ಮಂಡ್ಯ: ಪಡಿತರ ಅಂಗಡಿಗಳ ಎದುರು ಇದೀಗ ರಾತ್ರಿವರೆಗೂ ಮೈಲುದ್ದದ ಸರತಿ ಸಾಲು ಕಂಡು ಬರುತ್ತಿದೆ. ರೇಶನ್ ಅಂಗಡಿ ಸಿಬ್ಬಂದಿ ಜತೆಗೆ ವಾಗ್ಯುದ್ಧ, ರಂಪಾಟ ಎಲ್ಲೆಡೆ ಸಾಮಾನ್ಯವಾಗಿದೆ. ನೆಟ್ವರ್ಕ್ ಸಮಸ್ಯೆ ಜತೆಯಲ್ಲಿ ಒಂದು ಒಟಿಪಿ ಜತೆಯಲ್ಲಿ ಎರಡು ಒಟಿಪಿ ಪಡೆಯಬೇಕಾಗಿರುವುದರಿಂದ ಅನಗತ್ಯ ವಿಳಂಬವಾಗುತ್ತಿದೆ. ಇದರಿಂದ ಸರತಿಯಲ್ಲಿ ಪಡಿತರಕ್ಕಾಗಿ ಕಾಯುವ ಜನಸಾಮಾನ್ಯರು ಸಾಮಗ್ರಿ ಪಡೆಯಲು ನಿತ್ಯ ಪರದಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗುತ್ತಿದೆ
ಹಿಂದೆ ಪಡಿತರ ಅಂಗಡಿಗಳಲ್ಲಿ ನಿಮಿಷಕ್ಕೆ ಒಂದು ಕಾರ್ಡ್, ಗಂಟೆಗೆ 40 ಕಾರ್ಡ್ ನಿರ್ವಹಣೆ ಆಗುತ್ತಿತ್ತು. ಈಗ ಒಂದು ಕಾರ್ಡ್ಗೆ 10ರಿಂದ 20 ನಿಮಿಷ ಬೇಕಾಗುತ್ತದೆ. ಸರ್ವರ್ ವಿಳಂಬ ಜತೆಗೆ ಕೆಲವು ಸಲ ಸರ್ವರ್ ಕೈಕೊಡುತ್ತಿರುವುದರಿಂದ ದಿನಕ್ಕೆ 40 ಕಾರ್ಡ್ ಕೂಡ ನಿರ್ವಹಣೆ ಆಗದ ದಿನಗಳಿವೆ ಎಂದು ಸಿಬ್ಬಂದಿ ಅಸಹಾಯಕತೆ ವ್ಯಕ್ತಪಡಿಸುತ್ತಾರೆ. ಸೆಪ್ಟೆಂಬರ್ವರೆಗೆ ಒಂದು ಬಾರಿ ಪಡಿತರ ಪಡೆಯಲು ಒಂದು ಸಲ ಮಾತ್ರ ಒಟಿಪಿ ನೀಡಬೇಕಾಗಿತ್ತು. ಈಗ ಕೇಂದ್ರದ ಪಾಲಿನ ಅಕ್ಕಿಗೆ, ರಾಜ್ಯದ ಪಾಲಿನ ಅಕ್ಕಿಗೆ ಎರಡು ಪ್ರತ್ಯೇಕ ಒಟಿಪಿ ಪಡೆಯಬೇಕಾಗಿದೆ.
ಇದು ರಾಜ್ಯವ್ಯಾಪಿ ಸಮಸ್ಯೆ. ಕೇಂದ್ರದ ಮಹತ್ವಾಕಾಂಕ್ಷೆಯ ವನ್ ನೇಶನ್ ವನ್ ರೇಶನ್ ಯೋಜನೆ ಪ್ರಕ್ರಿಯೆ ಆರಂಭವಾಗಿರುವ ಭಾಗವೂ ಆಗಿದೆ. ಹಾಗಾಗಿ ಆರಂಭಿಕವಾಗಿ ಈ ಸಮಸ್ಯೆ ಎದುರಿಸಬೇಕಾಗಿದೆ ಎಂದು ಇಲಾಖಾ ಆಧಿಕಾರಿಗಳು ಸಮಜಾಯಿಶಿಕೆ ನೀಡುತ್ತಿದ್ದಾರೆ.
ಹಿಂದೆ ಪಡಿತರ ಅಂಗಡಿಗಳಲ್ಲಿ ನಿಮಿಷಕ್ಕೆ ಒಂದು ಕಾರ್ಡ್, ಗಂಟೆಗೆ 40 ಕಾರ್ಡ್ ನಿರ್ವಹಣೆ ಆಗುತ್ತಿತ್ತು. ಈಗ ಒಂದು ಕಾರ್ಡ್ಗೆ 10ರಿಂದ 20 ನಿಮಿಷ ಬೇಕಾಗುತ್ತದೆ. ಸರ್ವರ್ ವಿಳಂಬ ಜತೆಗೆ ಕೆಲವು ಸಲ ಸರ್ವರ್ ಕೈಕೊಡುತ್ತಿರುವುದರಿಂದ ದಿನಕ್ಕೆ 40 ಕಾರ್ಡ್ ಕೂಡ ನಿರ್ವಹಣೆ ಆಗದ ದಿನಗಳಿವೆ ಎಂದು ಸಿಬ್ಬಂದಿ ಅಸಹಾಯಕತೆ ವ್ಯಕ್ತಪಡಿಸುತ್ತಾರೆ
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…