ಮಂಡ್ಯ: ವಿಶ್ವ ಮಾನವ ಒಕ್ಕಲಿಗರ ಮಠದ ಚಂದ್ರಶೇಖರ ಸ್ವಾಮೀಜಿ ಅವರ ಮೇಲೆ ಹಾಕಿರುವ ಎಫ್ಐಆರ್ ಅನ್ನು ಸರ್ಕಾರ ಹಿಂಪಡೆಯಲು ಮುಂದಾಗಬೇಕು ಎಂದು ಒಕ್ಕಲಿಗ ಸೇವಾ ಟ್ರಸ್ಟ್ನ ಅಧ್ಯಕ್ಷ ತಮ್ಮಯ್ಯ ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ವಾಮೀಜಿ ಅವರಿಗೆ ವಯಸ್ಸಾಗಿದ್ದು, ಹಿರಿಯರೂ ಆಗಿದ್ದು, ಬಾಯ್ತಪ್ಪಿನಿಂದ ಹೇಳಿಕೆ ನೀಡಿದ್ದರು. ತಮ್ಮ ಹೇಳಿಕೆಯಿಂದ ತಪ್ಪಾಗಿದೆಯೆಂದು ಕ್ಷಮೆಯನ್ನೂ ಕೇಳಿದ್ದಾರೆ. ಅದನ್ನು ಪರಿಗಣಿಸಿ, ಸರ್ಕಾರ ಎಫ್ಐಆರ್ನ್ನು ಹಿಂಪಡೆಯಬೇಕೆಂದು ಕೋರಿದರು.
ಸದರಿ ಸ್ವಾಮಿಗಳು ಒಂದು ಸಮುದಾಯಕ್ಕೆ ಮಾತ್ರ ಸ್ವಾಮೀಜಿಗಳಲ್ಲ, ಒಂದು ವೇಳೆ ಸರ್ಕಾರ ಎಫ್ಐಆರ್ ಹಿಂಪಡೆಯದೇ ಇದ್ದರೆ ಒಕ್ಕಲಿಗ ಸಮುದಾಯದ ಸೇರಿದಂತೆ ಎಲ್ಲಾ ಸಂಘ ಸಮಸ್ಥೆಗಳು ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.
ಟ್ರಸ್ಟ್ನ ಕಾರ್ಯಾಧ್ಯಕ್ಷ ಎಲ್.ಕೃಷ್ಣ ಮಾತನಾಡಿ, ರಾಜ್ಯದ ರಾಜಕೀಯ ಮುಖಂಡರು ಈ ಸಂಬಂಧ ಗಮನ ಹರಿಸಿ ಸದರಿ ಎಫ್ಐಆರ್ ಹಿಂತೆಗೆಸಲು ಸೂಕ್ತ ಕ್ರಮ ಕೈಗೊಳ್ಳಬೇಕು. ಈ ರೀತಿ ಸ್ವಾಮೀಜಿಗಳ ಮೇಲೆ ತನಿಖೆಯಾದರೆ ಒಕ್ಕಲಿಗ ಸಮಾಜಕ್ಕೆ ಕಳಂಕವಾಗಲಿದೆ. ಸರ್ಕಾರ ಸ್ವಾಮೀಜಿಗಳ ವಿರುದ್ಧ ವಿಚಾರಣೆಯನ್ನು ರದ್ದು ಮಾಡಬೇಕೆಂದು ಮನವಿ ಮಾಡಿದರು.
ಅಖಿಲ ಕರ್ನಾಟಕ ಒಕ್ಕಲಿಗರ ಸಂಘದ ಜಿಲ್ಲಾಧ್ಯಕ್ಷ ಕೆ.ಸಿ.ರವೀಂದ್ರ ಮಾತನಾಡಿ, ಸ್ವಾಮೀಜಿಗಳು ಮಾತನಾಡುವ ವೇಳೆ ಉದ್ವೇಗದಿಂದ ಲೋಪವಾಗಿದೆ. ಸ್ವಾಮೀಜಿಗಳು ಕ್ಷಮೆಯಾಚನೆ ಮಾಡಿದ್ದು, ಇದನ್ನು ಮುಂದುವರೆಸದೇ ಸದರಿ ಪ್ರಕರಣದಿಂದ ಸ್ವಾಮೀಜಿಯವರನ್ನು ಖುಲಾಸೆ ಮಾಡಬೇಕು ಎಂದು ಕೋರಿದರು.
ಗೋಷ್ಠಿಯಲ್ಲಿ ಟ್ರಸ್ಟ್ನ ರಾಜ್ಯ ಉಪಾಧ್ಯಕ್ಷ ಕೃಷ್ಣೇಗೌಡ, ಚಂದ್ರಶೇಖರ್ ಇದ್ದರು.
ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್ಬಾರ್) ನಲ್ಲಿ ಸಂಭವಿಸಿದ ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…
ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…
ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…
೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…
ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…