ಮಂಡ್ಯ: ವಿಶ್ವ ಮಾನವ ಒಕ್ಕಲಿಗರ ಮಠದ ಚಂದ್ರಶೇಖರ ಸ್ವಾಮೀಜಿ ಅವರ ಮೇಲೆ ಹಾಕಿರುವ ಎಫ್ಐಆರ್ ಅನ್ನು ಸರ್ಕಾರ ಹಿಂಪಡೆಯಲು ಮುಂದಾಗಬೇಕು ಎಂದು ಒಕ್ಕಲಿಗ ಸೇವಾ ಟ್ರಸ್ಟ್ನ ಅಧ್ಯಕ್ಷ ತಮ್ಮಯ್ಯ ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ವಾಮೀಜಿ ಅವರಿಗೆ ವಯಸ್ಸಾಗಿದ್ದು, ಹಿರಿಯರೂ ಆಗಿದ್ದು, ಬಾಯ್ತಪ್ಪಿನಿಂದ ಹೇಳಿಕೆ ನೀಡಿದ್ದರು. ತಮ್ಮ ಹೇಳಿಕೆಯಿಂದ ತಪ್ಪಾಗಿದೆಯೆಂದು ಕ್ಷಮೆಯನ್ನೂ ಕೇಳಿದ್ದಾರೆ. ಅದನ್ನು ಪರಿಗಣಿಸಿ, ಸರ್ಕಾರ ಎಫ್ಐಆರ್ನ್ನು ಹಿಂಪಡೆಯಬೇಕೆಂದು ಕೋರಿದರು.
ಸದರಿ ಸ್ವಾಮಿಗಳು ಒಂದು ಸಮುದಾಯಕ್ಕೆ ಮಾತ್ರ ಸ್ವಾಮೀಜಿಗಳಲ್ಲ, ಒಂದು ವೇಳೆ ಸರ್ಕಾರ ಎಫ್ಐಆರ್ ಹಿಂಪಡೆಯದೇ ಇದ್ದರೆ ಒಕ್ಕಲಿಗ ಸಮುದಾಯದ ಸೇರಿದಂತೆ ಎಲ್ಲಾ ಸಂಘ ಸಮಸ್ಥೆಗಳು ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.
ಟ್ರಸ್ಟ್ನ ಕಾರ್ಯಾಧ್ಯಕ್ಷ ಎಲ್.ಕೃಷ್ಣ ಮಾತನಾಡಿ, ರಾಜ್ಯದ ರಾಜಕೀಯ ಮುಖಂಡರು ಈ ಸಂಬಂಧ ಗಮನ ಹರಿಸಿ ಸದರಿ ಎಫ್ಐಆರ್ ಹಿಂತೆಗೆಸಲು ಸೂಕ್ತ ಕ್ರಮ ಕೈಗೊಳ್ಳಬೇಕು. ಈ ರೀತಿ ಸ್ವಾಮೀಜಿಗಳ ಮೇಲೆ ತನಿಖೆಯಾದರೆ ಒಕ್ಕಲಿಗ ಸಮಾಜಕ್ಕೆ ಕಳಂಕವಾಗಲಿದೆ. ಸರ್ಕಾರ ಸ್ವಾಮೀಜಿಗಳ ವಿರುದ್ಧ ವಿಚಾರಣೆಯನ್ನು ರದ್ದು ಮಾಡಬೇಕೆಂದು ಮನವಿ ಮಾಡಿದರು.
ಅಖಿಲ ಕರ್ನಾಟಕ ಒಕ್ಕಲಿಗರ ಸಂಘದ ಜಿಲ್ಲಾಧ್ಯಕ್ಷ ಕೆ.ಸಿ.ರವೀಂದ್ರ ಮಾತನಾಡಿ, ಸ್ವಾಮೀಜಿಗಳು ಮಾತನಾಡುವ ವೇಳೆ ಉದ್ವೇಗದಿಂದ ಲೋಪವಾಗಿದೆ. ಸ್ವಾಮೀಜಿಗಳು ಕ್ಷಮೆಯಾಚನೆ ಮಾಡಿದ್ದು, ಇದನ್ನು ಮುಂದುವರೆಸದೇ ಸದರಿ ಪ್ರಕರಣದಿಂದ ಸ್ವಾಮೀಜಿಯವರನ್ನು ಖುಲಾಸೆ ಮಾಡಬೇಕು ಎಂದು ಕೋರಿದರು.
ಗೋಷ್ಠಿಯಲ್ಲಿ ಟ್ರಸ್ಟ್ನ ರಾಜ್ಯ ಉಪಾಧ್ಯಕ್ಷ ಕೃಷ್ಣೇಗೌಡ, ಚಂದ್ರಶೇಖರ್ ಇದ್ದರು.
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…
ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…