ಮಂಡ್ಯ

ಸಾವಿನಲ್ಲೂ ಸಾರ್ಥಕತೆ; ತಂದೆಯ ಅಂಗಾಂಗ ದಾನ

ಕೆ.ಆರ್.ಪೇಟೆ :  ತಂದೆಯ  ಸಾವಿನ ಆಘಾತದಲ್ಲಿಯೂ  ಕುಟುಂಬದವರು ದಿಟ್ಟ ನಿರ್ಧಾರ ಕೈಗೊಂಡು ಅಂಗಾಂಗ ದಾನ ಮಾಡಲು ಒಪ್ಪಿಗೆ ನೀಡುವ ಮೂಲಕ ಮಾದರಿಯಾಗಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ.

ಬೂಕನಕರೆ ಹೋಬಳಿಯ  ಗಂಜಿಗೆರೆ ಕೊಪ್ಪಲು ಗ್ರಾಮದ ಮೊಗಣ್ಣೇಗೌಡ (65) ಬ್ರೈನ್ ಸ್ಟ್ರೋಕ್‌ಗೆ ಒಳಗಾಗಿದ್ದರು. ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮೆದುಳು ನಿಷ್ಕ್ರೀಯಗೊಂಡಿದ್ದನ್ನು ವೈದ್ಯರು ದೃಢಪಡಿಸಿದ್ದರು.  ಇನ್ನು ತಂದೆ ಜೀವಂತವಾಗಿ ಉಳಿಯುವುದಿಲ್ಲ ಎಂಬುದನ್ನು ಮನಗಂಡ ಪುತ್ರರು ಡಾ.ವಾಸನ್ ಅವರ ಸಲಹೆ ಮೇರೆಗೆ ತಮ್ಮ ತಂದೆಯ ಅಂಗಾಂಗ ದಾನಕ್ಕೆ ಒಪ್ಪಿಗೆ ಸೂಚಿಸಿದ್ದಾರೆ.

ಕುಟುಂಬಸ್ಥರು ಅಂಗಾಂಗ ದಾನಕ್ಕೆ ಒಪ್ಪಿಗೆ ನೀಡುತ್ತಿದ್ದಂತೆೆ ಮೈಸೂರು ಜೆಎಸ್‌ಎಸ್ ಆಸ್ಪತ್ರೆಯ ವೈದ್ಯರಾದ ಡಾ.ವಾಸನ್ ಅವರು ಪರಿಶೀಲಿಸಿ ಮೊಗಣ್ಣೆಗೌಡ ದೇಹದಿಂದ ಲಿವರ್, ಎರಡು ಕಿಡ್ನಿ, ಹೃದುಂ, ಚರ್ಮ, ಕಣ್ಣುಗಳನ್ನು ತೆಗೆದು ಬೇರೆಯವರಿಗೆ ಹಾಕಬಹುದು ಎಂದು ತಿಳಿಸಿದ್ದಾರೆ.

ಮೃತ ಮೊಗಣ್ಣೇಗೌಡರ ಅಂತ್ಯಸಂಸ್ಕಾರವು ಸ್ವಗ್ರಾಮದಲ್ಲಿ ಅ.28 (ಇಂದು) ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

andolana

Recent Posts

ಬೆಂಗಳೂರು ಏರ್‌ಪೋರ್ಟ್‌ನಲ್ಲಿ 23.8 ಕೋಟಿ ಮೌಲ್ಯದ ಕೊಕೇನ್‌ ಜಪ್ತಿ

ಬೆಂಗಳೂರು: ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 23.8 ಕೋಟಿ ರೂ ಮೌಲ್ಯದ ಕೊಕೇನ್‌ ಸೀಜ್‌ ಮಾಡಲಾಗಿದೆ. ಎನ್‌ಸಿಬಿ ಅಧಿಕಾರಿಗಳು…

36 mins ago

ನಾಳೆ ರಾಕಿಂಗ್‌ ಸ್ಟಾರ್‌ ಯಶ್‌ ಅಭಿನಯದ ಟಾಕ್ಸಿಕ್‌ ಚಿತ್ರದ 2ನೇ ಟೀಸರ್‌ ರಿಲೀಸ್‌

ಬೆಂಗಳೂರು: ಕೆಜಿಎಫ್‌-2 ಯಶಸ್ಸಿನ ನಂತರ ಇಡೀ ದೇಶದ ಕಾತುರದಿಂದ ಕಾಯುತ್ತಿರುವ ಸಿನಿಮಾ ಎಂದರೆ ಅದು ರಾಕಿಂಗ್‌ ಸ್ಟಾರ್‌ ಯಶ್‌ ಅಭಿನಯದ…

2 hours ago

ದಲಿತರು ಯಾಕೆ ಮುಖ್ಯಮಂತ್ರಿಯಾಗಬಾರದು?: ಮಾಜಿ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಅಧಿಕಾರ ಹಸ್ತಾಂತರ ಚರ್ಚೆ ನಡುವೆಯೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮತ್ತೆ ದಲಿತ ಸಿಎಂ ವಿಚಾರ ಪ್ರಸ್ತಾಪಿಸಿದ್ದಾರೆ.…

3 hours ago

ವಾಲ್ಮೀಕಿ ಪ್ರಸನ್ನಾನಂದ ಪುರಿ ಸ್ವಾಮೀಜಿಗೆ ಲಘು ಹೃದಯಾಘಾತ: ಆಸ್ಪತ್ರೆಗೆ ದಾಖಲು

ರಾಯಚೂರು: ರಾಯಚೂರು ಪ್ರವಾಸದಲ್ಲಿದ್ದ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಜಗದ್ಗುರು ಡಾ.ವಾಲ್ಮೀಕಿ ಪ್ರಸನ್ನಾನಂದ ಪುರಿ ಸ್ವಾಮೀಜಿಗೆ ಲಘು ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.…

3 hours ago

ನಾಗರಹೊಳೆ, ಬಂಡೀಪುರದಲ್ಲಿ ಸಫಾರಿಗೆ ಗ್ರೀನ್‌ಸಿಗ್ನಲ್:‌ ಅನ್ನದಾತರ ಆಕ್ರೋಶ

ಚಾಮರಾಜನಗರ: ಕಳೆದ ಮೂರು ತಿಂಗಳಿನಿಂದಲೂ ಬಂದ್‌ ಆಗಿದ್ದ ನಾಗರಹೊಳೆ ಹಾಗೂ ಬಂಡೀಪುರ ಸಫಾರಿ ಆರಂಭಕ್ಕೆ ಸರ್ಕಾರ ಗ್ರೀನ್‌ ಸಿಗ್ನಲ್‌ ನೀಡಿದೆ.…

3 hours ago

ಫ್ಯಾಕ್ಟರಿ ಕೆಲಸಕ್ಕೆ ಹೋಗಿದ್ದ ಯುವಕ ಅನುಮಾನಾಸ್ಪದ ಸಾವು

ಹಾಸನ: ಫ್ಯಾಕ್ಟರಿ ಕೆಲಸಕ್ಕೆ ಹೋಗಿದ್ದ ಯುವಕ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಹೊರವಲಯದ ಹನುಮಂತಪುರ ಬಳಿ ನಡೆದಿದೆ. 27 ವರ್ಷ…

3 hours ago