ಮಂಡ್ಯ

ಚಂದ್ರಶೇಖರ ಸ್ವಾಮೀಜಿ ಮೇಲಿನ FIR ಹಿಂಪಡೆಯಲು ಒಕ್ಕಲಿಗ ಸೇವಾ ಸಂಸ್ಥೆ ಮನವಿ

ಮಂಡ್ಯ: ವಿಶ್ವ ಮಾನವ ಒಕ್ಕಲಿಗರ ಮಠದ ಚಂದ್ರಶೇಖರ ಸ್ವಾಮೀಜಿ ಅವರ ಮೇಲೆ ಹಾಕಿರುವ ಎಫ್‌ಐಆರ್ ಅನ್ನು ಸರ್ಕಾರ ಹಿಂಪಡೆಯಲು ಮುಂದಾಗಬೇಕು ಎಂದು ಒಕ್ಕಲಿಗ ಸೇವಾ ಟ್ರಸ್ಟ್‌ನ ಅಧ್ಯಕ್ಷ ತಮ್ಮಯ್ಯ ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ವಾಮೀಜಿ ಅವರಿಗೆ ವಯಸ್ಸಾಗಿದ್ದು, ಹಿರಿಯರೂ ಆಗಿದ್ದು, ಬಾಯ್ತಪ್ಪಿನಿಂದ ಹೇಳಿಕೆ ನೀಡಿದ್ದರು. ತಮ್ಮ ಹೇಳಿಕೆಯಿಂದ ತಪ್ಪಾಗಿದೆಯೆಂದು ಕ್ಷಮೆಯನ್ನೂ ಕೇಳಿದ್ದಾರೆ. ಅದನ್ನು ಪರಿಗಣಿಸಿ, ಸರ್ಕಾರ ಎಫ್‌ಐಆರ್‌ನ್ನು ಹಿಂಪಡೆಯಬೇಕೆಂದು ಕೋರಿದರು.

ಸದರಿ ಸ್ವಾಮಿಗಳು ಒಂದು ಸಮುದಾಯಕ್ಕೆ ಮಾತ್ರ ಸ್ವಾಮೀಜಿಗಳಲ್ಲ, ಒಂದು ವೇಳೆ ಸರ್ಕಾರ ಎಫ್‌ಐಆರ್ ಹಿಂಪಡೆಯದೇ ಇದ್ದರೆ ಒಕ್ಕಲಿಗ ಸಮುದಾಯದ ಸೇರಿದಂತೆ ಎಲ್ಲಾ ಸಂಘ ಸಮಸ್ಥೆಗಳು ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ಟ್ರಸ್ಟ್‌ನ ಕಾರ್ಯಾಧ್ಯಕ್ಷ ಎಲ್.ಕೃಷ್ಣ ಮಾತನಾಡಿ, ರಾಜ್ಯದ ರಾಜಕೀಯ ಮುಖಂಡರು ಈ ಸಂಬಂಧ ಗಮನ ಹರಿಸಿ ಸದರಿ ಎಫ್‌ಐಆರ್ ಹಿಂತೆಗೆಸಲು ಸೂಕ್ತ ಕ್ರಮ ಕೈಗೊಳ್ಳಬೇಕು. ಈ ರೀತಿ ಸ್ವಾಮೀಜಿಗಳ ಮೇಲೆ ತನಿಖೆಯಾದರೆ ಒಕ್ಕಲಿಗ ಸಮಾಜಕ್ಕೆ ಕಳಂಕವಾಗಲಿದೆ. ಸರ್ಕಾರ ಸ್ವಾಮೀಜಿಗಳ ವಿರುದ್ಧ ವಿಚಾರಣೆಯನ್ನು ರದ್ದು ಮಾಡಬೇಕೆಂದು ಮನವಿ ಮಾಡಿದರು.

ಅಖಿಲ ಕರ್ನಾಟಕ ಒಕ್ಕಲಿಗರ ಸಂಘದ ಜಿಲ್ಲಾಧ್ಯಕ್ಷ ಕೆ.ಸಿ.ರವೀಂದ್ರ ಮಾತನಾಡಿ, ಸ್ವಾಮೀಜಿಗಳು ಮಾತನಾಡುವ ವೇಳೆ ಉದ್ವೇಗದಿಂದ ಲೋಪವಾಗಿದೆ. ಸ್ವಾಮೀಜಿಗಳು ಕ್ಷಮೆಯಾಚನೆ ಮಾಡಿದ್ದು, ಇದನ್ನು ಮುಂದುವರೆಸದೇ ಸದರಿ ಪ್ರಕರಣದಿಂದ ಸ್ವಾಮೀಜಿಯವರನ್ನು ಖುಲಾಸೆ ಮಾಡಬೇಕು ಎಂದು ಕೋರಿದರು.

ಗೋಷ್ಠಿಯಲ್ಲಿ ಟ್ರಸ್ಟ್‌ನ ರಾಜ್ಯ ಉಪಾಧ್ಯಕ್ಷ ಕೃಷ್ಣೇಗೌಡ, ಚಂದ್ರಶೇಖರ್ ಇದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

3 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

3 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

3 hours ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

3 hours ago

ಯಶ್: ‘ಟಾಕ್ಸಿಕ್’ ಬೆನ್ನೇರಿದ ಯಶೋ ಮಾರ್ಗ

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…

3 hours ago

ರೈತರ ಪಾಲಿಗೆ ಕಹಿಯಾದ ಸಿಹಿಗುಂಬಳ

ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ  ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…

3 hours ago