ಮಂಡ್ಯ

ಡೆಂಗ್ಯೂ ಜ್ವರದ ಬಗ್ಗೆ ಶಾಲಾ ಕಾಲೇಜುಗಳಲ್ಲಿ ಹೆಚ್ಚಿನ ಜಾಗೃತಿ ಕಾರ್ಯಕ್ರಮ ಆಯೋಜಿಸಿ: ಡಾ ಕುಮಾರ

ಮಂಡ್ಯ: ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಶಾಲಾ ಕಾಲೇಜುಗಳಲ್ಲಿ ಹೆಚ್ಚಿನ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿ ಎಂದು ಜಿಲ್ಲಾಧಿಕಾರಿ ಡಾ ಕುಮಾರ  ತಿಳಿಸಿದರು.

ಅವರು ಇಂದು(ಆ.5) ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಡೆಂಗ್ಯೂ ನಿಯಂತ್ರಣ ಕಾರ್ಯಕ್ರಮ ಕುರಿತು ಜಿಲ್ಲಾ ಮಟ್ಟದ ಟಾಸ್ಕ್ ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ಜುಲೈ ಮಾಹೆಯಲ್ಲಿ ಒಟ್ಟು 395 ಪ್ರಕರಣಗಳು ದಾಖಲಾಗಿವೆ. ಮಂಡ್ಯ ನಗರ – 75, ಮಂಡ್ಯ ಗ್ರಾಮಾಂತರ – 147, ಮದ್ದೂರು – 61, ಮಳವಳ್ಳಿ – 24, ಪಾಂಡವಪುರ – 19, ಶ್ರೀರಂಗಪಟ್ಟಣ – 34, ಕೆ ಆರ್ ಪೇಟೆ – 14, ನಾಗಮಂಗಲ – 21 ಪ್ರಕರಣಗಳು ದಾಖಲಾಗಿವೆ. ಜಿಲ್ಲೆಯಾದ್ಯಂತ ಸಾರ್ವಜನಿಕರು ಡೆಂಗ್ಯೂ ಜ್ವರ ಬಾರದಂತೆ ಮುನ್ನೆಚ್ಚರಿಕ ಕ್ರಮಗಳನ್ನು ಅನುಸರಿಸಬೇಕು ಎಂದರು.

ಡೆಂಗೀ ಹಾಟ್ ಸ್ಪಾಟ್ ಗ್ರಾಮ  ಎಂದು ಗುರುತಿಸಿರುವ  ಪ್ರದೇಶದಲ್ಲಿ 100 ಮೀಟರ್ ಅಂತರದಲ್ಲಿ 2 ಡೆಂಗ್ಯೂ ಪ್ರಕರಣಗಳು ವರದಿಯಾದಲ್ಲಿ ಅಂತಹ ಗ್ರಾಮ/ ಪ್ರದೇಶವನ್ನು ಡೆಂಗೀ ಹಾಟ್ ಸ್ಪಾಟ್ ಎಂದು ಗುರುತಿಸಿ ಡೆಂಗ್ಯೂ ರೋಗ ನಿಯಂತ್ರಣವನ್ನು ಸಮರೋಪಾದಿಯಲ್ಲಿ ಮಾಡಲಾಗುತ್ತಿದೆ. ತ್ವರಿತ ಜ್ವರ ಸಮೀಕ್ಷೆ ಹಾಗೂ ಈಡಿಸ್ ಲಾರ್ವ ಸಮೀಕ್ಷೆ ಕಾರ್ಯವನ್ನು ನಡೆಸಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ ಮೋಹನ್ ಅವರು ತಿಳಿಸಿದರು.

ಫಿವರ್ ಕ್ಲಿನಿಕ್ ಹಾಟ್ ಸ್ಪಾಟ್ ಗ್ರಾಮಗಳಲ್ಲಿ ತಾತ್ಕಾಲಿಕ ಕ್ಲಿನಿಕ್ ತೆರೆದು ಡೆಂಗ್ಯೂ ಜ್ವರ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಡೆಂಗ್ಯೂ ಜ್ವರ ಪ್ರಕರಣಗಳಿಗೆ ರಕ್ತ ಲೇಪನ ಪರೀಕ್ಷೆ ಹಾಗೂ ಸಂಶಯಾಸ್ಪದ ಡೆಂಗೀ ಪ್ರಕರಣಗಳಿಂದ ರಕ್ತ ಮಾದರಿ ಸಂಗ್ರಹಿಸಿ ಜಿಲ್ಲಾ ಸರ್ವೆಲೆನ್ಸ್ ಲ್ಯಾಬ್ ನಲ್ಲಿ ಪರೀಕ್ಷೆಗೋಳಪಡಿಸಲಾಗುತ್ತಿದೆ. ಇದುವರೆಗೂ 6 ಫಿವರ್ ಕ್ಲಿನಿಕ್ ಕರ್ತವ್ಯ ನಿರ್ವಹಿಸುತ್ತಿದೆ ಎಂದರು.

ನೀಮ್ ಆಯಿಲ್ ವಿತರಣೆ ಹಾಟ್ ಸ್ಪಾಟ್ ವರದಿಯಾದ ಗ್ರಾಮಗಳಲ್ಲಿ ಬಿಪಿಎಲ್ ಕುಟುಂಬದವರಿಗೆ ಬೇವಿನ ಎಣ್ಣೆಯನ್ನು ವಿತರಿಸಲಾಗುತ್ತಿದೆ. ಜೊತೆಗೆ ಜಿಲ್ಲೆಯ ಎಲ್ಲಾ ಶಾಲೆ ಮತ್ತು ಹಾಸ್ಟಲ್ ವಿದ್ಯಾರ್ಥಿಗಳಿಗೆ ಡೆಂಗ್ಯೂ ನಿಯಂತ್ರಣದ ಬಗ್ಗೆ ಆರೋಗ್ಯ ಶಿಕ್ಷಣ ನೀಡಿ ಅರಿವು ಮೂಡಿಸಿ ಬೇವಿನ ಎಣ್ಣೆಯನ್ನು ವಿತರಿಸಲಾಗುತ್ತಿದೆ. ಇದುವರೆಗೂ 50 ಎಂ ಎಲ್ ನ 4903 ಬಾಟಲಿಗಳನ್ನು ವಿತರಿಸಲಾಗಿದೆ ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶೇಕ್ ತನ್ವಿರ್ ಆಸೀಫ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ತುಷಾರಮಣಿ, ನಿವೃತ್ತ ಡಿ ಹೆಚ್ ಒ ಡಾ ಮರೀಗೌಡ, ಮಲೇರಿಯಾ ನಿಯಂತ್ರಣಾಧಿಕಾರಿ ಡಾ ಕಾಂತಾರಾಜು, ಶಿಕ್ಷಣಾಧಿಕಾರಿ ಚಂದ್ರಕಾಂತ, ಮಿಮ್ಸ್ ವೈದ್ಯರಾದ ಡಾ ಹರೀಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

3 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

6 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

10 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

12 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

13 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

14 hours ago