ಮಂಡ್ಯ

ನುಡಿಹಬ್ಬ: ಸಮ್ಮೇಳನಾಧ್ಯಕ್ಷರಾಗಿ ಡಾ.ರಾಮೇಗೌಡ ಆಯ್ಕೆಗೆ ಸಲಹೆ

ಮಂಡ್ಯ: ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಮ್ಮೇಳನಾಧ್ಯಕ್ಷರನ್ನಾಗಿ ಸಾಹಿತ್ಯ ವಲಯದ ಡಾ.ರಾಗೌ ಕಾವ್ಯನಾಮದಿಂದ ಜನಪ್ರಿಯರಾದ ಡಾ.ರಾಮೇಗೌಡ ಅವರನ್ನು ಆಯ್ಕೆ ಮಾಡುವಂತೆ ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ಹಾಗೂ ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾಧ್ಯಕ್ಷ ಡಿ.ಪಿ.ಸ್ವಾಮಿ ಸಲಹೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಗೌ ಅವರು ಇದುವರೆಗೂ ೮೫ ಕೃತಿಗಳನ್ನು ರಚಿಸಿದ್ದಾರೆ. ಕವಿಯಾಗಿ, ವಿಮರ್ಶಕರಾಗಿ, ಜಾನಪದ ವಿದ್ಯಾಂಸರಾಗಿ, ನಾಟಕಕಾರರಾಗಿ, ಗ್ರಂಥ ಸಂಪಾದಕರಾಗಿ ಸಾಹಿತ್ಯ ಕ್ಷೇತ್ರಕ್ಕೆ ತಮ್ಮದೇ ಕೊಡುಗೆಯನ್ನು ನೀಡಿದ್ದಾರೆ ಎಂದರು.

ಮಂಡ್ಯ ಜಿಲ್ಲೆಯವರೇ ಆದ ರಾಮೇಗೌಡರು ಮದ್ದೂರು ತಾಲೂಕಿನ ಈರೇಗೌಡನದೊಡ್ಡಿ ಗ್ರಾಮದವರಾಗಿದ್ದು, ತಮ್ಮ ೫ನೇ ತರಗತಿ ಶಿಕ್ಷಣದವರೆಗೆ ಮಾತ್ರ ಸ್ವಗ್ರಾಮದಲ್ಲಿದ್ದರು. ನಂತರ ಅವರ ಶೈಕ್ಷಣಿಕ ಹಾಗೂ ವೃತ್ತಿ ಜೀವನ ಮೈಸೂರಿನಲ್ಲಿ ನಡೆಸಿದ್ದು, ಸಾಹಿತ್ಯಿಕವಾಗಿ ರಾಜ್ಯಕ್ಕೆ ತಮ್ಮ ಬಹುತೇಕ ಪ್ರಕಾರಗಳಲ್ಲಿ ಕೆಲಸ ಮಾಡಿದ್ದಾರೆ ಐದು ಬಾರಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದ ಡಾ.ರಾಮೇಗೌಡರು ಸಮ್ಮೇಳನಾಧ್ಯಕ್ಷರಾಗಲು ಸೂಕ್ತ ಎಂದು ಹೇಳಿದರು.

ಸದರಿ ಸಮ್ಮೇಳನವು ಕನ್ನಡ ಸಾಹಿತ್ಯ ಸಮ್ಮೇಳನವಾಗಿರುವುದರಿಂದ ಸಾಹಿತಿಗಳನ್ನೇ ಸಮ್ಮೇಳನಾಧ್ಯಕ್ಷರನ್ನಾಗಿ ಮಾಡಬೇಕು. ಕನ್ನಡ ಸಮ್ಮೇಳನಗಳನ್ನು ನಡೆಸಿ ಸಾಹಿತ್ಯೇತರರನ್ನು ಸಮ್ಮೇಳನಾಧ್ಯಕ್ಷರನ್ನಾಗಿ ಮಾಡಿಕೊಳ್ಳಲಿ ಎಂದು ಸಾಹಿತ್ಯೇತರರನ್ನು ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಮ್ಮೇಳನಾಧ್ಯಕ್ಷರನ್ನಾಗಿ ಆಯ್ಕೆ ಮಾಡುವ ಚರ್ಚೆಗೆ ವಿರೋಧ ವ್ಯಕ್ತಪಡಿಸಿದರು.

ಅದ್ದೂರು ಸಮ್ಮೇಳನದ ಬದಲಿಗೆ ಸಾಹಿತ್ಯ ಚಟುವಟಿಕೆಗಳಿಗೆ ಆಧ್ಯತೆ ನೀಡುವಂತೆ ಸಾಹಿತಿ ಬೋರೇಗೌಡ ಚಿಕ್ಕಮರಳಿ ಅವರ ಮಾತಿಗೆ ಸಹ ಮತ ವ್ಯಕ್ತಪಡಿಸಿದ ಡಿ.ಪಿ.ಸ್ವಾಮಿ ಅವರು ರಾಜ್ಯದ ಶಾಲೆಗಳನ್ನು ಅಭಿವೃದ್ಧಿ ಪಡಿಸಿ, ಆಧುನೀಕ ರೀತಿಯಲ್ಲಿ ಶಿಕ್ಷಣ ನೀಡುತ್ತ ಕನ್ನಡ ಸಾಹಿತ್ಯ ಪರಿಷತ್ತು ಗಮನ ಹರಿಸಬೇಕು. ಸಮ್ಮೇಳನಗಳಿಗೆ ಕೋಟ್ಯಾಂತರ ರೂಗಳನ್ನು ವ್ಯಯಿಸುವ ಬದಲಿಗೆ ಎರಡು ವರ್ಷಕ್ಕೊಮ್ಮೆ ಸಮ್ಮೇಳನ ನಡೆಸಿ ಸಮ್ಮೇಳನಗಳಿಗೆ ವ್ಯಯಿಸುವ ಹಣವನ್ನು ಕನ್ನಡ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ವ್ಯಯಿಸಲು ಸಾಹಿತ್ಯ ಪರಿಷತ್ತು ಕಾರ್ಯ ರೂಪಿಸಲಿ ಎಂದು ಸಲಹೆಯನ್ನು ನೀಡಿದರು.

ಗೋಷ್ಠಿಯಲ್ಲಿ ಕರ್ನಾಟಕ ಸಂಘದ ನಿರ್ದೇಶಕ ನಾಗಪ್ಪ, ಕಾರಸವಾಡಿ ಮಹದೇವು ಇದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಎಸ್‌ಸಿ, ಎಸ್‌ಟಿಗಳ ಹಕ್ಕು ರಕ್ಷಣೆಗೆ ಕ್ರಮ : ಡಾ.ಮೂರ್ತಿ

ಮೈಸೂರು : ಆದಿವಾಸಿ ಸಮುದಾಯಗಳ ಮೇಲಿನ ದೌರ್ಜನ್ಯ, ಸಾಮಾಜಿಕ ಬಹಿಷ್ಕಾರ ಹಾಗೂ ಮೈಸೂರು ಭಾಗದಲ್ಲಿ ದಾಖಲಾಗಿರುವ 134 ಪೋಕ್ಸೊ ಪ್ರಕರಣಗಳು…

8 hours ago

ಬೆಂಕಿ ಅವಘಡ | ಅಬಕಾರಿ ಡಿಸಿ ಅಮಾನತಿಗೆ ಶಿಫಾರಸ್ಸು ಮಾಡಲು ಸೂಚನೆ ಕೊಟ್ಟ ಯತೀಂದ್ರ ಸಿದ್ದರಾಮಯ್ಯ!

ಮೈಸೂರು : ಸೋಮವಾರ ಪಬ್‌ನಲ್ಲಿ ಸಂಭವಿಸಿದ್ದ ಬೆಂಕಿ ಅವಘಡದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ತವ್ಯ ಲೋಪದ ಕಾರಣಕ್ಕಾಗಿ ಅಬಕಾರಿ…

9 hours ago

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ತಮಿಳುನಾಡು ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ರೈತರಿಗೆ ಸಿಎಂ ವಿಜಯ್‌ ಬಂಪರ್‌ ಕೊಡುಗೆ ನೀಡಿದ್ದಾರೆ. ವಿವಿಧ ಸಹಕಾರಿ ಬ್ಯಾಂಕುಗಳಲ್ಲಿ ರೈತರು ಪಡೆದಿರುವ 75,000 ರೂ…

13 hours ago

ಮುಂಗಾರು ಕೊರತೆ: ಹಾರಂಗಿ ಜಲಾಶಯದ ಒಳಹರಿವು ತೀವ್ರ ಕುಸಿತ

ಮಡಿಕೇರಿ: ಮುಂಗಾರು ಮಳೆ ಕೊರತೆಯಿಂದ ಹಾರಂಗಿ ಜಲಾಶಯಕ್ಕೆ ಒಳಹರಿವು ತೀವ್ರವಾಗಿ ಕುಸಿದಿದ್ದು, ರೈತರಲ್ಲಿ ಆತಂಕ ಹೆಚ್ಚಾಗಿದೆ. ಮಳೆಗಾಲವಾದರೂ ಜಿಲ್ಲೆಯಲ್ಲಿ ಮಳೆ…

14 hours ago

ಮೆಡಿಕಲ್‌ನಲ್ಲಿ ಇನ್ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಮೆಡಿಕಲ್‌ ಶಾಪ್‌ಗಳಲ್ಲಿ ಇನ್ಮು ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಆದೇಶ…

15 hours ago

ನಟ ವಿಜಯ್‌ ರಾಘವೇಂದ್ರ, ಶ್ರೀಮುರಳಿಗೆ ಮಾತೃ ವಿಯೋಗ

ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಿರ್ಮಾಪಕರಾದ ಎಸ್.ಎ.ಚಿನ್ನೇಗೌಡ ಅವರ ಪತ್ನಿ ಹಾಗೂ ನಟರಾದ ವಿಜಯ್‌ ರಾಘವೇಂದ್ರ, ಶ್ರೀಮುರಳಿ ಅವರ ತಾಯಿ…

16 hours ago