ಮಂಡ್ಯ

ಅವೈಜ್ಞಾನಿಕ ಹೆದ್ದಾರಿ ಕಾಮಗಾರಿ ಸರಿಪಡಿಸಲು ಸಂಘಟನೆಗಳ ಆಗ್ರಹ

ಮಂಡ್ಯ : ನಗರದ ಹೊರವಲಯದ ಅಮರಾವತಿ ಹೋಟೆಲ್‌ನಿಂದ ಜ್ಯೋತಿ ಇಂಟರ್ ನ್ಯಾಶನಲ್ ಹೋಟೆಲ್‌ವರೆಗೆ ನಡೆಯುತ್ತಿರುವ ಬೆಂಗಳೂರು-ಮೈಸೂರು ಹೆದ್ದಾರಿ ಕಾಮಗಾರಿ ಅವೈಜ್ಞಾನಿಕವಾಗಿದೆ ಎಂದು ಕನ್ನಡಪರ ಸಂಘಟನೆಗಳು ಆಕ್ಷೇಪಿಸಿದ ಹಿನ್ನೆಲೆಯಲ್ಲಿ ರಾಷ್ಟೀಯ ಹೆದ್ದಾರಿ ಅಽಕಾರಿಯೊಂದಿಗೆ ಸಂಘಟನೆಗಳ ಮುಖಂಡರು ಶುಕ್ರವಾರ ಕಾಮಗಾರಿ ಪರಿವೀಕ್ಷಣೆ ನಡೆಸಿದರು.

ರಾಷ್ಟ್ರೀಯ ಹೆದ್ದಾರಿ ಸಹಾಯಕ ಅಭಿಯಂತರ ಶಿವಕುಮಾರ್ ಅವರೊಂದಿಗೆ ಸಂಚರಿಸಿ ಕಾಮಗಾರಿಯಲ್ಲಿನ ಲೋಪಗಳನ್ನು ಅವರ ಗಮನಕ್ಕೆ ತರಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕರುನಾಡ ಸೇವಕರು ಸಂಘಟನೆಯ ರಾಜ್ಯ ವಕ್ತಾರ ಎಂ.ಬಿ.ನಾಗಣ್ಣಗೌಡ. ಡಿಸೆಂಬರ್ ೨೦೨೪ಕ್ಕೆ ಪೂರ್ಣಗೊಳ್ಳಬೇಕಾದ ಕಾಮಗಾರಿ ಡಿಸೆಂಬರ್ ೨೦೨೫ ಸಮೀಪಿಸಿದ್ದರೂ ಅಪೂರ್ಣವಾಗಿದೆ. ರಾಷ್ಟ್ರೀಯ ಹೆದ್ದಾರಿ ಮಧ್ಯ ಭಾಗದಿಂದ ಇಕ್ಕೆಲಗಳಲ್ಲಿ ೬೦ ಅಡಿ ಅಂತರದವರೆಗೆ ಯಾವುದೇ ಕಟ್ಟಡ ನಿರ್ಮಾಣಕ್ಕೆ ಅವಕಾಶವಿಲ್ಲ. ಆದರೆ ಮಂಡ್ಯ ನಗರದಲ್ಲಿ ಒತ್ತುವರಿ ತೆರವುಗೊಳಿಸದೆ ಮನಸೋಇಚ್ಚೆ ಪಾದಾಚಾರಿ ಮಾರ್ಗ ನಿರ್ಮಿಸಲಾಗುತ್ತಿದೆ ಎಂದು ದೂರಿದರು.

ನಂದಾ ವೃತ್ತದಿಂದ ಮಹಾವೀರ ವೃತ್ತದವರೆಗೆ ಪಾದಾಚಾರಿ ಮಾರ್ಗದ ಅಪೂರ್ಣ ಕಾಮಗಾರಿಯಿಂದ ಸಾರ್ವಜನಿಕರು ಅಪಘಾತಕೀಡಾಗಿ ಪೆಟ್ಟುಗಳಾಗಿವೆ. ಈ ಪ್ರದೇಶವು ಬ್ಯಾಂಕ್ ಸೇರಿದಂತೆ ಪ್ರಮುಖ ವಾಣಿಜ್ಯ ಕೇಂದ್ರವಾಗಿದ್ದು, ಸಾವಿರಾರು ವಿದ್ಯಾರ್ಥಿಗಳು ಈ ಮಾರ್ಗವನ್ನು ಬಳಸುತ್ತಾರೆ. ನಿಯಮಾನುಸಾರ ಪಾದಾಚಾರಿ ಮಾರ್ಗ ನಿರ್ಮಿಸದೆ ಅವೈಜ್ಞಾನಿಕವಾಗಿ ಕಾಮಗಾರಿ ನಡೆಸಲಾಗುತ್ತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಮಹಾವೀರ ವೃತ್ತದಲ್ಲಿ ಮರಗಳನ್ನು ಕಡಿದು ರಸ್ತೆ ವಿಸ್ತರಿಸುವ ಬದಲು ಮರಗಳನ್ನು ಉಳಿಸಿಕೊಂಡು ರಸ್ತೆ ವಿಸ್ತರಿಸುವಂತೆ ಒತ್ತಾಯಿಸಿದರು.

ಇದನ್ನೂ ಓದಿ:-ಪೊಲೀಸ್ ಇಲಾಖೆ ಲಂಚ ಸಾಬೀತಾದರೆ ಸೇವೆಯಿಂದ ವಜಾ : ಗೃಹ ಸಚಿವ ಪರಮೇಶ್ವರ್‌

ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಎಚ್.ಡಿ. ಜಯರಾಂ, ಹೆದ್ದಾರಿಯ ಅತಿಕ್ರಮಣಕ್ಕೆ ಹೆದ್ದಾರಿ ಪ್ರಾಧಿಕಾರವೇ ಅವಕಾಶ ಕೊಟ್ಟಿದೆ. ನಗರದ ಆಯ್ದ ವೃತ್ತಗಳಲ್ಲಿ ಪ್ರಾಽಕಾರದಿಂದ ರಸ್ತೆ ಅತಿಕ್ರಮಿಸದಂತೆ ಎಚ್ಚರಿಕೆ ಫಲಕ ಅಳವಡಿಸಬೇಕು. ಶೀಘ್ರವಾಗಿ ಕಾಮಗಾರಿ ಮುಗಿಸದಿದ್ದಲ್ಲಿ ಹೆದ್ದಾರಿ ಕಚೇರಿ ಎದುರು ಹೋರಾಟ ನಡೆಸುವುದಾಗಿ ಎಚ್ಚರಿಸಿದರು.

ನಗರ ವ್ಯಾಪ್ತಿಯಲ್ಲಿ ಈ ಹಿಂದೆ ಹೆದ್ದಾರಿ ಅತಿಕ್ರಮಣವನ್ನು ನಗರಸಭೆ ತೆರವುಗೊಳಿಸಿತ್ತು. ಆದರೆ, ಮರಳಿ ಕೆಲವರು ಹೆದ್ದಾರಿ ಅತಿಕ್ರಮಿಸಿ ಕಟ್ಟಡಗಳನ್ನು ನಿರ್ಮಿಸಿ ಸಾರ್ವಜನಿಕರ ಮುಕ್ತ ಸಂಚಾರಕ್ಕೆ ಅಡ್ಡಿಯುಂಟು ಮಾಡುತ್ತಿದ್ದಾರೆ. ನಗರಸಭೆ ಮತ್ತು ಹೆದ್ದಾರಿ ಪ್ರಾಽಕಾರ ಜಂಟಿಯಾಗಿ ಹೆದ್ದಾರಿ ಅತಿಕ್ರಮಣದ ತೆರವಿಗೆ ಮುಂದಾಗಬೇಕು ಎಂದು ಆಗ್ರಹಿಸಿದರು.

ಸಮೀಕ್ಷೇಯ ನಂತರ ಪಾದಾಚಾರಿ ಮಾರ್ಗದ ನಿರ್ಮಾಣದಲ್ಲಿ ಕೆಲವು ಲೋಪಗಳಾಗಿವೆ. ಇವೆಲ್ಲವನ್ನು ಸರಿಪಡಿಸಿ ಮುಂದಿನ ಒಂದು ತಿಂಗಳೊಳಗೆ ಕಾಮಗಾರಿ ಪೂರ್ಣಗೊಳಿಸುವುದಾಗಿ ಹಾಗೂ ಹೆದ್ದಾರಿ ಅತಿಕ್ರಮಣವನ್ನು ತೆರವುಗೊಳಿಸಲು ಅಗತ್ಯ ಕ್ರಮವಹಿಸುವುದಾಗಿ ಪ್ರಾಽಕಾರದ ಅಽಕಾರಿ ಶಿವಕುಮಾರ್ ಭರವಸೆ ನೀಡಿದರು.

ಈ ಸಂಧರ್ಭದಲ್ಲಿ ರಕ್ಷಣಾ ವೇದಿಕೆಯ ಆಟೋ ಘಟಕದ ವೆಂಕಟೇಶ್, ಮುದ್ದೇಗೌಡ, ಕುಮಾರ್ ಕನ್ನಡಿಗ, ಶಿವರಾಂ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಬೌರಿಂಗ್‌ ಆಸ್ಪತ್ರೆಯ ಕಾಂಪೌಂಡ್‌ ಕುಸಿದು ದುರಂತ ಪ್ರಕರಣ: ಇಬ್ಬರು ಅಧಿಕಾರಿಗಳು ಸಸ್ಪೆಂಡ್‌

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭಾರೀ ಮಳೆಗೆ ಬೌರಿಂಗ್‌ ಆಸ್ಪತ್ರೆಯ ಕಾಂಪೌಂಡ್‌ ಕುಸಿದು ಏಳು ಮಂದಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ…

60 mins ago

ಹಾಸನ ಜಿಲ್ಲೆಯಲ್ಲಿ ಸುರಿದ ಭಾರೀ ಮಳೆ: ಎಕರೆಗಟ್ಟಲೇ ಬಾಳೆ ಬೆಳೆ ನಾಶ

ಹಾಸನ: ಜಿಲ್ಲೆಯ ವಿವಿಧೆಡೆ ಬಿರುಗಾಳಿ ಸಹಿತ ಭಾರೀ ಮಳೆಗೆ ಲಕ್ಷಾಂತರ ರೂ ಮೌಲ್ಯದ ಬಾಳೆ ಬೆಳೆ ನಾಶವಾಗಿದೆ. ಅರಕಲಗೂಡು ತಾಲ್ಲೂಕಿನ…

1 hour ago

ಗಂಡು ಮಗುವಿಗೆ ಜನ್ಮ ನೀಡಿದ ಡಾಲಿ ಧನಂಜಯ್ ಪತ್ನಿ ಧನ್ಯತಾ

ಸ್ಯಾಂಡಲ್‌ವುಡ್‌ ನಟ ಡಾಲಿ ಧನಂಜಯ್‌ ಹಾಗೂ ಧನ್ಯತಾ ದಂಪತಿಗೆ ಗಂಡು ಮಗು ಜನಿಸಿದೆ. ಈ ಸಿಹಿ ಸುದ್ದಿಯನ್ನು ಡಾಲಿ ಧನಂಜಯ್‌…

2 hours ago

ನೇಪಾಳದ ರೋಲ್ಪಾದಲ್ಲಿ ಪ್ರಪಾತಕ್ಕೆ ಬಿದ್ದ ಜೀಪ್:‌ 20 ಮಂದಿ ಸಾವು

ಕಠ್ಮಂಡು: ಜೀಪ್‌ ಪ್ರಪಾತಕ್ಕೆ ಬಿದ್ದು 20 ಮಂದಿ ಸಾವನ್ನಪ್ಪಿರುವ ಘಟನೆ ನೇಪಾಳದ ರೋಲ್ಪಾದಲ್ಲಿ ನಡೆದಿದ್ದು, ಭಾರೀ ಮಳೆಯಿಂದ ರಕ್ಷಣಾ ಕಾರ್ಯಾಚರಣೆಗೆ…

6 hours ago

ಈ ತಿಂಗಳು ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ: ಅಧಿಕ ಉಷ್ಣಾಂಶ

ನವದೆಹಲಿ: ಈ ಬಾರಿ ಮೇ ತಿಂಗಳಿನಲ್ಲಿ ದೇಶದ ಹಲವೆಡೆ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ ಹಾಗೂ ಹೆಚ್ಚಿನ ಉಷ್ಣಾಂಶ ದಾಖಲಾಗಲಿದೆ ಎಂದು…

6 hours ago

ಪಾಕಿಸ್ತಾನದಲ್ಲಿ ಮತ್ತೊಬ್ಬ ಉಗ್ರ ನಿಗೂಢ ಸಾವು

ಇಸ್ಲಾಮಾಬಾದ್:‌ ನಿಷೇಧಿತ ಸಂಘಟನೆ ಜೈಶ್-ಎ-ಮೊಹಮ್ಮದ್‌ನ ಉನ್ನತ ಕಮಾಂಡರ್‌ ಪಾಕಿಸ್ತಾನದ ಬಹಾವಲ್ಪುರದಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾನೆ. ಉನ್ನತ ಉಗ್ರಗಾಮಿ ಕಾರ್ಯಕರ್ತನನ್ನು ಅಪರಿಚಿತ ವಾಹನವೊಂದು…

6 hours ago