ಮಂಡ್ಯ

ಅವೈಜ್ಞಾನಿಕ ಹೆದ್ದಾರಿ ಕಾಮಗಾರಿ ಸರಿಪಡಿಸಲು ಸಂಘಟನೆಗಳ ಆಗ್ರಹ

ಮಂಡ್ಯ : ನಗರದ ಹೊರವಲಯದ ಅಮರಾವತಿ ಹೋಟೆಲ್‌ನಿಂದ ಜ್ಯೋತಿ ಇಂಟರ್ ನ್ಯಾಶನಲ್ ಹೋಟೆಲ್‌ವರೆಗೆ ನಡೆಯುತ್ತಿರುವ ಬೆಂಗಳೂರು-ಮೈಸೂರು ಹೆದ್ದಾರಿ ಕಾಮಗಾರಿ ಅವೈಜ್ಞಾನಿಕವಾಗಿದೆ ಎಂದು ಕನ್ನಡಪರ ಸಂಘಟನೆಗಳು ಆಕ್ಷೇಪಿಸಿದ ಹಿನ್ನೆಲೆಯಲ್ಲಿ ರಾಷ್ಟೀಯ ಹೆದ್ದಾರಿ ಅಽಕಾರಿಯೊಂದಿಗೆ ಸಂಘಟನೆಗಳ ಮುಖಂಡರು ಶುಕ್ರವಾರ ಕಾಮಗಾರಿ ಪರಿವೀಕ್ಷಣೆ ನಡೆಸಿದರು.

ರಾಷ್ಟ್ರೀಯ ಹೆದ್ದಾರಿ ಸಹಾಯಕ ಅಭಿಯಂತರ ಶಿವಕುಮಾರ್ ಅವರೊಂದಿಗೆ ಸಂಚರಿಸಿ ಕಾಮಗಾರಿಯಲ್ಲಿನ ಲೋಪಗಳನ್ನು ಅವರ ಗಮನಕ್ಕೆ ತರಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕರುನಾಡ ಸೇವಕರು ಸಂಘಟನೆಯ ರಾಜ್ಯ ವಕ್ತಾರ ಎಂ.ಬಿ.ನಾಗಣ್ಣಗೌಡ. ಡಿಸೆಂಬರ್ ೨೦೨೪ಕ್ಕೆ ಪೂರ್ಣಗೊಳ್ಳಬೇಕಾದ ಕಾಮಗಾರಿ ಡಿಸೆಂಬರ್ ೨೦೨೫ ಸಮೀಪಿಸಿದ್ದರೂ ಅಪೂರ್ಣವಾಗಿದೆ. ರಾಷ್ಟ್ರೀಯ ಹೆದ್ದಾರಿ ಮಧ್ಯ ಭಾಗದಿಂದ ಇಕ್ಕೆಲಗಳಲ್ಲಿ ೬೦ ಅಡಿ ಅಂತರದವರೆಗೆ ಯಾವುದೇ ಕಟ್ಟಡ ನಿರ್ಮಾಣಕ್ಕೆ ಅವಕಾಶವಿಲ್ಲ. ಆದರೆ ಮಂಡ್ಯ ನಗರದಲ್ಲಿ ಒತ್ತುವರಿ ತೆರವುಗೊಳಿಸದೆ ಮನಸೋಇಚ್ಚೆ ಪಾದಾಚಾರಿ ಮಾರ್ಗ ನಿರ್ಮಿಸಲಾಗುತ್ತಿದೆ ಎಂದು ದೂರಿದರು.

ನಂದಾ ವೃತ್ತದಿಂದ ಮಹಾವೀರ ವೃತ್ತದವರೆಗೆ ಪಾದಾಚಾರಿ ಮಾರ್ಗದ ಅಪೂರ್ಣ ಕಾಮಗಾರಿಯಿಂದ ಸಾರ್ವಜನಿಕರು ಅಪಘಾತಕೀಡಾಗಿ ಪೆಟ್ಟುಗಳಾಗಿವೆ. ಈ ಪ್ರದೇಶವು ಬ್ಯಾಂಕ್ ಸೇರಿದಂತೆ ಪ್ರಮುಖ ವಾಣಿಜ್ಯ ಕೇಂದ್ರವಾಗಿದ್ದು, ಸಾವಿರಾರು ವಿದ್ಯಾರ್ಥಿಗಳು ಈ ಮಾರ್ಗವನ್ನು ಬಳಸುತ್ತಾರೆ. ನಿಯಮಾನುಸಾರ ಪಾದಾಚಾರಿ ಮಾರ್ಗ ನಿರ್ಮಿಸದೆ ಅವೈಜ್ಞಾನಿಕವಾಗಿ ಕಾಮಗಾರಿ ನಡೆಸಲಾಗುತ್ತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಮಹಾವೀರ ವೃತ್ತದಲ್ಲಿ ಮರಗಳನ್ನು ಕಡಿದು ರಸ್ತೆ ವಿಸ್ತರಿಸುವ ಬದಲು ಮರಗಳನ್ನು ಉಳಿಸಿಕೊಂಡು ರಸ್ತೆ ವಿಸ್ತರಿಸುವಂತೆ ಒತ್ತಾಯಿಸಿದರು.

ಇದನ್ನೂ ಓದಿ:-ಪೊಲೀಸ್ ಇಲಾಖೆ ಲಂಚ ಸಾಬೀತಾದರೆ ಸೇವೆಯಿಂದ ವಜಾ : ಗೃಹ ಸಚಿವ ಪರಮೇಶ್ವರ್‌

ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಎಚ್.ಡಿ. ಜಯರಾಂ, ಹೆದ್ದಾರಿಯ ಅತಿಕ್ರಮಣಕ್ಕೆ ಹೆದ್ದಾರಿ ಪ್ರಾಧಿಕಾರವೇ ಅವಕಾಶ ಕೊಟ್ಟಿದೆ. ನಗರದ ಆಯ್ದ ವೃತ್ತಗಳಲ್ಲಿ ಪ್ರಾಽಕಾರದಿಂದ ರಸ್ತೆ ಅತಿಕ್ರಮಿಸದಂತೆ ಎಚ್ಚರಿಕೆ ಫಲಕ ಅಳವಡಿಸಬೇಕು. ಶೀಘ್ರವಾಗಿ ಕಾಮಗಾರಿ ಮುಗಿಸದಿದ್ದಲ್ಲಿ ಹೆದ್ದಾರಿ ಕಚೇರಿ ಎದುರು ಹೋರಾಟ ನಡೆಸುವುದಾಗಿ ಎಚ್ಚರಿಸಿದರು.

ನಗರ ವ್ಯಾಪ್ತಿಯಲ್ಲಿ ಈ ಹಿಂದೆ ಹೆದ್ದಾರಿ ಅತಿಕ್ರಮಣವನ್ನು ನಗರಸಭೆ ತೆರವುಗೊಳಿಸಿತ್ತು. ಆದರೆ, ಮರಳಿ ಕೆಲವರು ಹೆದ್ದಾರಿ ಅತಿಕ್ರಮಿಸಿ ಕಟ್ಟಡಗಳನ್ನು ನಿರ್ಮಿಸಿ ಸಾರ್ವಜನಿಕರ ಮುಕ್ತ ಸಂಚಾರಕ್ಕೆ ಅಡ್ಡಿಯುಂಟು ಮಾಡುತ್ತಿದ್ದಾರೆ. ನಗರಸಭೆ ಮತ್ತು ಹೆದ್ದಾರಿ ಪ್ರಾಽಕಾರ ಜಂಟಿಯಾಗಿ ಹೆದ್ದಾರಿ ಅತಿಕ್ರಮಣದ ತೆರವಿಗೆ ಮುಂದಾಗಬೇಕು ಎಂದು ಆಗ್ರಹಿಸಿದರು.

ಸಮೀಕ್ಷೇಯ ನಂತರ ಪಾದಾಚಾರಿ ಮಾರ್ಗದ ನಿರ್ಮಾಣದಲ್ಲಿ ಕೆಲವು ಲೋಪಗಳಾಗಿವೆ. ಇವೆಲ್ಲವನ್ನು ಸರಿಪಡಿಸಿ ಮುಂದಿನ ಒಂದು ತಿಂಗಳೊಳಗೆ ಕಾಮಗಾರಿ ಪೂರ್ಣಗೊಳಿಸುವುದಾಗಿ ಹಾಗೂ ಹೆದ್ದಾರಿ ಅತಿಕ್ರಮಣವನ್ನು ತೆರವುಗೊಳಿಸಲು ಅಗತ್ಯ ಕ್ರಮವಹಿಸುವುದಾಗಿ ಪ್ರಾಽಕಾರದ ಅಽಕಾರಿ ಶಿವಕುಮಾರ್ ಭರವಸೆ ನೀಡಿದರು.

ಈ ಸಂಧರ್ಭದಲ್ಲಿ ರಕ್ಷಣಾ ವೇದಿಕೆಯ ಆಟೋ ಘಟಕದ ವೆಂಕಟೇಶ್, ಮುದ್ದೇಗೌಡ, ಕುಮಾರ್ ಕನ್ನಡಿಗ, ಶಿವರಾಂ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

20 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

20 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

20 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

20 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

20 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

20 hours ago