್ರೊಫೆಸರ್ ಭಗವಾನ್ ಅವರಿಗೆ ನೀಡಬೇಕೆಂದು ಒತ್ತಾಯಿಸಿದರು.
ಭಗವಾನ್ ಅವರು ಅನೇಕ ವೈಚಾರಿಕ ಗ್ರಂಥಗಳನ್ನು ಕನ್ನಡ ಸಾಹಿತ್ಯಕ್ಕೆ ನೀಡಿದ್ದಾರೆ. ಅನೇಕ ಮಹನೀಯರ ಅಮೂಲ್ಯವಾದ ಕೃತಿಗಳನ್ನು ಕನ್ನಡಕ್ಕೆ ತರ್ಜುಮೆ ಮಾಡಿದ್ದಾರೆ .ಹಾಗಾಗಿ ಅವರಿಗೆ ಸಮ್ಮೇಳನ ಅಧ್ಯಕ್ಷರ ಸ್ಥಾನವನ್ನು ನೀಡಬೇಕು ಎಂದು ತಿಳಿಸಿದರು.
ಕಾವೇರಿ ಆರತಿ ಆನಾಹುತಗಳಿಗೆ ಕಾರಣವಾಗಲಿದೆ
ಗಂಗಾ ಆರತಿಯಂತೆ ಇಲ್ಲಿಯೂ ಕಾವೇರಿ ಆರತಿ ಪ್ರಾರಂಭಿಸಲಾಗುತ್ತಿದ್ದು ಇದು ಅನಾಹುತಗಳಿಗೆ ಕಾರಣವಾಗಲಿದೆ. ಆದ್ದರಿಂದ ಇದನ್ನು ಕೈಬಿಡಬೇಕು ಎಂದು ಆಗ್ರಹಿಸಿದರು.
ಕಾವೇರಿ ಆರತಿ ಬದಲು ಅನೇಕ ಕೆಲಸಗಳಿವೆ. ಕಾವೇರಿ ಕೊಳ್ಳದಲ್ಲಿ ಈ ಬಾರಿ ನೀರು ಹರಿದು ಹೋಗಿದ್ದು ಮೇಕೆದಾಟು ಯೋಜನೆ ಅನುಷ್ಠಾನವಾಗುವ ಸಾಧ್ಯತೆ ಕ್ಷೀಣವಾಗಿದೆ. ಆದಕಾರಣ ಮಳೆಗಾಲದಲ್ಲಿ ನೀರನ್ನು ಸಂರಕ್ಷಣೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಚಿಂತಿಸಬೇಕು. ಕೆರೆಗಳನ್ನು ತುಂಬಿಸುವ ಬಗ್ಗೆ ಮತ್ತು ಕೃಷಿ ವಿಸ್ತರಣೆಯ ಬಗ್ಗೆ ಯೋಚಿಸಬೇಕು ಎಂದರು .
ಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ವಸಂತಮ್ಮ, ಸಿ ಶಿವಲಿಂಗಯ್ಯ, ಗುರುಮೂರ್ತಿ, ಎಂಸಿ ಲಂಕೇಶ್, ಜಯರಾಮ್ ,ಕೆ ವಿ ವೆಂಕಟಾಚಲಯ್ಯ ಉಪಸ್ಥಿತರಿದ್ದರು.
ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…
ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…