ಕೆ.ಆರ್.ಪೇಟೆ : ತಂದೆಯ ಸಾವಿನ ಆಘಾತದಲ್ಲಿಯೂ ಕುಟುಂಬದವರು ದಿಟ್ಟ ನಿರ್ಧಾರ ಕೈಗೊಂಡು ಅಂಗಾಂಗ ದಾನ ಮಾಡಲು ಒಪ್ಪಿಗೆ ನೀಡುವ ಮೂಲಕ ಮಾದರಿಯಾಗಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ.
ಬೂಕನಕರೆ ಹೋಬಳಿಯ ಗಂಜಿಗೆರೆ ಕೊಪ್ಪಲು ಗ್ರಾಮದ ಮೊಗಣ್ಣೇಗೌಡ (65) ಬ್ರೈನ್ ಸ್ಟ್ರೋಕ್ಗೆ ಒಳಗಾಗಿದ್ದರು. ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮೆದುಳು ನಿಷ್ಕ್ರೀಯಗೊಂಡಿದ್ದನ್ನು ವೈದ್ಯರು ದೃಢಪಡಿಸಿದ್ದರು. ಇನ್ನು ತಂದೆ ಜೀವಂತವಾಗಿ ಉಳಿಯುವುದಿಲ್ಲ ಎಂಬುದನ್ನು ಮನಗಂಡ ಪುತ್ರರು ಡಾ.ವಾಸನ್ ಅವರ ಸಲಹೆ ಮೇರೆಗೆ ತಮ್ಮ ತಂದೆಯ ಅಂಗಾಂಗ ದಾನಕ್ಕೆ ಒಪ್ಪಿಗೆ ಸೂಚಿಸಿದ್ದಾರೆ.
ಕುಟುಂಬಸ್ಥರು ಅಂಗಾಂಗ ದಾನಕ್ಕೆ ಒಪ್ಪಿಗೆ ನೀಡುತ್ತಿದ್ದಂತೆೆ ಮೈಸೂರು ಜೆಎಸ್ಎಸ್ ಆಸ್ಪತ್ರೆಯ ವೈದ್ಯರಾದ ಡಾ.ವಾಸನ್ ಅವರು ಪರಿಶೀಲಿಸಿ ಮೊಗಣ್ಣೆಗೌಡ ದೇಹದಿಂದ ಲಿವರ್, ಎರಡು ಕಿಡ್ನಿ, ಹೃದುಂ, ಚರ್ಮ, ಕಣ್ಣುಗಳನ್ನು ತೆಗೆದು ಬೇರೆಯವರಿಗೆ ಹಾಕಬಹುದು ಎಂದು ತಿಳಿಸಿದ್ದಾರೆ.
ಮೃತ ಮೊಗಣ್ಣೇಗೌಡರ ಅಂತ್ಯಸಂಸ್ಕಾರವು ಸ್ವಗ್ರಾಮದಲ್ಲಿ ಅ.28 (ಇಂದು) ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…
ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…
ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…
ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…
ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್ಪೆಕ್ಟರ್ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…