ಮಂಡ್ಯ

ನುಡಿಹಬ್ಬ: ಸಮ್ಮೇಳನಾಧ್ಯಕ್ಷರಾಗಿ ಡಾ.ರಾಮೇಗೌಡ ಆಯ್ಕೆಗೆ ಸಲಹೆ

ಮಂಡ್ಯ: ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಮ್ಮೇಳನಾಧ್ಯಕ್ಷರನ್ನಾಗಿ ಸಾಹಿತ್ಯ ವಲಯದ ಡಾ.ರಾಗೌ ಕಾವ್ಯನಾಮದಿಂದ ಜನಪ್ರಿಯರಾದ ಡಾ.ರಾಮೇಗೌಡ ಅವರನ್ನು ಆಯ್ಕೆ ಮಾಡುವಂತೆ ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ಹಾಗೂ ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾಧ್ಯಕ್ಷ ಡಿ.ಪಿ.ಸ್ವಾಮಿ ಸಲಹೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಗೌ ಅವರು ಇದುವರೆಗೂ ೮೫ ಕೃತಿಗಳನ್ನು ರಚಿಸಿದ್ದಾರೆ. ಕವಿಯಾಗಿ, ವಿಮರ್ಶಕರಾಗಿ, ಜಾನಪದ ವಿದ್ಯಾಂಸರಾಗಿ, ನಾಟಕಕಾರರಾಗಿ, ಗ್ರಂಥ ಸಂಪಾದಕರಾಗಿ ಸಾಹಿತ್ಯ ಕ್ಷೇತ್ರಕ್ಕೆ ತಮ್ಮದೇ ಕೊಡುಗೆಯನ್ನು ನೀಡಿದ್ದಾರೆ ಎಂದರು.

ಮಂಡ್ಯ ಜಿಲ್ಲೆಯವರೇ ಆದ ರಾಮೇಗೌಡರು ಮದ್ದೂರು ತಾಲೂಕಿನ ಈರೇಗೌಡನದೊಡ್ಡಿ ಗ್ರಾಮದವರಾಗಿದ್ದು, ತಮ್ಮ ೫ನೇ ತರಗತಿ ಶಿಕ್ಷಣದವರೆಗೆ ಮಾತ್ರ ಸ್ವಗ್ರಾಮದಲ್ಲಿದ್ದರು. ನಂತರ ಅವರ ಶೈಕ್ಷಣಿಕ ಹಾಗೂ ವೃತ್ತಿ ಜೀವನ ಮೈಸೂರಿನಲ್ಲಿ ನಡೆಸಿದ್ದು, ಸಾಹಿತ್ಯಿಕವಾಗಿ ರಾಜ್ಯಕ್ಕೆ ತಮ್ಮ ಬಹುತೇಕ ಪ್ರಕಾರಗಳಲ್ಲಿ ಕೆಲಸ ಮಾಡಿದ್ದಾರೆ ಐದು ಬಾರಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದ ಡಾ.ರಾಮೇಗೌಡರು ಸಮ್ಮೇಳನಾಧ್ಯಕ್ಷರಾಗಲು ಸೂಕ್ತ ಎಂದು ಹೇಳಿದರು.

ಸದರಿ ಸಮ್ಮೇಳನವು ಕನ್ನಡ ಸಾಹಿತ್ಯ ಸಮ್ಮೇಳನವಾಗಿರುವುದರಿಂದ ಸಾಹಿತಿಗಳನ್ನೇ ಸಮ್ಮೇಳನಾಧ್ಯಕ್ಷರನ್ನಾಗಿ ಮಾಡಬೇಕು. ಕನ್ನಡ ಸಮ್ಮೇಳನಗಳನ್ನು ನಡೆಸಿ ಸಾಹಿತ್ಯೇತರರನ್ನು ಸಮ್ಮೇಳನಾಧ್ಯಕ್ಷರನ್ನಾಗಿ ಮಾಡಿಕೊಳ್ಳಲಿ ಎಂದು ಸಾಹಿತ್ಯೇತರರನ್ನು ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಮ್ಮೇಳನಾಧ್ಯಕ್ಷರನ್ನಾಗಿ ಆಯ್ಕೆ ಮಾಡುವ ಚರ್ಚೆಗೆ ವಿರೋಧ ವ್ಯಕ್ತಪಡಿಸಿದರು.

ಅದ್ದೂರು ಸಮ್ಮೇಳನದ ಬದಲಿಗೆ ಸಾಹಿತ್ಯ ಚಟುವಟಿಕೆಗಳಿಗೆ ಆಧ್ಯತೆ ನೀಡುವಂತೆ ಸಾಹಿತಿ ಬೋರೇಗೌಡ ಚಿಕ್ಕಮರಳಿ ಅವರ ಮಾತಿಗೆ ಸಹ ಮತ ವ್ಯಕ್ತಪಡಿಸಿದ ಡಿ.ಪಿ.ಸ್ವಾಮಿ ಅವರು ರಾಜ್ಯದ ಶಾಲೆಗಳನ್ನು ಅಭಿವೃದ್ಧಿ ಪಡಿಸಿ, ಆಧುನೀಕ ರೀತಿಯಲ್ಲಿ ಶಿಕ್ಷಣ ನೀಡುತ್ತ ಕನ್ನಡ ಸಾಹಿತ್ಯ ಪರಿಷತ್ತು ಗಮನ ಹರಿಸಬೇಕು. ಸಮ್ಮೇಳನಗಳಿಗೆ ಕೋಟ್ಯಾಂತರ ರೂಗಳನ್ನು ವ್ಯಯಿಸುವ ಬದಲಿಗೆ ಎರಡು ವರ್ಷಕ್ಕೊಮ್ಮೆ ಸಮ್ಮೇಳನ ನಡೆಸಿ ಸಮ್ಮೇಳನಗಳಿಗೆ ವ್ಯಯಿಸುವ ಹಣವನ್ನು ಕನ್ನಡ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ವ್ಯಯಿಸಲು ಸಾಹಿತ್ಯ ಪರಿಷತ್ತು ಕಾರ್ಯ ರೂಪಿಸಲಿ ಎಂದು ಸಲಹೆಯನ್ನು ನೀಡಿದರು.

ಗೋಷ್ಠಿಯಲ್ಲಿ ಕರ್ನಾಟಕ ಸಂಘದ ನಿರ್ದೇಶಕ ನಾಗಪ್ಪ, ಕಾರಸವಾಡಿ ಮಹದೇವು ಇದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹುಣಸೂರು: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ

ಹುಣಸೂರು: ತಾಲ್ಲೂಕಿನ ಬಿಳಿಕೆರೆ ಗ್ರಾಮದ ಕೆರೆಯ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಒಡಿಶಾ…

6 hours ago

ಹನೂರು| ಕೆಸರಿನಲ್ಲಿ ಸಿಲುಕಿ ನಿತ್ರಾಣಗೊಂಡಿದ್ದ ಹೆಣ್ಣಾನೆ ಚಿಕಿತ್ಸೆ ಫಲಿಸದೇ ಸಾವು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ನೀರು ಕುಡಿಯಲು ಬಂದು ಕೆಸರಿನಲ್ಲಿ ಸಿಲುಕಿಕೊಂಡು ನಿತ್ರಾಣಗೊಂಡಿದ್ದ ಹೆಣ್ಣಾನೆ ಚಿಕಿತ್ಸೆಗೆ…

6 hours ago

ಪಶ್ಚಿಮ ಬಂಗಾಳದಲ್ಲಿ ನಾಳೆ ಮೊದಲ ಹಂತದ ಚುನಾವಣೆ

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಳೆ ಮತದಾನ ನಡೆಯಲಿದೆ. ನಾಳೆ ಉತ್ತರ ಬಂಗಾಳದ ಎಲ್ಲಾ 152…

8 hours ago

24 ಗಂಟೆಯ ಒಳಗಡೆ ಉತ್ತರಿಸಿ: ಮಲ್ಲಿಕಾರ್ಜುನ ಖರ್ಗೆಗೆ ಆಯೋಗ ನೋಟಿಸ್‌

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದಕ್ಕಾಗಿ ಚುನಾವಣಾ ಆಯೋಗವು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ…

8 hours ago

ನಾಳೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ನಾಳೆ ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.…

9 hours ago

ಧಾರವಾಡ ಆಕಾಶವಾಣಿ ಕೇಂದ್ರ ಸ್ಥಳಾಂತರಿಸದಂತೆ ಅಶ್ವಿನಿ ವೈಷ್ಣವ್‌ ಆದೇಶ

ನವದೆಹಲಿ: ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರ ಸ್ಥಳಾಂತರ ನಿರ್ಧಾರವನ್ನು ಪ್ರಸಾರ ಭಾರತಿ ಹಿಂತೆಗೆದುಕೊಂಡಿದೆ. ಉತ್ತರ ಕರ್ನಾಟಕ ಜನರ ಒತ್ತಾಸೆ, ಅಭಿಲಾಷೆಯಂತೆ…

10 hours ago