ಮದ್ದೂರು: ಪಟ್ಟಣದ ಪೇಟೆ ಬೀದಿಯಲ್ಲಿ ಇಂದು ಬೆಳ್ಳಂಬೆಳಗ್ಗೆ ಜೆಸಿಬಿ ಸದ್ದು ಮಾಡಿದ್ದು, ಅಕ್ರಮ ಫುಟ್ಪಾತ್ ತೆರವು ಕಾರ್ಯಾಚರಣೆ ಮಾಡಲಾಯಿತು.
ಇಂದು ಬೆಳಿಗ್ಗೆಯೇ ಕೊಳ್ಳಿ ವೃತ್ತದಲ್ಲಿ ಕಾರ್ಯಾಚರಣೆ ಆರಂಭಗೊಂಡು, ಪೇಟೆ ಬೀದಿಯಲ್ಲಿದ್ದ ಅಕ್ರಮ ಅಂಗಡಿಗಳು, ಸೀಟುಗಳು ಹಾಗೂ ಫುಟ್ಪಾತ್ ವ್ಯಾಪಾರಿಗಳನ್ನು ತೆರವುಗೊಳಿಸಲಾಯಿತು. ಈ ಕಾರ್ಯಾಚರಣೆ ಟಿಬಿ ವೃತ್ತದವರೆಗೆ ಮುಂದುವರಿಯಿತು.
ಮದ್ದೂರು ಪೇಟೆ ಬೀದಿ ಅಗಲೀಕರಣವನ್ನು 80 ಅಡಿವರೆಗೆ ವಿಸ್ತರಿಸುವ ಕುರಿತು ಶಾಸಕ ಕೆ.ಎಂ.ಉದಯ್ ಅವರು ಈಗಾಗಲೇ ಸಾರ್ವಜನಿಕರೊಂದಿಗೆ ಸಮಾಲೋಚನೆ ನಡೆಸಿದ್ದು, ಶೀಘ್ರದಲ್ಲೇ ರಸ್ತೆ ಅಗಲೀಕರಣ ಕಾರ್ಯ ಕೈಗೊಳ್ಳುವುದಾಗಿ ತಿಳಿಸಿದ್ದರು.
ಈ ಹಿನ್ನೆಲೆಯಲ್ಲಿ ಇಂದು ನಗರಸಭೆ, ಪಿಡಬ್ಲ್ಯೂಡಿ ಹಾಗೂ ಪೊಲೀಸ್ ಇಲಾಖೆ ಸಹಯೋಗದಲ್ಲಿ ಪೇಟೆ ಬೀದಿಯ ಎರಡೂ ಬದಿಯಲ್ಲಿದ್ದ ಅಕ್ರಮ ಫುಟ್ಪಾತ್ಗಳನ್ನು ಪೊಲೀಸ್ ಬಂದೋಬಸ್ತ್ ನಡುವೆ ತೆರವುಗೊಳಿಸಲಾಗುತ್ತಿದೆ.
ಈ ವೇಳೆ ಮಾತನಾಡಿದ ನಗರಸಭಾ ಆಯುಕ್ತೆ ರಾಧಿಕಾ ಅವರು, ಹಲವು ವರ್ಷಗಳಿಂದ ಪೇಟೆ ಬೀದಿಯ ಎರಡೂ ಬದಿಗಳಲ್ಲಿ ಅಂಗಡಿದಾರರು ಅಕ್ರಮವಾಗಿ ಸೀಟುಗಳನ್ನು ಹಾಕಿಕೊಂಡು ವ್ಯಾಪಾರ ನಡೆಸುತ್ತಿದ್ದರು. ಫುಟ್ಪಾತ್ ಮೇಲೆ ತರಕಾರಿ, ಹಣ್ಣು, ವೀಳ್ಯದೆಲೆ ಸೇರಿದಂತೆ ವಿವಿಧ ವಸ್ತುಗಳ ಮಾರಾಟ ನಡೆಯುತ್ತಿತ್ತು. ಇದರಿಂದ ಸಾರ್ವಜನಿಕರ ಸಂಚಾರಕ್ಕೆ, ವಿಶೇಷವಾಗಿ ಬೆಳಗಿನ ವೇಳೆಯಲ್ಲಿ ಶಾಲಾ ವಾಹನಗಳ ಓಡಾಟಕ್ಕೆ ತೀವ್ರ ತೊಂದರೆಯಾಗುತ್ತಿತ್ತು ಎಂದರು.
ಈ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು ಒಗ್ಗೂಡಿಸಿಕೊಂಡು ಇಂದು ಬೆಳಿಗ್ಗೆಯೇ ತೆರವು ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಆದಷ್ಟು ಬೇಗ ಸಂಪೂರ್ಣ ತೆರವು ಕಾರ್ಯ ಪೂರ್ಣಗೊಳಿಸಲಾಗುವುದು. ಸಾರ್ವಜನಿಕರು, ವ್ಯಾಪಾರಿಗಳು ಮತ್ತು ವರ್ತಕರು ಸಹಕರಿಸಬೇಕೆಂದು ಅವರು ಮನವಿ ಮಾಡಿದರು.
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…
ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…
ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…
ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…
ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…