ಮಂಡ್ಯ

ಮದ್ದೂರು ಪೇಟೆ ಬೀದಿಯಲ್ಲಿ ಅಕ್ರಮ ಫುಟ್‌ಪಾತ್ ತೆರವು ಕಾರ್ಯಾಚರಣೆ

ಮದ್ದೂರು: ಪಟ್ಟಣದ ಪೇಟೆ ಬೀದಿಯಲ್ಲಿ ಇಂದು ಬೆಳ್ಳಂಬೆಳಗ್ಗೆ ಜೆಸಿಬಿ ಸದ್ದು ಮಾಡಿದ್ದು, ಅಕ್ರಮ ಫುಟ್‌ಪಾತ್ ತೆರವು ಕಾರ್ಯಾಚರಣೆ ಮಾಡಲಾಯಿತು.

ಇಂದು ಬೆಳಿಗ್ಗೆಯೇ ಕೊಳ್ಳಿ ವೃತ್ತದಲ್ಲಿ ಕಾರ್ಯಾಚರಣೆ ಆರಂಭಗೊಂಡು, ಪೇಟೆ ಬೀದಿಯಲ್ಲಿದ್ದ ಅಕ್ರಮ ಅಂಗಡಿಗಳು, ಸೀಟುಗಳು ಹಾಗೂ ಫುಟ್‌ಪಾತ್ ವ್ಯಾಪಾರಿಗಳನ್ನು ತೆರವುಗೊಳಿಸಲಾಯಿತು. ಈ ಕಾರ್ಯಾಚರಣೆ ಟಿಬಿ ವೃತ್ತದವರೆಗೆ ಮುಂದುವರಿಯಿತು.

ಮದ್ದೂರು ಪೇಟೆ ಬೀದಿ ಅಗಲೀಕರಣವನ್ನು 80 ಅಡಿವರೆಗೆ ವಿಸ್ತರಿಸುವ ಕುರಿತು ಶಾಸಕ ಕೆ.ಎಂ.ಉದಯ್ ಅವರು ಈಗಾಗಲೇ ಸಾರ್ವಜನಿಕರೊಂದಿಗೆ ಸಮಾಲೋಚನೆ ನಡೆಸಿದ್ದು, ಶೀಘ್ರದಲ್ಲೇ ರಸ್ತೆ ಅಗಲೀಕರಣ ಕಾರ್ಯ ಕೈಗೊಳ್ಳುವುದಾಗಿ ತಿಳಿಸಿದ್ದರು.

ಈ ಹಿನ್ನೆಲೆಯಲ್ಲಿ ಇಂದು ನಗರಸಭೆ, ಪಿಡಬ್ಲ್ಯೂಡಿ ಹಾಗೂ ಪೊಲೀಸ್ ಇಲಾಖೆ ಸಹಯೋಗದಲ್ಲಿ ಪೇಟೆ ಬೀದಿಯ ಎರಡೂ ಬದಿಯಲ್ಲಿದ್ದ ಅಕ್ರಮ ಫುಟ್‌ಪಾತ್‌ಗಳನ್ನು ಪೊಲೀಸ್ ಬಂದೋಬಸ್ತ್ ನಡುವೆ ತೆರವುಗೊಳಿಸಲಾಗುತ್ತಿದೆ.

ಈ ವೇಳೆ ಮಾತನಾಡಿದ ನಗರಸಭಾ ಆಯುಕ್ತೆ ರಾಧಿಕಾ ಅವರು, ಹಲವು ವರ್ಷಗಳಿಂದ ಪೇಟೆ ಬೀದಿಯ ಎರಡೂ ಬದಿಗಳಲ್ಲಿ ಅಂಗಡಿದಾರರು ಅಕ್ರಮವಾಗಿ ಸೀಟುಗಳನ್ನು ಹಾಕಿಕೊಂಡು ವ್ಯಾಪಾರ ನಡೆಸುತ್ತಿದ್ದರು. ಫುಟ್‌ಪಾತ್ ಮೇಲೆ ತರಕಾರಿ, ಹಣ್ಣು, ವೀಳ್ಯದೆಲೆ ಸೇರಿದಂತೆ ವಿವಿಧ ವಸ್ತುಗಳ ಮಾರಾಟ ನಡೆಯುತ್ತಿತ್ತು. ಇದರಿಂದ ಸಾರ್ವಜನಿಕರ ಸಂಚಾರಕ್ಕೆ, ವಿಶೇಷವಾಗಿ ಬೆಳಗಿನ ವೇಳೆಯಲ್ಲಿ ಶಾಲಾ ವಾಹನಗಳ ಓಡಾಟಕ್ಕೆ ತೀವ್ರ ತೊಂದರೆಯಾಗುತ್ತಿತ್ತು ಎಂದರು.

ಈ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು ಒಗ್ಗೂಡಿಸಿಕೊಂಡು ಇಂದು ಬೆಳಿಗ್ಗೆಯೇ ತೆರವು ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಆದಷ್ಟು ಬೇಗ ಸಂಪೂರ್ಣ ತೆರವು ಕಾರ್ಯ ಪೂರ್ಣಗೊಳಿಸಲಾಗುವುದು. ಸಾರ್ವಜನಿಕರು, ವ್ಯಾಪಾರಿಗಳು ಮತ್ತು ವರ್ತಕರು ಸಹಕರಿಸಬೇಕೆಂದು ಅವರು ಮನವಿ ಮಾಡಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

3 hours ago

ರಾಜ್ಯ ರಾಜಕಾರಣದ ಬೆಳವಣಿಗೆಯ ಲಾಭ ಪಡೆಯಲು ಬಿಜೆಪಿ-ಜಾ.ದಳ ಮಿತ್ರಕೂಟ ಯತ್ನ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್‌ನ…

3 hours ago

ಕೊಡಗಿನ ಮಲ್ಲಳ್ಳಿ ಫಾಲ್ಸ್‌ನಲ್ಲಿ ಅಭದ್ರತೆ

ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…

3 hours ago

ಮುಚ್ಚುವ ಆತಂಕದಲ್ಲಿ ಶತಮಾನ ಕಂಡ ಶಾಲೆ

ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…

3 hours ago

ಸರ್ಕಾರಿ ಕಚೇರಿ; ಮೂಲ ಸೌಕರ್ಯಗಳಿಗೆ ಗೋರಿ!

ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…

3 hours ago