ಮಂಡ್ಯ

ಜಿ.ಪಂ,‌ ತಾ.ಪಂ ಚುನಾವಣೆಗೆ ಆದೇಶ ಬಂದಿದೆ: ಸಚಿವ ಎನ್.ಚಲುವರಾಯಸ್ವಾಮಿ

ಮಂಡ್ಯ: ಪಕ್ಷದಿಂದ ಜಿಲ್ಲಾ ಪಂಚಾಯತ್ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆ ಸಿದ್ಧತೆಗೆ ಆದೇಶ ಬಂದಿದೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ.

ಈ ಕುರಿತು ಮಂಡ್ಯದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲಾ ಪಂಚಾಯತ್‌ ಹಾಗೂ ತಾಲ್ಲೂಕು ಪಂಚಾಯತ್‌ ಚುನಾವಣೆಯ ಹಿನ್ನೆಲೆಯಲ್ಲಿ ಕ್ಷೇತ್ರವಾರು ಸಭೆ ಮಾಡುತ್ತಾ ಇದ್ದೀವಿ. ಈ ವರ್ಷ ಮಾರ್ಚ್‌ನಿಂದ ಮುಂದಿನ ಮಾರ್ಚ್‌ವರೆಗೆ ಸ್ಥಳೀಯ ಚುನಾವಣೆಗಳು ನಡೆಯುತ್ತವೆ. ಎಲ್ಲಾ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ತಯಾರಿ ಮಾಡುತ್ತಾ ಇದ್ದೀವಿ ಎಂದರು.

ಇನ್ನು ಕೆಆರ್‌ಎಸ್ ಡ್ಯಾಂನಲ್ಲಿ ಗೇಟ್ ಓಪನ್ ಆಗಿದ್ದ ವಿಚಾರವಾಗಿ ಮಾತನಾಡಿದ ಅವರು, ಪ್ರತಿ ವರ್ಷ ಡ್ಯಾಂನ್ನು ನಿರ್ವಹಣೆ ಮಾಡಬೇಕು. 80 ಅಡಿಗೆ ಬರುವ ಮುಂಚೆ ನಿರ್ವಹಣೆ ಮಾಡ್ತಾರೆ. ಸದ್ಯ ಡ್ಯಾಂನಲ್ಲಿ 107 ಅಡಿ ನೀರು ಇದೆ. ಇನ್ನೇನು ಮಳೆ ಬರುವ ವಾತಾವರಣ ಸಹ ಇದೆ. ನಿರ್ವಹಣೆ ಮಾಡುವ ಸಂದರ್ಭದಲ್ಲಿ ಒಂದು ಗೇಟ್ ಓಪನ್ ಆಗಿತ್ತು. ಬೆಳಗ್ಗೆ 8 ಗಂಟೆಗೆ ಗೇಟ್ ಓಪನ್ ಆಗಿರೋದು ತಿಳಿದಿದೆ. ಇದರಿಂದ ಸ್ವಲ್ಪ ನೀರು ಹೋಗಿದೆ. ಸಂಜೆ 5 ಗಂಟೆ ಒಳಗೆ ತಾಂತ್ರಿಕ ತಂಡ ಈ ಗೇಟ್ ಕ್ಲೋಸ್ ಮಾಡಿದೆ. 600 ರಿಂದ 700 ಕ್ಯೂಸೆಕ್ ನೀರು ಹೋಗಿರಬೇಕು ಅಷ್ಟೇ. ಡ್ಯಾಂ ನಿರ್ಮಾಣ ಮಾಡಿದಾಗಿನಿಂದ ಬೇರೆ ಯಾವ ಕೆಲಸ ಆಗಿಲ್ಲ. ಹೀಗಾಗಿ ಈ ರೀತಿ ಆಗಿದೆ. ತಮಿಳುನಾಡಿಗೆ ನೀರು ಬಿಡಲು ಹೀಗೆ ಮಾಡಿಲ್ಲ. ತಮಿಳುನಾಡಿನವರು ನೀರು ಕೇಳದೇ ಹೇಗೆ ಬಿಡೋಕೆ ಸಾಧ್ಯ. ಕಣ್ತಪ್ಪಿನಿಂದ ಗೇಟ್ ಓಪನ್ ಆಗಿದೆ ಅಷ್ಟೇ. ಅಧಿಕಾರಿಗಳು ಸಮಯ ಪ್ರಜ್ಞೆ ಮೆರೆದು ಅದನ್ನು ಬೇಗ ಸರಿಪಡಿಸಿದ್ದಾರೆ.
ಮಾತನಾಡುವವರು ನೋಡಿಕೊಂಡು ಮಾತಾಡಬೇಕು. ನೂರಾರು ವರ್ಷಗಳು ಆಗಿರೋ ಕಾರಣ ಗೇಟ್‌ಗಳ ರಿವ್ಯೂ ಮಾಡಬೇಕು ಎಂದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

23 mins ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

4 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

4 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

4 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

7 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

7 hours ago