ಮಂಡ್ಯ

ಜಿ.ಪಂ,‌ ತಾ.ಪಂ ಚುನಾವಣೆಗೆ ಆದೇಶ ಬಂದಿದೆ: ಸಚಿವ ಎನ್.ಚಲುವರಾಯಸ್ವಾಮಿ

ಮಂಡ್ಯ: ಪಕ್ಷದಿಂದ ಜಿಲ್ಲಾ ಪಂಚಾಯತ್ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆ ಸಿದ್ಧತೆಗೆ ಆದೇಶ ಬಂದಿದೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ.

ಈ ಕುರಿತು ಮಂಡ್ಯದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲಾ ಪಂಚಾಯತ್‌ ಹಾಗೂ ತಾಲ್ಲೂಕು ಪಂಚಾಯತ್‌ ಚುನಾವಣೆಯ ಹಿನ್ನೆಲೆಯಲ್ಲಿ ಕ್ಷೇತ್ರವಾರು ಸಭೆ ಮಾಡುತ್ತಾ ಇದ್ದೀವಿ. ಈ ವರ್ಷ ಮಾರ್ಚ್‌ನಿಂದ ಮುಂದಿನ ಮಾರ್ಚ್‌ವರೆಗೆ ಸ್ಥಳೀಯ ಚುನಾವಣೆಗಳು ನಡೆಯುತ್ತವೆ. ಎಲ್ಲಾ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ತಯಾರಿ ಮಾಡುತ್ತಾ ಇದ್ದೀವಿ ಎಂದರು.

ಇನ್ನು ಕೆಆರ್‌ಎಸ್ ಡ್ಯಾಂನಲ್ಲಿ ಗೇಟ್ ಓಪನ್ ಆಗಿದ್ದ ವಿಚಾರವಾಗಿ ಮಾತನಾಡಿದ ಅವರು, ಪ್ರತಿ ವರ್ಷ ಡ್ಯಾಂನ್ನು ನಿರ್ವಹಣೆ ಮಾಡಬೇಕು. 80 ಅಡಿಗೆ ಬರುವ ಮುಂಚೆ ನಿರ್ವಹಣೆ ಮಾಡ್ತಾರೆ. ಸದ್ಯ ಡ್ಯಾಂನಲ್ಲಿ 107 ಅಡಿ ನೀರು ಇದೆ. ಇನ್ನೇನು ಮಳೆ ಬರುವ ವಾತಾವರಣ ಸಹ ಇದೆ. ನಿರ್ವಹಣೆ ಮಾಡುವ ಸಂದರ್ಭದಲ್ಲಿ ಒಂದು ಗೇಟ್ ಓಪನ್ ಆಗಿತ್ತು. ಬೆಳಗ್ಗೆ 8 ಗಂಟೆಗೆ ಗೇಟ್ ಓಪನ್ ಆಗಿರೋದು ತಿಳಿದಿದೆ. ಇದರಿಂದ ಸ್ವಲ್ಪ ನೀರು ಹೋಗಿದೆ. ಸಂಜೆ 5 ಗಂಟೆ ಒಳಗೆ ತಾಂತ್ರಿಕ ತಂಡ ಈ ಗೇಟ್ ಕ್ಲೋಸ್ ಮಾಡಿದೆ. 600 ರಿಂದ 700 ಕ್ಯೂಸೆಕ್ ನೀರು ಹೋಗಿರಬೇಕು ಅಷ್ಟೇ. ಡ್ಯಾಂ ನಿರ್ಮಾಣ ಮಾಡಿದಾಗಿನಿಂದ ಬೇರೆ ಯಾವ ಕೆಲಸ ಆಗಿಲ್ಲ. ಹೀಗಾಗಿ ಈ ರೀತಿ ಆಗಿದೆ. ತಮಿಳುನಾಡಿಗೆ ನೀರು ಬಿಡಲು ಹೀಗೆ ಮಾಡಿಲ್ಲ. ತಮಿಳುನಾಡಿನವರು ನೀರು ಕೇಳದೇ ಹೇಗೆ ಬಿಡೋಕೆ ಸಾಧ್ಯ. ಕಣ್ತಪ್ಪಿನಿಂದ ಗೇಟ್ ಓಪನ್ ಆಗಿದೆ ಅಷ್ಟೇ. ಅಧಿಕಾರಿಗಳು ಸಮಯ ಪ್ರಜ್ಞೆ ಮೆರೆದು ಅದನ್ನು ಬೇಗ ಸರಿಪಡಿಸಿದ್ದಾರೆ.
ಮಾತನಾಡುವವರು ನೋಡಿಕೊಂಡು ಮಾತಾಡಬೇಕು. ನೂರಾರು ವರ್ಷಗಳು ಆಗಿರೋ ಕಾರಣ ಗೇಟ್‌ಗಳ ರಿವ್ಯೂ ಮಾಡಬೇಕು ಎಂದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಅಸಂಘಟಿತ ಕಾರ್ಮಿಕರಿಗೆ ಜೀವನ ಭದ್ರತೆ ಕಲ್ಪಿಸಿ

ದೇಶದ ಸಾವಿರಾರು ಮಂದಿ ಅಸಂಘಟಿತ ಕಾರ್ಮಿಕರು ಹೊಟ್ಟೆಪಾಡಿಗಾಗಿ ಮಾಡುವ ಉದ್ಯೋಗವೇ ಅವರ ಜೀವಕ್ಕೆ ಮುಳುವಾಗುತ್ತಿದೆ. ಭಾನುವಾರ ಉತ್ತರ ಕನ್ನಡ ಜಿಲ್ಲೆಯ…

2 hours ago

ಓದುಗರ ಪತ್ರ: ರೌಂಡ್ ಕ್ಯಾಂಟೀನ್ ಶೀಘ್ರ ಪುನರಾರಂಭವಾಗಲಿ

ಮೈಸೂರಿನ ಮಾನಸ ಗಂಗೋತ್ರಿಯ ರೌಂಡ್ ಕ್ಯಾಂಟೀನ್ ಕಳೆದ ೫೦ ವರ್ಷಗಳಿಂದ ವಿದ್ಯಾರ್ಥಿಗಳನ್ನು, ಬೋಧಕ -ಬೋಧಕೇತರ ಸಿಬ್ಬಂದಿಗಳನ್ನು ಭಾವನಾತ್ಮಕವಾಗಿ ಬೆಸೆದುಕೊಂಡಿದೆ. ಇದು…

2 hours ago

ಓದುಗರ ಪತ್ರ: ದೇವನೂರರ ಸಲಹೆಗಳು ಅನುಷ್ಠಾನಗೊಳ್ಳಲಿ

ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಕೆ.ಪಿ.ಎಸ್. ಶಾಲೆಗಳ ರೂಪರೇಷೆ ಹಾಗೂ ಸರ್ಕಾರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಅಗತ್ಯವಿರುವ…

2 hours ago

ಓದುಗರ ಪತ್ರ: ಮಹಿಳೆಯರಿಗೂ ಪ್ರಾತಿನಿಧ್ಯ ದೊರಕಲಿ

ಇತ್ತೀಚಿನ ದಿನಗಳಲ್ಲಿ ನಡೆಯುವ ಸಾರ್ವಜನಿಕ ಸಭೆ ಸಮಾರಂಭಗಳು, ವಿಶ್ವವಿದ್ಯಾನಿಲಯ, ಶಾಲಾ ಕಾಲೇಜು ಮೊದಲಾದ ಕಡೆ ನಡೆಯುವ ಚರ್ಚಾಗೋಷ್ಠಿ , ವಿಚಾರಸಂಕಿರಣಗಳಲ್ಲಿ…

2 hours ago

ಇಂಧನ ಬೆಲೆ ಏರಿಕೆ-ಮೊಸಳೆ ಬಂತು ಮೊಸಳೆ ಕಥೆ!

ರಾಜಾರಾಂ ತಲ್ಲೂರು ಇಂದು ದೇಶ ಅನುಭವಿಸುತ್ತಿರುವ ತೈಲ ಶಾಕ್‌ಗೆ ಸರ್ಕಾರದ ಅನಧಿಕೃತ ಹಸ್ತಕ್ಷೇಪ ಕಾರಣ ಸುವ್ಯವಸ್ಥೆಗೆಂದು ರೂಪಿಸಲಾದ ನಿಯಮಗಳನ್ನು, ಆ…

2 hours ago

‘ಬೇಡು ಹಬ್ಬದ ಹೆಸರಿನಲ್ಲಿ ತೊಂದರೆ ನೀಡಿದಲ್ಲಿ ಕಾನೂನು ಕ್ರಮ’

ನವೀನ್ ಡಿಸೋಜ ಕಂಡ ಕಂಡವರನ್ನು ನಿಂದಿಸಿ, ಹಣ ಸಂಗ್ರಹಿಸುವ ವಿಭಿನ್ನ ಹಬ್ಬ; ಕಾನೂನು ಪಾಲಿಸಲು ಪೊಲೀಸ್ ಇಲಾಖೆ ಸೂಚನೆ  ಮಡಿಕೇರಿ: ಅಶ್ಲೀಲ…

2 hours ago