ಮಂಡ್ಯ

ಮದ್ದೂರು ಪೇಟೆ ಬೀದಿಯಲ್ಲಿ ಅಕ್ರಮ ಫುಟ್‌ಪಾತ್ ತೆರವು ಕಾರ್ಯಾಚರಣೆ

ಮದ್ದೂರು: ಪಟ್ಟಣದ ಪೇಟೆ ಬೀದಿಯಲ್ಲಿ ಇಂದು ಬೆಳ್ಳಂಬೆಳಗ್ಗೆ ಜೆಸಿಬಿ ಸದ್ದು ಮಾಡಿದ್ದು, ಅಕ್ರಮ ಫುಟ್‌ಪಾತ್ ತೆರವು ಕಾರ್ಯಾಚರಣೆ ಮಾಡಲಾಯಿತು.

ಇಂದು ಬೆಳಿಗ್ಗೆಯೇ ಕೊಳ್ಳಿ ವೃತ್ತದಲ್ಲಿ ಕಾರ್ಯಾಚರಣೆ ಆರಂಭಗೊಂಡು, ಪೇಟೆ ಬೀದಿಯಲ್ಲಿದ್ದ ಅಕ್ರಮ ಅಂಗಡಿಗಳು, ಸೀಟುಗಳು ಹಾಗೂ ಫುಟ್‌ಪಾತ್ ವ್ಯಾಪಾರಿಗಳನ್ನು ತೆರವುಗೊಳಿಸಲಾಯಿತು. ಈ ಕಾರ್ಯಾಚರಣೆ ಟಿಬಿ ವೃತ್ತದವರೆಗೆ ಮುಂದುವರಿಯಿತು.

ಮದ್ದೂರು ಪೇಟೆ ಬೀದಿ ಅಗಲೀಕರಣವನ್ನು 80 ಅಡಿವರೆಗೆ ವಿಸ್ತರಿಸುವ ಕುರಿತು ಶಾಸಕ ಕೆ.ಎಂ.ಉದಯ್ ಅವರು ಈಗಾಗಲೇ ಸಾರ್ವಜನಿಕರೊಂದಿಗೆ ಸಮಾಲೋಚನೆ ನಡೆಸಿದ್ದು, ಶೀಘ್ರದಲ್ಲೇ ರಸ್ತೆ ಅಗಲೀಕರಣ ಕಾರ್ಯ ಕೈಗೊಳ್ಳುವುದಾಗಿ ತಿಳಿಸಿದ್ದರು.

ಈ ಹಿನ್ನೆಲೆಯಲ್ಲಿ ಇಂದು ನಗರಸಭೆ, ಪಿಡಬ್ಲ್ಯೂಡಿ ಹಾಗೂ ಪೊಲೀಸ್ ಇಲಾಖೆ ಸಹಯೋಗದಲ್ಲಿ ಪೇಟೆ ಬೀದಿಯ ಎರಡೂ ಬದಿಯಲ್ಲಿದ್ದ ಅಕ್ರಮ ಫುಟ್‌ಪಾತ್‌ಗಳನ್ನು ಪೊಲೀಸ್ ಬಂದೋಬಸ್ತ್ ನಡುವೆ ತೆರವುಗೊಳಿಸಲಾಗುತ್ತಿದೆ.

ಈ ವೇಳೆ ಮಾತನಾಡಿದ ನಗರಸಭಾ ಆಯುಕ್ತೆ ರಾಧಿಕಾ ಅವರು, ಹಲವು ವರ್ಷಗಳಿಂದ ಪೇಟೆ ಬೀದಿಯ ಎರಡೂ ಬದಿಗಳಲ್ಲಿ ಅಂಗಡಿದಾರರು ಅಕ್ರಮವಾಗಿ ಸೀಟುಗಳನ್ನು ಹಾಕಿಕೊಂಡು ವ್ಯಾಪಾರ ನಡೆಸುತ್ತಿದ್ದರು. ಫುಟ್‌ಪಾತ್ ಮೇಲೆ ತರಕಾರಿ, ಹಣ್ಣು, ವೀಳ್ಯದೆಲೆ ಸೇರಿದಂತೆ ವಿವಿಧ ವಸ್ತುಗಳ ಮಾರಾಟ ನಡೆಯುತ್ತಿತ್ತು. ಇದರಿಂದ ಸಾರ್ವಜನಿಕರ ಸಂಚಾರಕ್ಕೆ, ವಿಶೇಷವಾಗಿ ಬೆಳಗಿನ ವೇಳೆಯಲ್ಲಿ ಶಾಲಾ ವಾಹನಗಳ ಓಡಾಟಕ್ಕೆ ತೀವ್ರ ತೊಂದರೆಯಾಗುತ್ತಿತ್ತು ಎಂದರು.

ಈ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು ಒಗ್ಗೂಡಿಸಿಕೊಂಡು ಇಂದು ಬೆಳಿಗ್ಗೆಯೇ ತೆರವು ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಆದಷ್ಟು ಬೇಗ ಸಂಪೂರ್ಣ ತೆರವು ಕಾರ್ಯ ಪೂರ್ಣಗೊಳಿಸಲಾಗುವುದು. ಸಾರ್ವಜನಿಕರು, ವ್ಯಾಪಾರಿಗಳು ಮತ್ತು ವರ್ತಕರು ಸಹಕರಿಸಬೇಕೆಂದು ಅವರು ಮನವಿ ಮಾಡಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಸಾಲ ಬಾಧೆ ; ದಂಪತಿ ಆತ್ಮಹತ್ಯೆ

ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…

4 seconds ago

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

13 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

13 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

13 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

13 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

13 hours ago