ಮಂಡ್ಯ

ಅವೈಜ್ಞಾನಿಕ ಹೆದ್ದಾರಿ ಕಾಮಗಾರಿ ಸರಿಪಡಿಸಲು ಸಂಘಟನೆಗಳ ಆಗ್ರಹ

ಮಂಡ್ಯ : ನಗರದ ಹೊರವಲಯದ ಅಮರಾವತಿ ಹೋಟೆಲ್‌ನಿಂದ ಜ್ಯೋತಿ ಇಂಟರ್ ನ್ಯಾಶನಲ್ ಹೋಟೆಲ್‌ವರೆಗೆ ನಡೆಯುತ್ತಿರುವ ಬೆಂಗಳೂರು-ಮೈಸೂರು ಹೆದ್ದಾರಿ ಕಾಮಗಾರಿ ಅವೈಜ್ಞಾನಿಕವಾಗಿದೆ ಎಂದು ಕನ್ನಡಪರ ಸಂಘಟನೆಗಳು ಆಕ್ಷೇಪಿಸಿದ ಹಿನ್ನೆಲೆಯಲ್ಲಿ ರಾಷ್ಟೀಯ ಹೆದ್ದಾರಿ ಅಽಕಾರಿಯೊಂದಿಗೆ ಸಂಘಟನೆಗಳ ಮುಖಂಡರು ಶುಕ್ರವಾರ ಕಾಮಗಾರಿ ಪರಿವೀಕ್ಷಣೆ ನಡೆಸಿದರು.

ರಾಷ್ಟ್ರೀಯ ಹೆದ್ದಾರಿ ಸಹಾಯಕ ಅಭಿಯಂತರ ಶಿವಕುಮಾರ್ ಅವರೊಂದಿಗೆ ಸಂಚರಿಸಿ ಕಾಮಗಾರಿಯಲ್ಲಿನ ಲೋಪಗಳನ್ನು ಅವರ ಗಮನಕ್ಕೆ ತರಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕರುನಾಡ ಸೇವಕರು ಸಂಘಟನೆಯ ರಾಜ್ಯ ವಕ್ತಾರ ಎಂ.ಬಿ.ನಾಗಣ್ಣಗೌಡ. ಡಿಸೆಂಬರ್ ೨೦೨೪ಕ್ಕೆ ಪೂರ್ಣಗೊಳ್ಳಬೇಕಾದ ಕಾಮಗಾರಿ ಡಿಸೆಂಬರ್ ೨೦೨೫ ಸಮೀಪಿಸಿದ್ದರೂ ಅಪೂರ್ಣವಾಗಿದೆ. ರಾಷ್ಟ್ರೀಯ ಹೆದ್ದಾರಿ ಮಧ್ಯ ಭಾಗದಿಂದ ಇಕ್ಕೆಲಗಳಲ್ಲಿ ೬೦ ಅಡಿ ಅಂತರದವರೆಗೆ ಯಾವುದೇ ಕಟ್ಟಡ ನಿರ್ಮಾಣಕ್ಕೆ ಅವಕಾಶವಿಲ್ಲ. ಆದರೆ ಮಂಡ್ಯ ನಗರದಲ್ಲಿ ಒತ್ತುವರಿ ತೆರವುಗೊಳಿಸದೆ ಮನಸೋಇಚ್ಚೆ ಪಾದಾಚಾರಿ ಮಾರ್ಗ ನಿರ್ಮಿಸಲಾಗುತ್ತಿದೆ ಎಂದು ದೂರಿದರು.

ನಂದಾ ವೃತ್ತದಿಂದ ಮಹಾವೀರ ವೃತ್ತದವರೆಗೆ ಪಾದಾಚಾರಿ ಮಾರ್ಗದ ಅಪೂರ್ಣ ಕಾಮಗಾರಿಯಿಂದ ಸಾರ್ವಜನಿಕರು ಅಪಘಾತಕೀಡಾಗಿ ಪೆಟ್ಟುಗಳಾಗಿವೆ. ಈ ಪ್ರದೇಶವು ಬ್ಯಾಂಕ್ ಸೇರಿದಂತೆ ಪ್ರಮುಖ ವಾಣಿಜ್ಯ ಕೇಂದ್ರವಾಗಿದ್ದು, ಸಾವಿರಾರು ವಿದ್ಯಾರ್ಥಿಗಳು ಈ ಮಾರ್ಗವನ್ನು ಬಳಸುತ್ತಾರೆ. ನಿಯಮಾನುಸಾರ ಪಾದಾಚಾರಿ ಮಾರ್ಗ ನಿರ್ಮಿಸದೆ ಅವೈಜ್ಞಾನಿಕವಾಗಿ ಕಾಮಗಾರಿ ನಡೆಸಲಾಗುತ್ತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಮಹಾವೀರ ವೃತ್ತದಲ್ಲಿ ಮರಗಳನ್ನು ಕಡಿದು ರಸ್ತೆ ವಿಸ್ತರಿಸುವ ಬದಲು ಮರಗಳನ್ನು ಉಳಿಸಿಕೊಂಡು ರಸ್ತೆ ವಿಸ್ತರಿಸುವಂತೆ ಒತ್ತಾಯಿಸಿದರು.

ಇದನ್ನೂ ಓದಿ:-ಪೊಲೀಸ್ ಇಲಾಖೆ ಲಂಚ ಸಾಬೀತಾದರೆ ಸೇವೆಯಿಂದ ವಜಾ : ಗೃಹ ಸಚಿವ ಪರಮೇಶ್ವರ್‌

ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಎಚ್.ಡಿ. ಜಯರಾಂ, ಹೆದ್ದಾರಿಯ ಅತಿಕ್ರಮಣಕ್ಕೆ ಹೆದ್ದಾರಿ ಪ್ರಾಧಿಕಾರವೇ ಅವಕಾಶ ಕೊಟ್ಟಿದೆ. ನಗರದ ಆಯ್ದ ವೃತ್ತಗಳಲ್ಲಿ ಪ್ರಾಽಕಾರದಿಂದ ರಸ್ತೆ ಅತಿಕ್ರಮಿಸದಂತೆ ಎಚ್ಚರಿಕೆ ಫಲಕ ಅಳವಡಿಸಬೇಕು. ಶೀಘ್ರವಾಗಿ ಕಾಮಗಾರಿ ಮುಗಿಸದಿದ್ದಲ್ಲಿ ಹೆದ್ದಾರಿ ಕಚೇರಿ ಎದುರು ಹೋರಾಟ ನಡೆಸುವುದಾಗಿ ಎಚ್ಚರಿಸಿದರು.

ನಗರ ವ್ಯಾಪ್ತಿಯಲ್ಲಿ ಈ ಹಿಂದೆ ಹೆದ್ದಾರಿ ಅತಿಕ್ರಮಣವನ್ನು ನಗರಸಭೆ ತೆರವುಗೊಳಿಸಿತ್ತು. ಆದರೆ, ಮರಳಿ ಕೆಲವರು ಹೆದ್ದಾರಿ ಅತಿಕ್ರಮಿಸಿ ಕಟ್ಟಡಗಳನ್ನು ನಿರ್ಮಿಸಿ ಸಾರ್ವಜನಿಕರ ಮುಕ್ತ ಸಂಚಾರಕ್ಕೆ ಅಡ್ಡಿಯುಂಟು ಮಾಡುತ್ತಿದ್ದಾರೆ. ನಗರಸಭೆ ಮತ್ತು ಹೆದ್ದಾರಿ ಪ್ರಾಽಕಾರ ಜಂಟಿಯಾಗಿ ಹೆದ್ದಾರಿ ಅತಿಕ್ರಮಣದ ತೆರವಿಗೆ ಮುಂದಾಗಬೇಕು ಎಂದು ಆಗ್ರಹಿಸಿದರು.

ಸಮೀಕ್ಷೇಯ ನಂತರ ಪಾದಾಚಾರಿ ಮಾರ್ಗದ ನಿರ್ಮಾಣದಲ್ಲಿ ಕೆಲವು ಲೋಪಗಳಾಗಿವೆ. ಇವೆಲ್ಲವನ್ನು ಸರಿಪಡಿಸಿ ಮುಂದಿನ ಒಂದು ತಿಂಗಳೊಳಗೆ ಕಾಮಗಾರಿ ಪೂರ್ಣಗೊಳಿಸುವುದಾಗಿ ಹಾಗೂ ಹೆದ್ದಾರಿ ಅತಿಕ್ರಮಣವನ್ನು ತೆರವುಗೊಳಿಸಲು ಅಗತ್ಯ ಕ್ರಮವಹಿಸುವುದಾಗಿ ಪ್ರಾಽಕಾರದ ಅಽಕಾರಿ ಶಿವಕುಮಾರ್ ಭರವಸೆ ನೀಡಿದರು.

ಈ ಸಂಧರ್ಭದಲ್ಲಿ ರಕ್ಷಣಾ ವೇದಿಕೆಯ ಆಟೋ ಘಟಕದ ವೆಂಕಟೇಶ್, ಮುದ್ದೇಗೌಡ, ಕುಮಾರ್ ಕನ್ನಡಿಗ, ಶಿವರಾಂ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಎರಡೇ ವರ್ಷಕ್ಕೆ ಬ್ರಿಟನ್‌ ಪ್ರಧಾನಿ ಕೀರ್‌ ಸ್ಟಾರ್ಮರ್‌ ರಾಜೀನಾಮೆ

ಲಂಡನ್:‌ ನಿರೀಕ್ಷೆಯಂತೆ ಬ್ರಿಟನ್‌ ಪ್ರಧಾನಿ ಕೀರ್‌ ಸ್ಟಾರ್ಮರ್‌ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆಡಳಿತಾರೂಢ ಲೇಬರ್‌ ಪಕ್ಷದೊಳಗೆ…

40 mins ago

ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಟಿ.ನರಸೀಪುರ: ಡೆತ್‌ನೋಟ್‌ ಬರೆದಿಟ್ಟು ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ಹಳೇಕೆಂಪಯ್ಯನಹುಂಡಿ ಗ್ರಾಮದಲ್ಲಿ…

1 hour ago

ಬಿಇಒಗಳು ಪ್ರಯಾಣಿಸುತ್ತಿದ್ದ ಕಾರು ಅಪಘಾತ : ಓರ್ವ ಸಾವು, ಹಲವರು ಗಂಭೀರ

ಮದ್ದೂರು : ಮೈಸೂರು ಜಿಲ್ಲೆಯ ಬ್ಲಾಕ್ ಶಿಕ್ಷಣಾಧಿಕಾರಿಗಳು (ಬಿಇಒ) ಪ್ರಯಾಣಿಸುತ್ತಿದ್ದ ವಾಹನ ಅಪಘಾತದಲ್ಲಿ ಕಾರು ಚಾಲಕ ಮೃತಪಟ್ಟಿದ್ದಾರೆ. ಮದ್ದೂರು ಸಮೀಪದ…

2 hours ago

ಪಿರಿಯಾಪಟ್ಟಣ | ವಿಶೇಷಚೇತನರಿಗೆ ವಿತರಣೆಯಾಗದ ಸಾಧನಗಳು

ಫಲಾನುಭವಿಗಳಿಗೆ ವಿತರಿಸಲು ಶಾಸಕರ ದಿನಾಂಕ ಸಿಗದೆ ಕೊಠಡಿಯಲ್ಲಿ ತುಂಬಿ ಬೀಗ ಹಾಕಿದ ಅಧಿಕಾರಿಗಳು ಪಿರಿಯಾಪಟ್ಟಣ : ಕೇಂದ್ರ ಸರ್ಕಾರದ ಅಲಿಂಕೋ…

4 hours ago

3 ತಿಂಗಳಿಂದ ಬಾರದ ಮಾಸಾಶನ ; ಬಡಜನರು ಕಂಗಾಲು

ವೃದ್ಧರು, ವಿಧವೆಯರು, ಅಂಗವಿಕಲರಿಗೆ ಬಾರದ ಮಾಸಿಕ ಹಣ ; ಕಚೇರಿಗಳಿಗೆ ನಿತ್ಯ ಅಲೆದಾಟ ಎಚ್.ಡಿ.ಕೋಟೆ : ವೃದ್ಧರು, ವಿಧವೆಯರು, ಅಂಗವಿಕಲರೂ…

4 hours ago

ಗ್ರಾಪಂನಲ್ಲೇ ವಾಸಸ್ಥಳ ದೃಢೀಕರಣ ಪತ್ರ ; ಇನ್ನು ಹೋಬಳಿ ಕೇಂದ್ರಗಳಿಗೆ ಅಲೆಯುವಂತಿಲ್ಲ: ಸರ್ಕಾರದ ತೀರ್ಮಾನ

ಬೆಂಗಳೂರು : ಗ್ರಾಮೀಣ ಜನರಿಗೆ ರಾಜ್ಯ ಸರ್ಕಾರ ಮಹತ್ವದ ರಿಲೀಫ್ ನೀಡಿದ್ದು, ಇನ್ನು ಮುಂದೆ ವಾಸಸ್ಥಳ ದೃಢೀಕರಣ ಪತ್ರವನ್ನು ತಮ್ಮ…

5 hours ago