ಮಂಡ್ಯ

ನುಡಿಹಬ್ಬ: ಸಮ್ಮೇಳನಾಧ್ಯಕ್ಷರಾಗಿ ಡಾ.ರಾಮೇಗೌಡ ಆಯ್ಕೆಗೆ ಸಲಹೆ

ಮಂಡ್ಯ: ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಮ್ಮೇಳನಾಧ್ಯಕ್ಷರನ್ನಾಗಿ ಸಾಹಿತ್ಯ ವಲಯದ ಡಾ.ರಾಗೌ ಕಾವ್ಯನಾಮದಿಂದ ಜನಪ್ರಿಯರಾದ ಡಾ.ರಾಮೇಗೌಡ ಅವರನ್ನು ಆಯ್ಕೆ ಮಾಡುವಂತೆ ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ಹಾಗೂ ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾಧ್ಯಕ್ಷ ಡಿ.ಪಿ.ಸ್ವಾಮಿ ಸಲಹೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಗೌ ಅವರು ಇದುವರೆಗೂ ೮೫ ಕೃತಿಗಳನ್ನು ರಚಿಸಿದ್ದಾರೆ. ಕವಿಯಾಗಿ, ವಿಮರ್ಶಕರಾಗಿ, ಜಾನಪದ ವಿದ್ಯಾಂಸರಾಗಿ, ನಾಟಕಕಾರರಾಗಿ, ಗ್ರಂಥ ಸಂಪಾದಕರಾಗಿ ಸಾಹಿತ್ಯ ಕ್ಷೇತ್ರಕ್ಕೆ ತಮ್ಮದೇ ಕೊಡುಗೆಯನ್ನು ನೀಡಿದ್ದಾರೆ ಎಂದರು.

ಮಂಡ್ಯ ಜಿಲ್ಲೆಯವರೇ ಆದ ರಾಮೇಗೌಡರು ಮದ್ದೂರು ತಾಲೂಕಿನ ಈರೇಗೌಡನದೊಡ್ಡಿ ಗ್ರಾಮದವರಾಗಿದ್ದು, ತಮ್ಮ ೫ನೇ ತರಗತಿ ಶಿಕ್ಷಣದವರೆಗೆ ಮಾತ್ರ ಸ್ವಗ್ರಾಮದಲ್ಲಿದ್ದರು. ನಂತರ ಅವರ ಶೈಕ್ಷಣಿಕ ಹಾಗೂ ವೃತ್ತಿ ಜೀವನ ಮೈಸೂರಿನಲ್ಲಿ ನಡೆಸಿದ್ದು, ಸಾಹಿತ್ಯಿಕವಾಗಿ ರಾಜ್ಯಕ್ಕೆ ತಮ್ಮ ಬಹುತೇಕ ಪ್ರಕಾರಗಳಲ್ಲಿ ಕೆಲಸ ಮಾಡಿದ್ದಾರೆ ಐದು ಬಾರಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದ ಡಾ.ರಾಮೇಗೌಡರು ಸಮ್ಮೇಳನಾಧ್ಯಕ್ಷರಾಗಲು ಸೂಕ್ತ ಎಂದು ಹೇಳಿದರು.

ಸದರಿ ಸಮ್ಮೇಳನವು ಕನ್ನಡ ಸಾಹಿತ್ಯ ಸಮ್ಮೇಳನವಾಗಿರುವುದರಿಂದ ಸಾಹಿತಿಗಳನ್ನೇ ಸಮ್ಮೇಳನಾಧ್ಯಕ್ಷರನ್ನಾಗಿ ಮಾಡಬೇಕು. ಕನ್ನಡ ಸಮ್ಮೇಳನಗಳನ್ನು ನಡೆಸಿ ಸಾಹಿತ್ಯೇತರರನ್ನು ಸಮ್ಮೇಳನಾಧ್ಯಕ್ಷರನ್ನಾಗಿ ಮಾಡಿಕೊಳ್ಳಲಿ ಎಂದು ಸಾಹಿತ್ಯೇತರರನ್ನು ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಮ್ಮೇಳನಾಧ್ಯಕ್ಷರನ್ನಾಗಿ ಆಯ್ಕೆ ಮಾಡುವ ಚರ್ಚೆಗೆ ವಿರೋಧ ವ್ಯಕ್ತಪಡಿಸಿದರು.

ಅದ್ದೂರು ಸಮ್ಮೇಳನದ ಬದಲಿಗೆ ಸಾಹಿತ್ಯ ಚಟುವಟಿಕೆಗಳಿಗೆ ಆಧ್ಯತೆ ನೀಡುವಂತೆ ಸಾಹಿತಿ ಬೋರೇಗೌಡ ಚಿಕ್ಕಮರಳಿ ಅವರ ಮಾತಿಗೆ ಸಹ ಮತ ವ್ಯಕ್ತಪಡಿಸಿದ ಡಿ.ಪಿ.ಸ್ವಾಮಿ ಅವರು ರಾಜ್ಯದ ಶಾಲೆಗಳನ್ನು ಅಭಿವೃದ್ಧಿ ಪಡಿಸಿ, ಆಧುನೀಕ ರೀತಿಯಲ್ಲಿ ಶಿಕ್ಷಣ ನೀಡುತ್ತ ಕನ್ನಡ ಸಾಹಿತ್ಯ ಪರಿಷತ್ತು ಗಮನ ಹರಿಸಬೇಕು. ಸಮ್ಮೇಳನಗಳಿಗೆ ಕೋಟ್ಯಾಂತರ ರೂಗಳನ್ನು ವ್ಯಯಿಸುವ ಬದಲಿಗೆ ಎರಡು ವರ್ಷಕ್ಕೊಮ್ಮೆ ಸಮ್ಮೇಳನ ನಡೆಸಿ ಸಮ್ಮೇಳನಗಳಿಗೆ ವ್ಯಯಿಸುವ ಹಣವನ್ನು ಕನ್ನಡ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ವ್ಯಯಿಸಲು ಸಾಹಿತ್ಯ ಪರಿಷತ್ತು ಕಾರ್ಯ ರೂಪಿಸಲಿ ಎಂದು ಸಲಹೆಯನ್ನು ನೀಡಿದರು.

ಗೋಷ್ಠಿಯಲ್ಲಿ ಕರ್ನಾಟಕ ಸಂಘದ ನಿರ್ದೇಶಕ ನಾಗಪ್ಪ, ಕಾರಸವಾಡಿ ಮಹದೇವು ಇದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

8 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

8 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

8 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

8 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

8 hours ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

8 hours ago