ಮಂಡ್ಯ

ಪಡಿತರಕ್ಕೆ ಗ್ರಾಹಕರ ಪರದಾಟ: ಒಂದರ ಬದಲು ಎರಡು ಒಟಿಪಿ

ಮಂಡ್ಯ: ಪಡಿತರ ಅಂಗಡಿಗಳ ಎದುರು ಇದೀಗ ರಾತ್ರಿವರೆಗೂ ಮೈಲುದ್ದದ ಸರತಿ ಸಾಲು ಕಂಡು ಬರುತ್ತಿದೆ. ರೇಶನ್ ಅಂಗಡಿ ಸಿಬ್ಬಂದಿ ಜತೆಗೆ ವಾಗ್ಯುದ್ಧ, ರಂಪಾಟ ಎಲ್ಲೆಡೆ ಸಾಮಾನ್ಯವಾಗಿದೆ. ನೆಟ್ವರ್ಕ್ ಸಮಸ್ಯೆ ಜತೆಯಲ್ಲಿ ಒಂದು ಒಟಿಪಿ ಜತೆಯಲ್ಲಿ ಎರಡು ಒಟಿಪಿ ಪಡೆಯಬೇಕಾಗಿರುವುದರಿಂದ ಅನಗತ್ಯ ವಿಳಂಬವಾಗುತ್ತಿದೆ. ಇದರಿಂದ ಸರತಿಯಲ್ಲಿ ಪಡಿತರಕ್ಕಾಗಿ ಕಾಯುವ ಜನಸಾಮಾನ್ಯರು ಸಾಮಗ್ರಿ ಪಡೆಯಲು ನಿತ್ಯ ಪರದಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗುತ್ತಿದೆ
ಹಿಂದೆ ಪಡಿತರ ಅಂಗಡಿಗಳಲ್ಲಿ ನಿಮಿಷಕ್ಕೆ ಒಂದು ಕಾರ್ಡ್, ಗಂಟೆಗೆ 40 ಕಾರ್ಡ್ ನಿರ್ವಹಣೆ ಆಗುತ್ತಿತ್ತು. ಈಗ ಒಂದು ಕಾರ್ಡ್ಗೆ 10ರಿಂದ 20 ನಿಮಿಷ ಬೇಕಾಗುತ್ತದೆ. ಸರ್ವರ್ ವಿಳಂಬ ಜತೆಗೆ ಕೆಲವು ಸಲ ಸರ್ವರ್ ಕೈಕೊಡುತ್ತಿರುವುದರಿಂದ ದಿನಕ್ಕೆ 40 ಕಾರ್ಡ್ ಕೂಡ ನಿರ್ವಹಣೆ ಆಗದ ದಿನಗಳಿವೆ ಎಂದು ಸಿಬ್ಬಂದಿ ಅಸಹಾಯಕತೆ ವ್ಯಕ್ತಪಡಿಸುತ್ತಾರೆ. ಸೆಪ್ಟೆಂಬರ್ವರೆಗೆ ಒಂದು ಬಾರಿ ಪಡಿತರ ಪಡೆಯಲು ಒಂದು ಸಲ ಮಾತ್ರ ಒಟಿಪಿ ನೀಡಬೇಕಾಗಿತ್ತು. ಈಗ ಕೇಂದ್ರದ ಪಾಲಿನ ಅಕ್ಕಿಗೆ, ರಾಜ್ಯದ ಪಾಲಿನ ಅಕ್ಕಿಗೆ ಎರಡು ಪ್ರತ್ಯೇಕ ಒಟಿಪಿ ಪಡೆಯಬೇಕಾಗಿದೆ.
ಇದು ರಾಜ್ಯವ್ಯಾಪಿ ಸಮಸ್ಯೆ. ಕೇಂದ್ರದ ಮಹತ್ವಾಕಾಂಕ್ಷೆಯ ವನ್ ನೇಶನ್ ವನ್ ರೇಶನ್ ಯೋಜನೆ ಪ್ರಕ್ರಿಯೆ ಆರಂಭವಾಗಿರುವ ಭಾಗವೂ ಆಗಿದೆ. ಹಾಗಾಗಿ ಆರಂಭಿಕವಾಗಿ ಈ ಸಮಸ್ಯೆ ಎದುರಿಸಬೇಕಾಗಿದೆ ಎಂದು ಇಲಾಖಾ ಆಧಿಕಾರಿಗಳು ಸಮಜಾಯಿಶಿಕೆ ನೀಡುತ್ತಿದ್ದಾರೆ.

ಹಿಂದೆ ಪಡಿತರ ಅಂಗಡಿಗಳಲ್ಲಿ ನಿಮಿಷಕ್ಕೆ ಒಂದು ಕಾರ್ಡ್, ಗಂಟೆಗೆ 40 ಕಾರ್ಡ್ ನಿರ್ವಹಣೆ ಆಗುತ್ತಿತ್ತು. ಈಗ ಒಂದು ಕಾರ್ಡ್ಗೆ 10ರಿಂದ 20 ನಿಮಿಷ ಬೇಕಾಗುತ್ತದೆ. ಸರ್ವರ್ ವಿಳಂಬ ಜತೆಗೆ ಕೆಲವು ಸಲ ಸರ್ವರ್ ಕೈಕೊಡುತ್ತಿರುವುದರಿಂದ ದಿನಕ್ಕೆ 40 ಕಾರ್ಡ್ ಕೂಡ ನಿರ್ವಹಣೆ ಆಗದ ದಿನಗಳಿವೆ ಎಂದು ಸಿಬ್ಬಂದಿ ಅಸಹಾಯಕತೆ ವ್ಯಕ್ತಪಡಿಸುತ್ತಾರೆ

andolana

Recent Posts

ಹಣ ಅಕ್ರಮ ವರ್ಗಾವಣೆ ಪ್ರಕರಣ : ಕಾಂಗ್ರೆಸ್‌ ಶಾಸಕ ವೀರೇಂದ್ರಗೆ ಜಾಮೀನು

ಬೆಂಗಳೂರು : ಜಾರಿ ನಿರ್ದೇಶನಾಲಯ(ಇ.ಡಿ) ದಾಖಲಿಸಿದ್ದ ಕ್ರಿಮಿನಲ್‌ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಕಾಂಗ್ರೆಸ್‌ ಶಾಸಕ ಕೆ.ಸಿ.ವೀರೇಂದ್ರ ಅವರಿಗೆ ಬಿಗ್‌ ರಿಲೀಫ್‌…

54 mins ago

ಮೈಸೂರಿನಲ್ಲಿ ಪತ್ರಕರ್ತರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ : ಜಿಲ್ಲಾಧಿಕಾರಿ ಮೆಚ್ಚುಗೆ

ಮೈಸೂರು : ಬೇರೆ ಜಿಲ್ಲೆಗಳಿಗೆ ಹೋಲಿಸಿಕೊಂಡರೆ ಮೈಸೂರಿನ ಪತ್ರಿಕೋದ್ಯಮ ಗುಣಮಟ್ಟದಿಂದ ಕೂಡಿದ್ದು, ಇಲ್ಲಿನ ಪತ್ರಕರ್ತರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು…

2 hours ago

ನಾಪೋಕ್ಲು |ಕಾಡಾನೆಗಳ ದಾಳಿ ; ವಾಹನಗಳು ಜಖಂ

ನಾಪೋಕ್ಲು : ಕಾಡಾನೆಗಳ ದಾಳಿಯಿಂದ ವಾಹನಗಳು ಜಖಂಗೊಂಡ ಘಟನೆ ಮಂಜಾಟ್ ಗಿರಿಜನ ಕಾಲೋನಿಯಲ್ಲಿ ಭಾನುವಾರ ರಾತ್ರಿ ನಡೆದಿದೆ. ಇಲ್ಲಿಗೆ ಸಮೀಪದ…

2 hours ago

ಕೈಗಾರಿಕೆ ಸ್ಥಾಪನೆಗೆ ಅರ್ಜಿ ಬಂದರೆ ಸಂಪೂರ್ಣ ಬೆಂಬಲ: ಸಚಿವ ಚಲುವರಾಯಸ್ವಾಮಿ ಭರವಸೆ

ಮಂಡ್ಯ : ಕೇಂದ್ರ ಬೃಹತ್ ಉಕ್ಕು ಮತ್ತು ಕೈಗಾರಿಕಾ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರು ಯಾವುದಾದರೂ ಕಂಪನಿಗಳಿಂದ ಕೈಗಾರಿಕೆ ಸ್ಥಾಪನೆಗೆ…

3 hours ago

ಜ.1ರಂದು ಚಾ.ಬೆಟ್ಟಕ್ಕೆ ಹೆಚ್ಚಿನ ಜನ ನಿರೀಕ್ಷೆ : ಅಗತ್ಯ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸೂಚನೆ

ಮೈಸೂರು : ಹೊಸ ವರ್ಷ ಜನವರಿ 1ರಂದು ಚಾಮುಂಡಿ ಬೆಟ್ಟಕ್ಕೆ ಹೆಚ್ವಿನ ಭಕ್ತಾಧಿಗಳು ಆಗಮಿಸುವ ನಿರೀಕ್ಷೆ ಇದ್ದು, ಅಗತ್ಯ ವ್ಯವಸ್ಥೆಗಳನ್ನು…

3 hours ago

ಬೈಕ್ ಸಮೇತ ಸಜೀವ ದಹನವಾದ ಯುವಕ ; ಕೊಲೆ ಶಂಕೆ

ನಂಜನಗೂಡು : ಬೈಕ್ ಸಮೇತ ಯುವಕ ಸಜೀವ ದಹನವಾಗಿರುವ ಘಟನೆ ತಾಲ್ಲೂಕಿನ ಕೊರೆಹುಂಡಿ ಗ್ರಾಮದ ಹುಲ್ಲಹಳ್ಳಿ ನಾಲೆ ಬಳಿ ನಡೆದಿದೆ.…

3 hours ago