ಮಂಡ್ಯ: ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಶಾಲಾ ಕಾಲೇಜುಗಳಲ್ಲಿ ಹೆಚ್ಚಿನ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿ ಎಂದು ಜಿಲ್ಲಾಧಿಕಾರಿ ಡಾ ಕುಮಾರ ತಿಳಿಸಿದರು.
ಅವರು ಇಂದು(ಆ.5) ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಡೆಂಗ್ಯೂ ನಿಯಂತ್ರಣ ಕಾರ್ಯಕ್ರಮ ಕುರಿತು ಜಿಲ್ಲಾ ಮಟ್ಟದ ಟಾಸ್ಕ್ ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ಜುಲೈ ಮಾಹೆಯಲ್ಲಿ ಒಟ್ಟು 395 ಪ್ರಕರಣಗಳು ದಾಖಲಾಗಿವೆ. ಮಂಡ್ಯ ನಗರ – 75, ಮಂಡ್ಯ ಗ್ರಾಮಾಂತರ – 147, ಮದ್ದೂರು – 61, ಮಳವಳ್ಳಿ – 24, ಪಾಂಡವಪುರ – 19, ಶ್ರೀರಂಗಪಟ್ಟಣ – 34, ಕೆ ಆರ್ ಪೇಟೆ – 14, ನಾಗಮಂಗಲ – 21 ಪ್ರಕರಣಗಳು ದಾಖಲಾಗಿವೆ. ಜಿಲ್ಲೆಯಾದ್ಯಂತ ಸಾರ್ವಜನಿಕರು ಡೆಂಗ್ಯೂ ಜ್ವರ ಬಾರದಂತೆ ಮುನ್ನೆಚ್ಚರಿಕ ಕ್ರಮಗಳನ್ನು ಅನುಸರಿಸಬೇಕು ಎಂದರು.
ಡೆಂಗೀ ಹಾಟ್ ಸ್ಪಾಟ್ ಗ್ರಾಮ ಎಂದು ಗುರುತಿಸಿರುವ ಪ್ರದೇಶದಲ್ಲಿ 100 ಮೀಟರ್ ಅಂತರದಲ್ಲಿ 2 ಡೆಂಗ್ಯೂ ಪ್ರಕರಣಗಳು ವರದಿಯಾದಲ್ಲಿ ಅಂತಹ ಗ್ರಾಮ/ ಪ್ರದೇಶವನ್ನು ಡೆಂಗೀ ಹಾಟ್ ಸ್ಪಾಟ್ ಎಂದು ಗುರುತಿಸಿ ಡೆಂಗ್ಯೂ ರೋಗ ನಿಯಂತ್ರಣವನ್ನು ಸಮರೋಪಾದಿಯಲ್ಲಿ ಮಾಡಲಾಗುತ್ತಿದೆ. ತ್ವರಿತ ಜ್ವರ ಸಮೀಕ್ಷೆ ಹಾಗೂ ಈಡಿಸ್ ಲಾರ್ವ ಸಮೀಕ್ಷೆ ಕಾರ್ಯವನ್ನು ನಡೆಸಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ ಮೋಹನ್ ಅವರು ತಿಳಿಸಿದರು.
ಫಿವರ್ ಕ್ಲಿನಿಕ್ ಹಾಟ್ ಸ್ಪಾಟ್ ಗ್ರಾಮಗಳಲ್ಲಿ ತಾತ್ಕಾಲಿಕ ಕ್ಲಿನಿಕ್ ತೆರೆದು ಡೆಂಗ್ಯೂ ಜ್ವರ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಡೆಂಗ್ಯೂ ಜ್ವರ ಪ್ರಕರಣಗಳಿಗೆ ರಕ್ತ ಲೇಪನ ಪರೀಕ್ಷೆ ಹಾಗೂ ಸಂಶಯಾಸ್ಪದ ಡೆಂಗೀ ಪ್ರಕರಣಗಳಿಂದ ರಕ್ತ ಮಾದರಿ ಸಂಗ್ರಹಿಸಿ ಜಿಲ್ಲಾ ಸರ್ವೆಲೆನ್ಸ್ ಲ್ಯಾಬ್ ನಲ್ಲಿ ಪರೀಕ್ಷೆಗೋಳಪಡಿಸಲಾಗುತ್ತಿದೆ. ಇದುವರೆಗೂ 6 ಫಿವರ್ ಕ್ಲಿನಿಕ್ ಕರ್ತವ್ಯ ನಿರ್ವಹಿಸುತ್ತಿದೆ ಎಂದರು.
ನೀಮ್ ಆಯಿಲ್ ವಿತರಣೆ ಹಾಟ್ ಸ್ಪಾಟ್ ವರದಿಯಾದ ಗ್ರಾಮಗಳಲ್ಲಿ ಬಿಪಿಎಲ್ ಕುಟುಂಬದವರಿಗೆ ಬೇವಿನ ಎಣ್ಣೆಯನ್ನು ವಿತರಿಸಲಾಗುತ್ತಿದೆ. ಜೊತೆಗೆ ಜಿಲ್ಲೆಯ ಎಲ್ಲಾ ಶಾಲೆ ಮತ್ತು ಹಾಸ್ಟಲ್ ವಿದ್ಯಾರ್ಥಿಗಳಿಗೆ ಡೆಂಗ್ಯೂ ನಿಯಂತ್ರಣದ ಬಗ್ಗೆ ಆರೋಗ್ಯ ಶಿಕ್ಷಣ ನೀಡಿ ಅರಿವು ಮೂಡಿಸಿ ಬೇವಿನ ಎಣ್ಣೆಯನ್ನು ವಿತರಿಸಲಾಗುತ್ತಿದೆ. ಇದುವರೆಗೂ 50 ಎಂ ಎಲ್ ನ 4903 ಬಾಟಲಿಗಳನ್ನು ವಿತರಿಸಲಾಗಿದೆ ಎಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶೇಕ್ ತನ್ವಿರ್ ಆಸೀಫ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ತುಷಾರಮಣಿ, ನಿವೃತ್ತ ಡಿ ಹೆಚ್ ಒ ಡಾ ಮರೀಗೌಡ, ಮಲೇರಿಯಾ ನಿಯಂತ್ರಣಾಧಿಕಾರಿ ಡಾ ಕಾಂತಾರಾಜು, ಶಿಕ್ಷಣಾಧಿಕಾರಿ ಚಂದ್ರಕಾಂತ, ಮಿಮ್ಸ್ ವೈದ್ಯರಾದ ಡಾ ಹರೀಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ ಅಂತ ಚಿನ್ನ ಬೆಳ್ಳಿ! ಬೆಲೆ ಎಷ್ಟಾದರೂ ನಾವು ಬಗ್ಗೋದೇ ಇಲ್ಲ ಅಂತ ಕೆಲ ಗ್ರಾಹಕರು…
ವಿದೇಶಿ ನೆಲದಲ್ಲಿ ದೇಶವನ್ನು ಟೀಕಿಸುವುದಿಲ್ಲ ಎಂಬ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ನಿಲುವು ಸ್ವಾಗತಾರ್ಹವಾಗಿದೆ. ಗಣರಾಜ್ಯೋತ್ಸವದ ಸಂದರ್ಭದಲ್ಲೇ ಅವರು…
ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಬಾಂಗ್ಲಾ ದೇಶಕ್ಕೆ ೧೯೭೨ ರಲ್ಲಿ ಪಾಕಿಸ್ತಾನದಿಂದ ಬೇರ್ಪಡಿಸಿ…
ದಕ್ಷಿಣ ಕಾಶಿ ಎಂದೇ ಹೆಸರುವಾಸಿಯಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ಪ್ರತಿನಿತ್ಯ ಸಾವಿರಾರು ಭಕ್ತಾದಿಗಳು ಆಗಮಿಸುತ್ತಾರೆ. ಆದರೆ ಕೆಲವು ಆಟೋ ಚಾಲಕರು…
ಏಷ್ಯಾದ ಪ್ರಪ್ರಥಮ ಎದೆಹಾಲಿನ ಬ್ಯಾಂಕನ್ನು ಆರಂಭಿಸಿದ ಕೀರ್ತಿ ಕರ್ನಾಟಕದಲ್ಲಿ ಹುಟ್ಟಿದ, ಗೋವಾ ಮೂಲದ, ಈಗ ಮುಂಬೈಯಲ್ಲಿ ತನ್ನ ಸಾಮಾಜಿಕ ಕಾರ್ಯಗಳನ್ನು…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಪ್ರತಿ ವರ್ಷದಂತೆ ಈ ವರ್ಷವೂ ಸಹ…