ಮಂಡ್ಯ: ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಮ್ಮೇಳನಾಧ್ಯಕ್ಷರನ್ನಾಗಿ ಸಾಹಿತ್ಯ ವಲಯದ ಡಾ.ರಾಗೌ ಕಾವ್ಯನಾಮದಿಂದ ಜನಪ್ರಿಯರಾದ ಡಾ.ರಾಮೇಗೌಡ ಅವರನ್ನು ಆಯ್ಕೆ ಮಾಡುವಂತೆ ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ಹಾಗೂ ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾಧ್ಯಕ್ಷ ಡಿ.ಪಿ.ಸ್ವಾಮಿ ಸಲಹೆ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಗೌ ಅವರು ಇದುವರೆಗೂ ೮೫ ಕೃತಿಗಳನ್ನು ರಚಿಸಿದ್ದಾರೆ. ಕವಿಯಾಗಿ, ವಿಮರ್ಶಕರಾಗಿ, ಜಾನಪದ ವಿದ್ಯಾಂಸರಾಗಿ, ನಾಟಕಕಾರರಾಗಿ, ಗ್ರಂಥ ಸಂಪಾದಕರಾಗಿ ಸಾಹಿತ್ಯ ಕ್ಷೇತ್ರಕ್ಕೆ ತಮ್ಮದೇ ಕೊಡುಗೆಯನ್ನು ನೀಡಿದ್ದಾರೆ ಎಂದರು.
ಮಂಡ್ಯ ಜಿಲ್ಲೆಯವರೇ ಆದ ರಾಮೇಗೌಡರು ಮದ್ದೂರು ತಾಲೂಕಿನ ಈರೇಗೌಡನದೊಡ್ಡಿ ಗ್ರಾಮದವರಾಗಿದ್ದು, ತಮ್ಮ ೫ನೇ ತರಗತಿ ಶಿಕ್ಷಣದವರೆಗೆ ಮಾತ್ರ ಸ್ವಗ್ರಾಮದಲ್ಲಿದ್ದರು. ನಂತರ ಅವರ ಶೈಕ್ಷಣಿಕ ಹಾಗೂ ವೃತ್ತಿ ಜೀವನ ಮೈಸೂರಿನಲ್ಲಿ ನಡೆಸಿದ್ದು, ಸಾಹಿತ್ಯಿಕವಾಗಿ ರಾಜ್ಯಕ್ಕೆ ತಮ್ಮ ಬಹುತೇಕ ಪ್ರಕಾರಗಳಲ್ಲಿ ಕೆಲಸ ಮಾಡಿದ್ದಾರೆ ಐದು ಬಾರಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದ ಡಾ.ರಾಮೇಗೌಡರು ಸಮ್ಮೇಳನಾಧ್ಯಕ್ಷರಾಗಲು ಸೂಕ್ತ ಎಂದು ಹೇಳಿದರು.
ಸದರಿ ಸಮ್ಮೇಳನವು ಕನ್ನಡ ಸಾಹಿತ್ಯ ಸಮ್ಮೇಳನವಾಗಿರುವುದರಿಂದ ಸಾಹಿತಿಗಳನ್ನೇ ಸಮ್ಮೇಳನಾಧ್ಯಕ್ಷರನ್ನಾಗಿ ಮಾಡಬೇಕು. ಕನ್ನಡ ಸಮ್ಮೇಳನಗಳನ್ನು ನಡೆಸಿ ಸಾಹಿತ್ಯೇತರರನ್ನು ಸಮ್ಮೇಳನಾಧ್ಯಕ್ಷರನ್ನಾಗಿ ಮಾಡಿಕೊಳ್ಳಲಿ ಎಂದು ಸಾಹಿತ್ಯೇತರರನ್ನು ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಮ್ಮೇಳನಾಧ್ಯಕ್ಷರನ್ನಾಗಿ ಆಯ್ಕೆ ಮಾಡುವ ಚರ್ಚೆಗೆ ವಿರೋಧ ವ್ಯಕ್ತಪಡಿಸಿದರು.
ಅದ್ದೂರು ಸಮ್ಮೇಳನದ ಬದಲಿಗೆ ಸಾಹಿತ್ಯ ಚಟುವಟಿಕೆಗಳಿಗೆ ಆಧ್ಯತೆ ನೀಡುವಂತೆ ಸಾಹಿತಿ ಬೋರೇಗೌಡ ಚಿಕ್ಕಮರಳಿ ಅವರ ಮಾತಿಗೆ ಸಹ ಮತ ವ್ಯಕ್ತಪಡಿಸಿದ ಡಿ.ಪಿ.ಸ್ವಾಮಿ ಅವರು ರಾಜ್ಯದ ಶಾಲೆಗಳನ್ನು ಅಭಿವೃದ್ಧಿ ಪಡಿಸಿ, ಆಧುನೀಕ ರೀತಿಯಲ್ಲಿ ಶಿಕ್ಷಣ ನೀಡುತ್ತ ಕನ್ನಡ ಸಾಹಿತ್ಯ ಪರಿಷತ್ತು ಗಮನ ಹರಿಸಬೇಕು. ಸಮ್ಮೇಳನಗಳಿಗೆ ಕೋಟ್ಯಾಂತರ ರೂಗಳನ್ನು ವ್ಯಯಿಸುವ ಬದಲಿಗೆ ಎರಡು ವರ್ಷಕ್ಕೊಮ್ಮೆ ಸಮ್ಮೇಳನ ನಡೆಸಿ ಸಮ್ಮೇಳನಗಳಿಗೆ ವ್ಯಯಿಸುವ ಹಣವನ್ನು ಕನ್ನಡ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ವ್ಯಯಿಸಲು ಸಾಹಿತ್ಯ ಪರಿಷತ್ತು ಕಾರ್ಯ ರೂಪಿಸಲಿ ಎಂದು ಸಲಹೆಯನ್ನು ನೀಡಿದರು.
ಗೋಷ್ಠಿಯಲ್ಲಿ ಕರ್ನಾಟಕ ಸಂಘದ ನಿರ್ದೇಶಕ ನಾಗಪ್ಪ, ಕಾರಸವಾಡಿ ಮಹದೇವು ಇದ್ದರು.
ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯ ಸಾರಿಗೆ ನಿಗಮಗಳ (KSRTC, BMTC, NWKRTC, KKRTC) ಸಿಬ್ಬಂದಿಗೆ 26 ತಿಂಗಳ ಬಾಕಿ…
ಮುಂಬೈ : ಮಹಾರಾಷ್ಟ್ರದ ಮಹಾಯುತಿ ಸರ್ಕಾರವು ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯಕ್ಕೆ ನೀಡಲಾಗಿದ್ದ ಶೇಕಡಾ 5ರಷ್ಟು ಮೀಸಲಾತಿಯನ್ನು…
ಮೈಸೂರು : ಇತ್ತೀಚಿಗೆ ನಗರದ ಅರಮನೆ ಸಮೀಪದಲ್ಲಿ ಸಂಭವಿಸಿದ ಹೀಲಿಯಂ ಸಿಲಿಂಡರ್ ಸ್ಪೋಟ ಘಟನೆಗೆ ಸಂಬಂಧಿದಂತೆ, ಸಾರ್ವಜನಿಕ ಶಾಂತಿ, ಸುರಕ್ಷತೆ…
ಕೊಲಂಬೊ : ಐಸಿಸಿ ಪುರುಷರ ಟಿ20 ವರ್ಲ್ಡ್ ಕಪ್ 2026ರಲ್ಲಿ ಪಾಕಿಸ್ತಾನ ತಂಡವು ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ನಮೀಬಿಯಾವನ್ನು…
ನವದೆಹಲಿ: ಎಂ.ಎಂ.ನರವಣೆ ಅವರ ಅಪ್ರಕಟಿತ ಪುಸ್ತಕದ ಕುರಿತು ನಿಯತಕಾಲಿಕೆಯೊಂದರಲ್ಲಿ ಪ್ರಕಟವಾದ ಲೇಖನದ ಪ್ರತಿಯನ್ನು ರಾಹುಲ್ ಗಾಂಧಿ ಸದನದಲ್ಲಿ ಪ್ರದರ್ಶಿಸಿದರು. ಈ…
ಹೊಸದಿಲ್ಲಿ : ಗೂಗಲ್ ಸಿಇಒ ಸುಂದರ್ ಪಿಚೈ ಅವರು ಭಾರತದ ಕೃತಕ ಬುದ್ಧಿಮತ್ತೆ (AI) ಪ್ರಯಾಣವು "ಅಸಾಧಾರಣ" ಆಗಿರುವುದಾಗಿ ಹೇಳಿದ್ದಾರೆ.…