ಕೆ.ಆರ್.ಪೇಟೆ : ತಂದೆಯ ಸಾವಿನ ಆಘಾತದಲ್ಲಿಯೂ ಕುಟುಂಬದವರು ದಿಟ್ಟ ನಿರ್ಧಾರ ಕೈಗೊಂಡು ಅಂಗಾಂಗ ದಾನ ಮಾಡಲು ಒಪ್ಪಿಗೆ ನೀಡುವ ಮೂಲಕ ಮಾದರಿಯಾಗಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ.
ಬೂಕನಕರೆ ಹೋಬಳಿಯ ಗಂಜಿಗೆರೆ ಕೊಪ್ಪಲು ಗ್ರಾಮದ ಮೊಗಣ್ಣೇಗೌಡ (65) ಬ್ರೈನ್ ಸ್ಟ್ರೋಕ್ಗೆ ಒಳಗಾಗಿದ್ದರು. ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮೆದುಳು ನಿಷ್ಕ್ರೀಯಗೊಂಡಿದ್ದನ್ನು ವೈದ್ಯರು ದೃಢಪಡಿಸಿದ್ದರು. ಇನ್ನು ತಂದೆ ಜೀವಂತವಾಗಿ ಉಳಿಯುವುದಿಲ್ಲ ಎಂಬುದನ್ನು ಮನಗಂಡ ಪುತ್ರರು ಡಾ.ವಾಸನ್ ಅವರ ಸಲಹೆ ಮೇರೆಗೆ ತಮ್ಮ ತಂದೆಯ ಅಂಗಾಂಗ ದಾನಕ್ಕೆ ಒಪ್ಪಿಗೆ ಸೂಚಿಸಿದ್ದಾರೆ.
ಕುಟುಂಬಸ್ಥರು ಅಂಗಾಂಗ ದಾನಕ್ಕೆ ಒಪ್ಪಿಗೆ ನೀಡುತ್ತಿದ್ದಂತೆೆ ಮೈಸೂರು ಜೆಎಸ್ಎಸ್ ಆಸ್ಪತ್ರೆಯ ವೈದ್ಯರಾದ ಡಾ.ವಾಸನ್ ಅವರು ಪರಿಶೀಲಿಸಿ ಮೊಗಣ್ಣೆಗೌಡ ದೇಹದಿಂದ ಲಿವರ್, ಎರಡು ಕಿಡ್ನಿ, ಹೃದುಂ, ಚರ್ಮ, ಕಣ್ಣುಗಳನ್ನು ತೆಗೆದು ಬೇರೆಯವರಿಗೆ ಹಾಕಬಹುದು ಎಂದು ತಿಳಿಸಿದ್ದಾರೆ.
ಮೃತ ಮೊಗಣ್ಣೇಗೌಡರ ಅಂತ್ಯಸಂಸ್ಕಾರವು ಸ್ವಗ್ರಾಮದಲ್ಲಿ ಅ.28 (ಇಂದು) ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ…
ಎಚ್.ಹಾಲಪ್ಪ ಅಸಮಾನತೆ, ಶೋಷಣೆ, ಅಂಧಶ್ರದ್ಧೆ ವಿರುದ್ಧ ವಚನ ರಚಿಸಿದ ಹಡಪದ ಅಪ್ಪಣ್ಣ ಜಯಂತಿ ಇಂದು ೧೨ನೇ ಶತಮಾನದ ವಚನ ಚಳವಳಿ…
ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಜುಲೈ ೨೯ರಂದು ವಿಶ್ವ ಹುಲಿ ದಿನವನ್ನು ಆಚರಿಸುವಾಗ, ಭಾರತದ ಹುಲಿ ಸಂರಕ್ಷಣೆಯ ಯಶಸ್ಸನ್ನು ನಾವು…
‘ಸಪೋರ್ಟ್ ಅವರ್ ಹೀರೋಸ್’ ಸರ್ಕಾರೇತರ ಸಂಸ್ಥೆ ಸ್ಥಾಪನೆ ೩೬ವರ್ಷ ಪ್ರಾಯದ ಗೌರವ್ ಶುಕ್ಲಾ(ಕುಳಿತವರಲ್ಲಿ ಎಡ ಬದಿ)ರ ತಂದೆ ೨೮ ವರ್ಷಗಳ…
ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ಮಲ್ಲಳ್ಳಿ ಜಲಪಾತದಲ್ಲಿ ಬಹುನಿರೀಕ್ಷಿತ ರೋಪ್ವೇ ಯೋಜನೆಗೆ ವೇಗ ದೊರೆತಿದೆ.…
ಕೆ.ಬಿ.ರಮೇಶನಾಯಕ ಮೈಸೂರು: ಹಲವು ರೋಗಗಳಿಗೆ ರಾಮಬಾಣವಾದ ಹಾಗೂ ಆರೋಗ್ಯಕ್ಕೆ ಹಿತಕರ ಎನ್ನಲಾಗಿರುವ ಮೀನು ಆಹಾರವನ್ನು ಜನಸಾಮಾನ್ಯರಿಗೆ ಸುಲಭವಾಗಿ ದೊರೆಯುವಂತೆ ಮಾಡಲು…