ಮಂಡ್ಯ: ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಸಮಾಜದ ಮುಖ್ಯ ವಾಹಿನಿಗೆ ಬರಬೇಕು. ಸಮುದಾಯಗಳು ಮುಖ್ಯ ವಾಹಿನಿಗೆ ಬರಲು ಶಿಕ್ಷಣದಿಂದ ಮಾತ್ರ ಸಾಧ್ಯ ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿದರು.
ಮಂಡ್ಯ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಂಡ್ಯ ಇವರ ಸಹಯೋಗದಲ್ಲಿ ಸವಿತ ಮಹರ್ಷಿ ಜಯಂತಿಯ ಆಚರಣೆಯನ್ನು ಮಂಡ್ಯ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರಲ್ಲಿ ದೀಪ ಬೆಳಗಿಸಿ ಸವಿತಾ ಮಹರ್ಷಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಿ ಮಾತನಾಡಿದರು.
ಸಮಾಜದ ಉದ್ಧಾರಕ್ಕಾಗಿ ಅಪಾರ ಜ್ಞಾನವನ್ನು ರೂಡಿಸಿಕೊಂಡು ಜ್ಞಾನವನನು ಪಸರಿಸುವ ಮೂಲಕ ಸಮಾಜಕ್ಕೆ ಬೆಳಕಾದವರು ಸವಿವಾ ಮಹರ್ಷಿ ಅವರ ಆದರ್ಶಗಳನ್ನು ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಸವಿತಾ ಸಮಾಜದ ಪ್ರತಿಯೊಬ್ಬರೂ ಕೂಡ ಕೌಶಲ್ಯ ಮತ್ತು ಕಾಯಕವನ್ನು ಬಹಳ ನಿಷ್ಠೆ ಮತ್ತು ಪ್ರಾಮಾಣಿಕತೆ, ಸಮಾನತೆಯಿಂದ ನಿರ್ವಹಿಸುತ್ತಾರೆ. ಯಾವುದೇ ತಾರತಮ್ಯವಿಲ್ಲದೇ ಸೇವಾ ಮನೋಭಾವದಿಂದ, ತಾರತಮ್ಯ ರಹಿತವಾಗಿ ನಿಷ್ಕಲ್ಮಶ ಹೃದಯದಿಂದ ಕೆಲಸವನ್ನು ಮಾಡುತ್ತಾರೆ ಎಂದು ಹೇಳಿದರು.





