ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮಂಡ್ಯದಲ್ಲಿ ನಡೆಯುತ್ತಿರುವುದು ಸ್ವಾಗತಾರ್ಹ ವಿಚಾರವಾಗಿದ್ದು ಸಮ್ಮೇಳನದ ಅಧ್ಯಕ್ಷರನ್ನಾಗಿ ಸಾಹಿತಿ ಪ್ರೊಫೆಸರ್ ಕೆಎಸ್ ಭಗವಾನ್ ಅವರನ್ನು ಆಯ್ಕೆ ಮಾಡಬೇಕೆಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ಗೌರವ ಅಧ್ಯಕ್ಷರಾದ ಎಂ ಸಿ ಬಸವರಾಜು, ಬಿಟಿ ವಿಶ್ವನಾಥ್ ಮನವಿ ಮಾಡಿದ್ದಾರೆ.
ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮಂಡ್ಯ ಜಿಲ್ಲೆಯಲ್ಲಿ ನಡೆಯುತ್ತಿರುವುದು ಸಂತೋಷದಾಯಕವಾದ ವಿಚಾರವಾಗಿದೆ. ಈ ಹಿಂದೆ ನಡೆದ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಯನ್ನು ಜಯದೇವ ತಾಯಿ ಲಿಗಾಡೆ ಮತ್ತು ಡಾಕ್ಟರ್ ಚದುರಂಗ ಅವರು ತುಂಬಿದ್ದಾರೆ. ಆದ್ದರಿಂದ ಈ ಬಾರಿಯ ಸಮ್ಮೇಳನ ಅಧ್ಯಕ್ಷರ ಸ್ಥಾನವನ್ನು ಪ್ರೊಫೆಸರ್ ಭಗವಾನ್ ಅವರಿಗೆ ನೀಡಬೇಕೆಂದು ಒತ್ತಾಯಿಸಿದರು.
ಭಗವಾನ್ ಅವರು ಅನೇಕ ವೈಚಾರಿಕ ಗ್ರಂಥಗಳನ್ನು ಕನ್ನಡ ಸಾಹಿತ್ಯಕ್ಕೆ ನೀಡಿದ್ದಾರೆ. ಅನೇಕ ಮಹನೀಯರ ಅಮೂಲ್ಯವಾದ ಕೃತಿಗಳನ್ನು ಕನ್ನಡಕ್ಕೆ ತರ್ಜುಮೆ ಮಾಡಿದ್ದಾರೆ .ಹಾಗಾಗಿ ಅವರಿಗೆ ಸಮ್ಮೇಳನ ಅಧ್ಯಕ್ಷರ ಸ್ಥಾನವನ್ನು ನೀಡಬೇಕು ಎಂದು ತಿಳಿಸಿದರು.
ಕಾವೇರಿ ಆರತಿ ಆನಾಹುತಗಳಿಗೆ ಕಾರಣವಾಗಲಿದೆ
ಗಂಗಾ ಆರತಿಯಂತೆ ಇಲ್ಲಿಯೂ ಕಾವೇರಿ ಆರತಿ ಪ್ರಾರಂಭಿಸಲಾಗುತ್ತಿದ್ದು ಇದು ಅನಾಹುತಗಳಿಗೆ ಕಾರಣವಾಗಲಿದೆ. ಆದ್ದರಿಂದ ಇದನ್ನು ಕೈಬಿಡಬೇಕು ಎಂದು ಆಗ್ರಹಿಸಿದರು.
ಕಾವೇರಿ ಆರತಿ ಬದಲು ಅನೇಕ ಕೆಲಸಗಳಿವೆ. ಕಾವೇರಿ ಕೊಳ್ಳದಲ್ಲಿ ಈ ಬಾರಿ ನೀರು ಹರಿದು ಹೋಗಿದ್ದು ಮೇಕೆದಾಟು ಯೋಜನೆ ಅನುಷ್ಠಾನವಾಗುವ ಸಾಧ್ಯತೆ ಕ್ಷೀಣವಾಗಿದೆ. ಆದಕಾರಣ ಮಳೆಗಾಲದಲ್ಲಿ ನೀರನ್ನು ಸಂರಕ್ಷಣೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಚಿಂತಿಸಬೇಕು. ಕೆರೆಗಳನ್ನು ತುಂಬಿಸುವ ಬಗ್ಗೆ ಮತ್ತು ಕೃಷಿ ವಿಸ್ತರಣೆಯ ಬಗ್ಗೆ ಯೋಚಿಸಬೇಕು ಎಂದರು .
ಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ವಸಂತಮ್ಮ, ಸಿ ಶಿವಲಿಂಗಯ್ಯ, ಗುರುಮೂರ್ತಿ, ಎಂಸಿ ಲಂಕೇಶ್, ಜಯರಾಮ್ ,ಕೆ ವಿ ವೆಂಕಟಾಚಲಯ್ಯ ಉಪಸ್ಥಿತರಿದ್ದರು.
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…
ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…
ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…
ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…
ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…